ಮಡಿಕೇರಿ, ಜೂ. ೨೫: ಶ್ರೀಶಕ್ತಿ ಸಂಘ, ಶಕ್ತಿಧಾಮ ಮಾದಕ ವ್ಯಸನಿಗಳ ಸಮಗ್ರ ಘಟಕ ವತಿಯಿಂದ ಅಂತರರಾಷ್ಟಿçÃಯ ಮಾದಕ ದ್ರವ್ಯ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ತಾ. ೨೬ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ಕುಶಾಲನಗರದ ಜೂನಿಯರ್ ಕಾಲೇಜಿನಲ್ಲಿ ನಡೆಯಲಿದೆ.
ಕುಶಾಲನಗರ ಜೂನಿಯರ್ ಕಾಲೇಜಿನ ಪ್ರಾಂಶುಪಾಲೆ ಡಿ.ಜಿ. ಶಾಂತಿ, ಸೋಮವಾರಪೇಟೆ ಉಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಪಿ. ಚಂದ್ರಶೇಖರ್, ಜಿಲ್ಲಾ ವಿಶೇಷಚೇತನರ ಅಧಿಕಾರಿ ವಿಮಲ, ಕುಶಾಲನಗರ ವೃತ್ತ ಪೊಲೀಸ್ ನಿರೀಕ್ಷಕ ಬಿ.ಎಸ್. ದಿನೇಶ್ ಕುಮಾರ್, ಪ್ರಜಾಪಿತಾ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಬ್ರಹ್ಮಕುಮಾರಿ, ಇತರರು ಪಾಲ್ಗೊಳ್ಳಲಿದ್ದಾರೆ.