ಹೆಬ್ಬಾಲೆ, ಜು. ೪: ಭಾರತೀಯ ಸೇನೆಯಲ್ಲಿ ಮೂವತ್ತು ವರ್ಷ ಸೇವೆ ಸಲ್ಲಿಸಿ ಜೂ. ೩೦ ರಂದು ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಆಗಮಿಸಿದ ಯೋಧ ಹೆಚ್.ಎಸ್. ಕೃಷ್ಣಪ್ಪಗೆ ಹೆಬ್ಬಾಲೆ ಗ್ರಾಮದಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು.
ಹೆಬ್ಬಾಲೆ ಗ್ರಾಮಸ್ಥರು, ಕೃಷ್ಣಪ್ಪ ಗೆಳೆಯರ ಬಳಗ ಹಾಗೂ ಕೃಷ್ಣಪ್ಪ ಅಭಿಮಾನಿಗಳು ವೀರಯೋಧ ಕೃಷ್ಣಪ್ಪ ಅವರ ಕುಟುಂಬವನ್ನು ಸನ್ಮಾನಿಸಿ ನೆನಪಿನ ಕಾಣಿಕೆ ನೀಡುವ ಮೂಲಕ ಗೌರವಿಸಿದರು. ಅಭಿಮಾನಿಗಳು ಬೃಹತ್ ಹೂವಿನ ಹಾರಗಳನ್ನು ಹಾಕಿ ಗೌರವ ಸಲ್ಲಿಸಿದರು. ಅಭಿಮಾನಿಗಳು ಹೆಬ್ಬಾಲೆ ಸರ್ಕಲ್ನಲ್ಲಿ ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಿಸಿದರು. ಹೆಬ್ಬಾಲೆ ಗ್ರಾಮದ ಸಿದ್ದಪ್ಪ ಹಾಗೂ ದಿ. ಪುಟ್ಟಗೌರಮ್ಮ ದಂಪತಿಯ ಕಿರಿಯ ಪುತ್ರರಾಗಿರುವ ಕೃಷ್ಣಪ್ಪ ಹಾಗೂ ಅವರ ಪತ್ನಿಯನ್ನು ಗ್ರಾಮದ ಮುಖ್ಯ ಸರ್ಕಲ್ನಿಂದ ಊರಿನ ಪ್ರಮುಖ ಬೀದಿಯಲ್ಲಿ ಮಂಗಳವಾದ್ಯಗಳೊAದಿಗೆ ಅಲಂಕೃತ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆ ಉದ್ದಕ್ಕೂ ಅಭಿಮಾನಿ ಜಯಘೋಷ ಹಾಕಿದರು. ಹೆಬ್ಬಾಲೆ ಸರ್ಕಾರ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ನಿವೃತ್ತ ಯೋಧ ಕೃಷ್ಣಪ್ಪ ಹಾಗೂ ಪೂರ್ಣಿಮಾ ಕೃಷ್ಣಪ್ಪ ಅವರು ಉಚಿತವಾಗಿ ಎಲ್ಲಾ ಮಕ್ಕಳಿಗೂ ಟೀಶರ್ಟ್ ವಿತರಣೆ ಮಾಡಿದರು. ತವರಿಗೆ ಆಗಮಿಸಿದ ಯೋಧ ಮೊದಲು ತಾನು ವಿದ್ಯಾಭ್ಯಾಸ ಮಾಡಿದ ಶಾಲೆಗೆ ಭೇಟಿ ನೀಡಿದರು. ಈ ಸಂದರ್ಭ ಶಾಲಾ ಮಕ್ಕಳು ಹೂಗುಚ್ಛ ನೀಡಿ ಸ್ವಾಗತಿಸಿದರು. ನಂತರ ಶಾಲಾ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಶಾಲಾ ಮಕ್ಕಳಿಗೆ ಟೀಶರ್ಟ್ಗಳನ್ನು ವಿತರಣೆ ಮಾಡಿದರು. ನಂತರ ಗುರುಗಳಾದ ಹೆಚ್.ಎನ್. ನಾಗಾಚಾರಿ ಹಾಗೂ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಹೆಚ್.ಎಂ. ವೆಂಕಟೇಶ್ ಅವರನ್ನು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಶಾಲಾ ಅಭಿವೃದ್ಧಿ ಸಮಿತಿ ವತಿಯಿಂದ ಯೋಧ ಕೃಷ್ಣಪ್ಪ ಅವರನ್ನು ಸನ್ಮಾನಿಸಲಾಯಿತು. ನಂತರ ಶಾಲಾ ಆವರಣದಲ್ಲಿ ಗಿಡ ನೆಡಲಾಯಿತು. ಈ ಸಂದರ್ಭ ಯೋಧ ಕೃಷ್ಣಪ್ಪ ಅಭಿಮಾನಿ ಬಳಗದ ಹೆಚ್.ಎಲ್. ರಮೇಶ್, ಹೆಚ್.ಆರ್. ಶ್ರೀನಿವಾಸ್, ಲೋಕೇಶ್, ಮಹಾದೇಶ, ಕಾಸರಗೋಡು ಬೀದಿ ರಮೇಶ್, ವಿಶ್ವನಾಥ್, ರಘು, ಯೋಗೇಶ್ ಮತ್ತಿತರರು ಭಾಗವಹಿಸಿದ್ದರು.