‘ಹಸಿದವರಿಗೆ ಅನ್ನ’ ಕಾರ್ಯಕ್ರಮ

ಕುಶಾಲನಗರ, ಜು. ೨: ಕುಶಾಲನಗರ ರೋಟರಿ ಸಂಸ್ಥೆಯ ಸುವರ್ಣ ಮಹೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ‘ಹಸಿದವರಿಗೆ ಅನ್ನ’ ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕುಶಾಲನಗರ - ಮೈಸೂರು ರಸ್ತೆಯ ನಿಸರ್ಗ ಹೊಟೇಲ್‌ನಲ್ಲಿ ರೋಟರಿ ಸಂಸ್ಥೆಯಿAದ ರೋಟರಿ ಅಧ್ಯಕ್ಷ ಮನು ಪೆಮ್ಮಯ್ಯ ಅವರು ನಿರ್ಗತಿಕರಿಗೆ, ಆಟೋ ಚಾಲರಿಗೆ ಕೂಪನ್‌ಗಳನ್ನು ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಸಂಸ್ಥೆ ಅಧ್ಯಕ್ಷ ಮನು ಪೆಮ್ಮಯ್ಯ, ಕುಶಾಲನಗರ ರೋಟರಿಯ ಸುವರ್ಣ ಮಹೋತ್ಸವದ ಅಂಗವಾಗಿ ಹಸಿದವರಿಗೆ ಅನ್ನ ಎಂಬ ವಿನೂತನ ಯೋಜನೆ ಹಮ್ಮಿಕೊಳ್ಳಲಾಗಿದೆ.

ಪ್ರತಿ ದಿನ ತಿಂಡಿ ಮತ್ತು ಮಧ್ಯಾಹ್ನದ ಊಟವನ್ನು ಅರ್ಹರಿಗೆ ಉಚಿತವಾಗಿ ಕಲ್ಪಿಸುವ ಯೋಜನೆ ಇದಾಗಿದೆ. ಎರಡೂ ವೇಳೆಯಲ್ಲಿ ಹೊಟೇಲ್ ಮೂಲಕ ಉಚಿತವಾಗಿ ಒದಗಿಸಿದ ಆಹಾರಕ್ಕೆ ರೋಟರಿ ಯಿಂದ ಹಣ ಪಾವತಿಸಲಾಗುತ್ತದೆ. ಊಟಕ್ಕಾಗಿ ಪರಿತಪಿಸುವ ಅರ್ಹರು ಈ ಯೋಜನೆ ಸದುಪಯೋಗ ಪಡಿಸಿಕೊಳ್ಳಬಹುದು. ಇದು ರೋಟರಿಯ ನಿರಂತರ ಯೋಜನೆಯಾಗಿದೆ ಎಂದು ತಿಳಿಸಿದರು. ಹೊಟೇಲ್ ಮಾಲೀಕರು ಅರ್ಹ ಫಲಾನುಭವಿಗಳ ಬಗ್ಗೆ ನಿಗಾವಹಿಸಲಿದ್ದಾರೆ ಎಂದ ಅವರು ಸಾರ್ವಜನಿಕರು, ದಾನಿಗಳು ಕೂಡ ಈ ಯೋಜನೆಗೆ ಸಹಕಾರ ನೀಡಬಹುದು ಎಂದು ಅವರು ಕೋರಿದರು.

ಈ ಸಂದರ್ಭ ಸಂಸ್ಥೆ ಕಾರ್ಯದರ್ಶಿ ಹೆಚ್.ಪಿ. ಮಂಜುನಾಥ್, ಸಹಾಯಕ ಗವರ್ನರ್ ಉಲ್ಲಾಸ್ ಕೃಷ್ಣ, ರೋಟರಿ ಹಿರಿಯ ಸದಸ್ಯರಾದ ಮಹೇಶ್ ನಾಲ್ವಡಿ, ಡಾ. ಹರಿ ಎ. ಶೆಟ್ಟಿ, ಆರತಿ ಶೆಟ್ಟಿ, ರಿಚರ್ಡ್, ಪಿ.ಜಿ. ಗಂಗಾಧರ್, ಪ್ರಕಾಶ್, ಸುದೀಶ್, ನಿಸರ್ಗ ಹೊಟೇಲ್ ಮಾಲೀಕ ನಾರಾಯಣ್ ಮತ್ತಿತರರು ಇದ್ದರು.