ಚೆಟ್ಟಳ್ಳಿ, ಜೂ. ೨೫: ಕಳೆದ ಐದು ದಿನಗಳ ಹಿಂದೆ ಕುಶಾಲನಗರದ ಸಮೀಪ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಕುಶಾಲನಗರ ತಾಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಕಂಡಕರೆಯ ನಿವೃತ್ತ ಯೋಧ ಗಿರೀಶ್ ಮನೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಭೇಟಿ ನೀಡಿ ದುಃಖತಪ್ತರಾದ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿಂಧೂ ರಾಜನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಸುನಿತಾ ಮಂಜುನಾಥ್, ಸ್ಥಾನೀಯ ಅಧ್ಯಕ್ಷ ಮಹಮ್ಮದ್ ರಫಿ, ಗ್ರಾಮ ಪಂಚಾಯಿತಿ ಸದಸ್ಯ ತೀರ್ಥಕುಮಾರ್, ಚೆಟ್ಟಳ್ಳಿ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಜುಬೈರ್, ಗ್ರಾಮ ಪಂಚಾಯಿತಿ ಸದಸ್ಯರು ಹಾಜರಿದ್ದರು.