ವೀರಾಜಪೇಟೆ, ಜೂ. ೨೫: ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಜನ್ಮ ದಿನದ ಅಂಗವಾಗಿ ಅರುವತೋಕ್ಲು ಪಿ.ಹೆಚ್.ಎಸ್. ಕಾಲೋನಿ ಹಾಗೂ ಗರಿಕೇರಿ ಅಂಗನವಾಡಿ ಮಕ್ಕಳಿಗೆ ಕಲಿಕೆ ಪುಸ್ತಕ ಮತ್ತು ಲೇಖನಿ ಸಾಮಗ್ರಿಗಳನ್ನು ವಿತರಿಸಲಾಯಿತು. ಬಳಿಕ ಸಿಹಿ ಹಂಚಲಾಯಿತು.

ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧÀ್ಯಕ್ಷ ಪಟ್ಟಡ ರಕ್ಷಿತ್ ಚಂಗಪ್ಪ, ವೀರಾಜಪೇಟೆ ಬ್ಲಾಕ್ ಅಧÀ್ಯಕ್ಷ ಶಬೀರ್ ಹಾಗೂ ಪೊನ್ನಂಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಂಡ ಧ್ಯಾನ್ ದೇವಯ್ಯ, ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೊಣಿಯಂಡ ಮುತ್ತಣ್ಣ, ಅರುವತೋಕ್ಲು ವಲಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಂದಾ ದೇವಯ್ಯ ಹಾಗೂ ಅರುವತೋಕ್ಲು ವಲಯ ಯುವ ಕಾಂಗ್ರೆಸ್ ನೂತನ ಅದ್ಯಕ್ಷ ಕೆ.ಎ. ದರ್ಶನ್ ಭಾಗಿಗಳಾಗಿದ್ದರು.