ಚೆಯ್ಯಂಡಾಣೆ, ಜು. ೪: ಇತಿಹಾಸ ಪ್ರಸಿದ್ಧ ನಾಪೋಕ್ಲು ಬಳಿಯ ಚೆರಿಯಪರಂಬು ದರ್ಗಾದಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಶಹೀದ್ ಅಬ್ದುಲ್ ರಹ್ಮಾನ್ ವಲಿಯುಲ್ಲಾಹಿ ಹಾಗೂ ಇತರ ಮಹಾನುಭಾವರ ಹೆಸರಿನಲ್ಲಿ ಪ್ರತಿವರ್ಷ ಆಚರಿಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭವು ೨೦೨೬ರ ಫೆಬ್ರವರಿ ೬ ರಿಂದ ೧೦ ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿAದ ಆಚರಿಸಲು £ರ್ಧರಿಸಲಾಗಿದೆ ಎಂದು ಚೆರಿಯಪರಂಬು ಮುಹಿಯುದ್ದೀನ್ ಜುಮಾ ಮಸೀದಿಯ ಆಡಳಿತ ಮಂಡಳಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.