ಮಡಿಕೇರಿ, ಜು. ೫: ಮಳೆ ಹಿನ್ನೆಲೆ ಜಿಲ್ಲಾದ್ಯಂತ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.

ಅಧಿಕ ಭಾರದ ವಾಹನ ಓಡಾಟದಿಂದ ಭೂಕುಸಿತ ಸಾಧ್ಯತೆ ಇರುವ ಹಿನ್ನೆಲೆ ಈ ಕ್ರಮ ವಹಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದ್ದು, ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು, ವಾಹನದ ನೋಂದಣಿ ತೂಕ ೧೮,೫೦೦ ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ವಾಹನಗಳು, ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್ ಶಿಪ್ ಕಾರ್ಗೋ ಕಂಟೈನರ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು, ರ‍್ಟಿಕ್ಯೂಲೇಟೆಡ್ ವಾಹನಗಳ ಓಡಾಟವನ್ನು ತಾ. ೬ ರಿಂದ ಆಗಸ್ಟ್ ೫ ರ ತನಕ ನಿಷೇಧಿಸಲಾಗಿದೆ.

ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳ (ಮಲ್ಟಿ ಆಕ್ಸಿಲ್ ಬಸ್‌ಗಳು ಸೇರಿದಂತೆ) ಓಡಾಟಕ್ಕೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.