ಮಡಿಕೇರಿ: ಮಡಿಕೇರಿಯ ಸಂತ ಜೋಸೆಫರ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಯೋಗ ಮಾಡುವ ಮೂಲಕ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.

"ದೇಹ, ಮನಸ್ಸು ಮತ್ತು ಆತ್ಮಗಳ ಹೊಂದಾಣಿಕೆಗೆ ಯೋಗ ಬಹಳ ಸಹಕಾರಿ" ಎನ್ನುವ ಅಂಶವನ್ನು ಮಕ್ಕಳಿಗೆ ಮನವರಿಕೆ ಮಾಡಿದ ಸಂಸ್ಥೆಯ ಪ್ರಾಚಾರ್ಯರಾದ ಸಿಸ್ಟರ್ ರೋಜಾ ಅವರು ಏಕಾಗ್ರತೆಯನ್ನು ಬೆಳೆಸಲು ಹಾಗೂ ಆತ್ಮ ವಿಶ್ವಾಸವನ್ನು ಹೆಚ್ಚಿಸಲು ಅತ್ಯಂತ ಪರಿಣಾಮಕಾರಿ ವ್ಯಾಯಾಮ ಯೋಗ ಎಂದು ಹೇಳುತ್ತಾ ಈ ಸಂಸ್ಥೆಯಲ್ಲಿ ಯೋಗ ತರಗತಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ತಮ್ಮ ವಿದ್ಯಾರ್ಥಿಗಳಿಗೆ ಅದನ್ನು ಮುಂದುವರಿಸಿಕೊAಡು ಹೋಗಲು ಕರೆ ನೀಡಿದರು.

ವಿದ್ಯಾಸಂಸ್ಥೆಯ ವಿವಿಧ ವಿಭಾಗಗಳ ವಿದ್ಯಾರ್ಥಿವೃಂದಗಳ ನಾಯಕ -ನಾಯಕಿಯರು ಯೋಗ ದಿನದ ಮಹತ್ವದ ಬಗ್ಗೆ ಮಾತನಾಡಿದರು. ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರು ಭಾಗವಹಿಸಿದರು.ಕೂಡಿಗೆ: ಹೆಬ್ಬಾಲೆ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರರಾಷ್ಟಿçÃಯ ಯೋಗ ದಿನವನ್ನು ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮ್ಯಾರಥಾನ್ ಪಟು ಟಿ.ಹೆಚ್. ಗಣೇಶ್ ಯೋಗ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಶಾಲೆಯ ವ್ಯವಸ್ಥಾಪಕ ಹೆಚ್.ಎಸ್. ಲೋಕೇಶ್, ಮುಖ್ಯೋಪಾಧ್ಯಾಯ ರಾದ ಲೇಖ ಜಾನ್, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಶಾಲೆಯ ವ್ಯವಸ್ಥಾಪಕ ಹೆಚ್.ಎಸ್. ಲೋಕೇಶ್, ಮುಖ್ಯೋಪಾಧ್ಯಾಯ ರಾದ ಲೇಖ ಜಾನ್, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.ಸುಂಟಿಕೊಪ್ಪ: ಸುಂಟಿಕೊಪ್ಪ ಸರಕಾರಿ ಪ್ರಾಥಮಿಕ ಶಾಲೆ ಪ್ರೌಢಶಾಲೆ ಹಾಗೂ ಸಂತ ಮೇರಿ ಆಂಗ್ಲ ಮಾಧ್ಯಮ ಸಂಯುಕ್ತ ಶಾಲೆಯಲ್ಲಿ ಯೋಗ ದಿನಾಚರಣೆಯ ಅಂಗವಾಗಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಯೋಗಭ್ಯಾಸ ನಡೆಸಿದರು. ಸಂತ ಮೇರಿ ಆಂಗ್ಲ ಮಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಚಂದ್ರ ಅವರು ವಿದ್ಯಾರ್ಥಿಗಳೊಂದಿಗೆ ಯೋಗಭ್ಯಾಸ ಮಾಡಿದರು.

ಈ ಸಂದರ್ಭ ಶಾಲಾ ವ್ಯವಸ್ಥಾಪಕ ರೆ.ಫಾ. ವಿಜಯಕುಮಾರ್, ಸಂಯುಕ್ತ ಶಾಲೆಯ ಪ್ರಾಚಾರ್ಯ ಸೆಲ್ವರಾಜ್ ಹಾಗೂ ಸಹ ಶಿಕ್ಷಕರು ಇದ್ದರು. ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಯೋಗಭ್ಯಾಸ ಮಾಡಿದರು.

ಈ ಸಂದರ್ಭ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಬಾಲಕೃಷ್ಣ, ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಗೀತಾ ಹಾಗೂ ಸಹ ಶಿಕ್ಷಕರು ಇದ್ದರು.ವೀರಾಜಪೇಟೆ: ವೀರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಂತರರಾಷ್ಟಿçÃಯ ಯೋಗ ದಿನಾಚರಣೆಯನ್ನು ಆಚರಿಸಿ ವಿವಿಧ ಬಗೆಯ ಆಸನಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಲಾಯಿತು.

ಯೋಗ ದಿನಾಚರಣೆಯನ್ನು ಶಾಲಾ ಪ್ರಾಂಶುಪಾಲ ಶಿವಕುಮಾರ್ ಎಸ್.ಸಿ, ಉಪ ಪ್ರಾಂಶುಪಾಲೆ ಭವ್ಯ ಕೆ.ಎನ್. ಅವರು ಉದ್ಘಾಟಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಹಸೀನಾ ಅವರು ವಿದ್ಯಾರ್ಥಿಗಳಿಗೆ ಯೋಗದ ಮಹತ್ವವನ್ನು ತಿಳಿಸಿಕೊಟ್ಟು, ಯೋಗದ ವಿವಿಧ ಭಂಗಿಗಳ ತರಬೇತಿ ನೀಡಿದರು.

ಈ ಸಂದರ್ಭ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.ಮಡಿಕೇರಿ: ಮೂರ್ನಾಡು ಕೊಡಂಬೂರು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯಲ್ಲಿ ಅಂತರರಾಷ್ಟಿçÃಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ನಾಲ್ಕನೇ ತರಗತಿಯ ಋತ್ವಿಕಾ ಪೊನ್ನಮ್ಮ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಿಸಲಾಯಿತು. ಮುಖ್ಯ ಶಿಕ್ಷಕಿಯರಾದ ಶಿಲ್ಪಾ, ಪೊನ್ನಮ್ಮ ಅವರು ಯೋಗದ ಮಹತ್ವವನ್ನು ವಿವರಿಸಿದರು. ಸಹ ಶಿಕ್ಷಕಿಯರಾದ ಜಲಜಾಕ್ಷಿ ಮತ್ತು ಸ್ವರ್ಣ ಲತಾ ಅವರು ತಮ್ಮ ಭಾಷಣದ ಮೂಲಕ ವಿದ್ಯಾರ್ಥಿಗಳಲ್ಲಿ ಶಾರೀರಿಕ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿದರು. ಯೋಗ ಶಿಕ್ಷಕಿ ಶೋಭಾ ಎ.ಎಸ್. ಅವರ ನೇತೃತ್ವದಲ್ಲಿ ಯೋಗಾಸನ ಮತ್ತು ಯೋಗ ನೃತ್ಯವನ್ನು ವಿದ್ಯಾರ್ಥಿಗಳು ಮಾಡಿದರು.

ನಂತರ ೬ ರಿಂದ ೯ನೇ ತರಗತಿಯ ವಿದ್ಯಾರ್ಥಿಗಳಿಗೆ ಯೋಗದ ವಿವಿಧ ಆಸನಗಳ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಾದವರಿಗೆ ಬಹುಮಾನವನ್ನು ನೀಡಲಾಯಿತು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ಯಾಮಿನಿ ನೆರವೇರಿಸಿದರು.ಐಗೂರು: ೧೧ನೇ ಅಂತರರಾಷ್ಟಿçÃಯ ಯೋಗ ದಿನಾಚರಣೆಯನ್ನು ಐಗೂರು ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಸಂಭ್ರಮದಿAದ ಆಚರಿಸಲಾಯಿತು.

ದೈಹಿಕ ಶಿಕ್ಷಣ ಶಿಕ್ಷಕ ಹೆಚ್.ಬಿ. ಕೃಷ್ಣಪ್ಪ ಅವರಿಂದ ತರಬೇತಿ ಪಡೆದ ವಿದ್ಯಾರ್ಥಿಗಳಿಂದ ಸೂರ್ಯ ನಮಸ್ಕಾರ, ಪದ್ಮಾಸನ, ವಜ್ರಾಸನ, ಉಷ್ಟಾçಸನ, ತ್ರಿಕೋನಾಸನ, ವೃಕ್ಷಾಸನ, ತಾಡಾಸನ, ಸರ್ವಾಂಗಾಸನ ಮತ್ತು ಹಾಲಾಸನಗಳನ್ನು ಮಾಡಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯ ಯಶ್ವಂತ್, ಶಿಕ್ಷಕ ವೃಂದದ ಕೃಷ್ಣಪ್ಪ, ಹೆಚ್.ಬಿ., ಮಂಜುನಾಥ ಜಿ., ರಂಜಿನಿ ಎಸ್.ಎಸ್., ರೇಖಾ ಎ.ಬಿ., ಶಶಿಕಲಾ ಕಾಲೇಜು ಉಪನ್ಯಾಸಕ ನಿಶ್ಚಯ್ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.