೭ ಮಸೂದೆಗಳಿಗೆ ಅಂಗೀಕಾರ ಕೋರಿದ ಸಿದ್ದರಾಮಯ್ಯ

ನವದೆಹಲಿ, ಜೂ. ೨೪: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ರಾಷ್ಟçಪತಿ ಭವನದಲ್ಲಿ ರಾಷ್ಟçಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ರಾಜ್ಯ ಶಾಸಕಾಂಗವು ಅಂಗೀಕರಿಸಿದ ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡುವಂತೆ ಕೋರಿದರು. ರಾಷ್ಟçಪತಿಗಳ ಮುಂದೆ ಮಂಡಿಸಲಾದ ಪ್ರಮುಖ ಮಸೂದೆಗಳಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮಕ್ಕಳ ಹಕ್ಕು (ಕರ್ನಾಟಕ ತಿದ್ದುಪಡಿ) ಮಸೂದೆ, ೨೦೧೫ ಸೇರಿದ್ದು, ಇದು ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಆರ್‌ಟಿಇ ಚೌಕಟ್ಟನ್ನು ಮಾರ್ಪಡಿಸಲು ಪ್ರಯತ್ನಿಸುತ್ತದೆ. ಕರ್ನಾಟಕ (ಖನಿಜ ಹಕ್ಕುಗಳು ಮತ್ತು ಖನಿಜ ಹೊಂದಿರುವ ಭೂಮಿ) ತೆರಿಗೆ ಮಸೂದೆ, ೨೦೨೪ ತನ್ನ ಖನಿಜ ಸಂಪನ್ಮೂಲಗಳಿAದ ರಾಜ್ಯದ ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ. ೪ರಷ್ಟು ಮೀಸಲಾತಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ರೂಪಿಸಲಾಗಿರುವ 'ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಕೆಟಿಪಿಪಿ) ತಿದ್ದುಪಡಿ ಕಾಯ್ದೆ ೨೦೨೫ ಮಸೂದೆಗೆ ಅನುಮೋದನೆ ಕೇಳಲಾಗಿದೆ. ಆಡಳಿತ ಪ್ರಕ್ರಿಯೆಗಳನ್ನು ಸುಗಮಗೊಳಿಸುವತ್ತ ಗಮನಹರಿಸುವ ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ, ೨೦೨೫ ಮತ್ತು ಅದರ ಪ್ರತಿರೂಪವಾದ ನೋಟರಿಗಳು (ಕರ್ನಾಟಕ ತಿದ್ದುಪಡಿ) ಮಸೂದೆ, ೨೦೨೫ ಸಹ ಸೇರಿವೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ತಿದ್ದುಪಡಿ ಮಸೂದೆ ೨೦೨೪ಕ್ಕೆ ಕೂಡ ರಾಷ್ಟçಪತಿಗಳ ಅನುಮೋದನೆ ಬೇಕಿದೆ. ಈ ಮಸೂದೆಗಳು ರಾಜ್ಯದಲ್ಲಿ ಜಾರಿಗೆ ಬರುವ ಮೊದಲು ಕೇಂದ್ರ ಸರ್ಕಾರದ ಅನುಮೋದನೆಯನ್ನು ಕಡ್ಡಾಯಗೊಳಿಸುವ ನಿಬಂಧನೆಗಳ ಅಡಿಯಲ್ಲಿ ಬರುವುದರಿಂದ ರಾಷ್ಟçಪತಿಗಳ ಒಪ್ಪಿಗೆ ಅಗತ್ಯವಿರುತ್ತದೆ.

ಸಿಎಂ ಸಿದ್ದರಾಮಯ್ಯರಿಂದ ನಿರ್ಮಲಾ ಸೀತಾರಾಮನ್ ಭೇಟಿ

ನವದೆಹಲಿ, ಜೂ. ೨೪: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ೧೬ನೇ ಹಣಕಾಸು ಆಯೋಗದಿಂದ ರಾಜ್ಯಗಳಿಗೆ ತೆರಿಗೆ ಹಂಚಿಕೆ ಕುರಿತು ಚರ್ಚಿಸಿದರು. ಸಭೆಯಲ್ಲಿ ೧೫ನೇ ಹಣಕಾಸು ಆಯೋಗದ ಅವಧಿಯಲ್ಲಿ ಕರ್ನಾಟಕಕ್ಕೆ ಗಮನಾರ್ಹ ನಷ್ಟವಾಗಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸೀತಾರಾಮನ್ ಅವರಿಗೆ ವಿವರಿಸಿದ್ದಾರೆ. ೧೫ನೇ ಹಣಕಾಸು ಆಯೋಗವು ತನ್ನ ಶಿಫಾರಸ್ಸಿನಲ್ಲಿ ಕರ್ನಾಟಕದ ತೆರಿಗೆ ಪಾಲನ್ನು ಶೇ. ೪.೭೧೩ ರಿಂದ ಶೇ. ೩.೬೪೭ಕ್ಕೆ ಇಳಿಕೆ ಮಾಡಿದ್ದರಿಂದ ರಾಜ್ಯದ ತೆರಿಗೆ ಪಾಲು ೧೪ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ, ೧೫ನೇ ಹಣಕಾಸು ಆಯೋಗದ ಅವಧಿಯಲ್ಲಿ ಶೇ. ೨೩ರಷ್ಟು ಕಡಿಮೆಯಾಗಿದೆ ಎಂದು ಸಿಎಂ ವಿವರಿಸಿದ್ದಾರೆ. ಕರ್ನಾಟಕಕ್ಕೆ ವಿಶೇಷ ಅನುದಾನಗಳಲ್ಲೂ ರೂ. ೧೧,೪೯೫ ಕೋಟಿ ನಿರಾಕರಿಸಲಾಗಿದೆ. ವಿಶೇಷ ಅನುದಾನವು ಸಿಗದ ಕಾರಣ, ಒಟ್ಟಾರೆಯಾಗಿ ೧೫ನೇ ಹಣಕಾಸು ಆಯೋಗದ ಅವಧಿಯಲ್ಲಿ ಒಟ್ಟು ರೂ. ೮೦ ಸಾವಿರ ಕೋಟಿ ರಾಜ್ಯಕ್ಕೆ ನಷ್ಟವಾಗಿದೆ. ೧೫ನೇ ಹಣಕಾಸು ಆಯೋಗವು ರಾಜ್ಯಗಳ ನಡುವೆ ತೆರಿಗೆ ಹಂಚಿಕೆಯ ಸೂತ್ರವನ್ನು ಲೆಕ್ಕ ಮಾಡಲು ಆದಾಯ-ದೂರ ಮಾನದಂಡದ ಮೇಲೆ ಅತಿಯಾಗಿ ಅವಲಂಬಿಸಿದ ಕಾರಣ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ನಷ್ಟವಾಯಿತು ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಆದಾಯ-ದೂರ ಮಾನದಂಡವನ್ನು ಶೇ. ೨೦ ರಷ್ಟು ಕಡಿಮೆ ಮಾಡಿ ಅದನ್ನು ರಾಷ್ಟಿçÃಯ ಜಿಡಿಪಿಯಲ್ಲಿ ರಾಜ್ಯದ ಪಾಲು ಆಗಿರುವ ಹಣಕಾಸಿನ ಕೊಡುಗೆಗೆ ಮರುಹಂಚಿಕೆ ಮಾಡುವಂತೆ ಕರ್ನಾಟಕ ೧೬ನೇ ಹಣಕಾಸು ಆಯೋಗವನ್ನು ಕೋರಿದೆ. ಹಣಕಾಸು ಆಯೋಗವು ಶಿಫಾರಸ್ಸು ಮಾಡುವ ರಾಜಸ್ವ ಕೊರತೆ ಅನುದಾನಗಳನ್ನು ನಿಲ್ಲಿಸಲು ನಾವು ವಿನಂತಿಸಿದ್ದೇವೆ. ಅವು ವಿತ್ತೀಯ ಹೊಣೆಗಾರಿಕೆ ಅಧಿನಿಯಮದ ಚೌಕಟ್ಟಿನಲ್ಲಿ ಪ್ರಸ್ತಾಪಿಸಲಾದ ಆರ್ಥಿಕ ಶಿಸ್ತಿನ ತತ್ವಗಳಿಗೆ ವಿರುದ್ಧವಾಗಿವೆ. ೧೫ನೆ ಹಣಕಾಸು ಆಯೋಗವು, ಒಟ್ಟು ಕೇಂದ್ರ ಸ್ವೀಕೃತಿಗಳ ಶೇ. ೧.೯೨ರಷ್ಟನ್ನು ರಾಜಸ್ವ ಕೊರತೆ ಅನುದಾಗಳೆಂದು ಶಿಫಾರಸ್ಸು ಮಾಡಿತ್ತು. ಆದುದರಿಂದ, ಕೇಂದ್ರ ಸರಕಾರದ ಒಟ್ಟು ಸ್ವೀಕೃತಿಗಳ ಶೇ. ೧.೯೨ರಷ್ಟು ಮೊತ್ತವನ್ನು ತೆರಿಗೆ ಹಂಚಿಕೆಯ ಸೂತ್ರದ ಆಧಾರದ ಮೇಲೆ ಎಲ್ಲಾ ರಾಜ್ಯಗಳಿಗೂ ಹಂಚಿಕೆ ಮಾಡಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ. ಬೆಂಗಳೂರು, ಕಲ್ಯಾಣ ಕರ್ನಾಟಕ ಮತ್ತು ಮಲೆನಾಡು ಪ್ರದೇಶದ ಅಭಿವೃದ್ಧಿ ಸವಾಲುಗಳನ್ನು ಸಹ ಪ್ರಸ್ತಾಪಿಸಿ, ರಾಜ್ಯಗಳ ಬೆಳವಣಿಗೆಯನ್ನು ಉತ್ತೇಜಿಸಲು ನ್ಯಾಯಯುತ ಮತ್ತು ಬೆಳವಣಿಗೆಗೆ ಪೂರಕವಾಗುವ ತೆರಿಗೆ ಹಂಚಿಕೆಯ ಅವಶ್ಯಕತೆಯನ್ನು ವಿತ್ತಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಐಶ್ವರ್ಯ ಗೌಡ ಸೇರಿ ೧೮ ಜನರ ವಿರುದ್ಧ ಚಾರ್ಜ್ಶೀಟ್

ನವದೆಹಲಿ, ಜೂ. ೨೪: ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬAಧಿಸಿದAತೆ ಐಶ್ವರ್ಯ ಗೌಡ ಸೇರಿದಂತೆ ೧೮ ಜನರ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ತಿಳಿಸಿದೆ. ಬೆಂಗಳೂರಿನ ವಿಶೇಷ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ನ್ಯಾಯಾಲಯಕ್ಕೆ ಜೂನ್ ೨೧ ರಂದು ಪ್ರಾಸಿಕ್ಯೂಷನ್ ದೂರು ದಾಖಲಿಸಲಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ಇಂದು ಪ್ರಕಟಣೆಯಲ್ಲಿ ತಿಳಿಸಿದೆ. ಇದೇ ಪ್ರಕರಣದಲ್ಲಿ ಇತ್ತೀಚೆಗೆ ಇಡಿ ರೂ. ೩.೯೮ ಕೋಟಿ ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಪ್ರಕರಣ ಸಂಬAಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಿರಿಯ ಸಹೋದರ, ಕಾಂಗ್ರೆಸ್ ನಾಯಕ ಡಿ.ಕೆ. ಸುರೇಶ್ ಅವರು ನಿನ್ನೆ ಇಡಿ ಮುಂದೆ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬAಧಿಸಿದAತೆ ಏಪ್ರಿಲ್ ೨೪-೨೫ ರಂದು ಕರ್ನಾಟಕದ ೧೪ ಸ್ಥಳಗಳಲ್ಲಿ ಇಡಿ ಶೋಧ ನಡೆಸಿತ್ತು. ಐಶ್ವರ್ಯ ಗೌಡ ಅವರ ಬೆಂಗಳೂರು ಹಾಗೂ ಮಂಡ್ಯ ನಿವಾಸ ಮತ್ತು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದರು. ಐಶ್ವರ್ಯ ಗೌಡ ಅವರು ಸುಮಾರು ರೂ. ೯ ಕೋಟಿ ಮೌಲ್ಯದ ಚಿನ್ನ ಖರೀದಿಸಿ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ. ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಜುವೆಲ್ಲರಿಯ ಮಾಲೀಕರಿಗೆ ಐಶ್ವರ್ಯ ಗೌಡ ವಂಚಿಸಿದ್ದಾರೆ ಎಂಬ ಆರೋಪವಿದೆ. ಇಷ್ಟೇ ಅಲ್ಲದೆ, ಮಾಜಿ ಸಂಸದ ಡಿ.ಕೆ. ಸುರೇಶ್ ಹೆಸರಿನಲ್ಲಿ ವಂಚನೆ ಎಸಗಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ೨೦೨೪ರ ಡಿಸೆಂಬರ್‌ನಲ್ಲೇ ಡಿ.ಕೆ. ಸುರೇಶ್ ದೂರು ನೀಡಿದ್ದರು.