ನಾಪೋಕ್ಲು/ಮಡಿಕೇರಿ, ಆ. ೭: ಭತ್ತದ ಕಣಜ ಎಂದೆ ಖ್ಯಾತಿ ಪಡೆದಿದ್ದ ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಭತ್ತ ಕೃಷಿ ಮಾಡುವವರ ಸಂಖ್ಯೆ ಕ್ಷೀಣಿಸುತ್ತಿರುವ ಹಿನ್ನೆಲೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ನಾಪೋಕ್ಲುವಿನಲ್ಲಿ ನಡೆದ ‘ಐಪಣಿರ ಆಯಿಮೆ ಪಿಞ್ಞ ಕಳಿ ಪೈಪೋಟಿ’ ಕಾರ್ಯಕ್ರಮ ಭತ್ತ ಕೃಷಿಯನ್ನು ಪ್ರೋತ್ಸಾಹಿಸುವುದರೊಂದಿಗೆ ಅದರ ಮಹತ್ವವನ್ನು ಸಾರುವಲ್ಲಿ ಯಶಸ್ವಿಯಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಬಿದ್ದಾಟಂಡ ಕುಟುಂಬ, ನಾಲ್ಕುನಾಡು ಪ್ಲಾಂರ್ಸ್ ಕ್ಲಬ್ ಅಸೋಸಿಯೇಷನ್ ಮತ್ತು ಕೊಡವ ಸಮಾಜ ಸಂಸ್ಕೃತಿ ಮತ್ತು ಕ್ರೀಡಾ ಅಸೋಷಿಯೇಷನ್ ವತಿಯಿಂದ ನಾಪೋಕ್ಲುವಿನ ಬಿದ್ದಾಟಂಡ ಕುಟುಂಬಸ್ಥರ ಗದ್ದೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭತ್ತದ ಕೃಷಿ ಚಟುವಟಿಕೆಯೊಂದಿಗೆ ವೈವಿಧ್ಯಮಯ ಕೆಸರು ಗದ್ದೆ ಕ್ರೀಡಾಕೂಟಗಳು ಗಮನ ಸೆಳೆದವು.
ವಿವಿಧ ಕ್ರೀಡಾ ಸ್ಪರ್ಧೆಯಲ್ಲಿ ನಾಪೋಕ್ಲುವಿನ ಸುತ್ತಮುತ್ತಲಿನ ಸುಮಾರು ೧೩ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ನಾಟಿ ಓಟ, ಭತ್ತ ಪೈರು ಕೀಳುವ ಮತ್ತಿತರ ಸ್ಪರ್ಧೆಗಳಲ್ಲಿ ಲವಲವಿಕೆಯಿಂದ ಪಾಲ್ಗೊಂಡು ಸಂಭ್ರಮಿಸಿದರು. ಹಿರಿಯರು ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಎ.ಎಸ್.ಪೊನ್ನಣ್ಣ ಅವರು ತೆಂಗಿನಕಾಯಿಗೆ ಗುಂಡು ಹೊಡೆದರು. ಇದರೊಂದಿಗೆ ಕೃಷಿ ಚಟುವಟಿಕೆಗೆ ಪೂರಕವಾದ ಸ್ಪರ್ಧೆಗಳು ಗಮನ ಸೆಳೆದವು.
ಪದ್ಧತಿ ಪರಂಪರೆಯೊAದಿಗೆ ಕೃಷಿಯನ್ನು ಉಳಿಸಿ
ಕೊಡವ ಜನಾಂಗ ಪದ್ಧತಿ, ಪರಂಪರೆಯನ್ನು ರಕ್ಷಿಸುವುದರೊಂದಿಗೆ ಕೃಷಿ ಪದ್ಧತಿಯನ್ನು ಉಳಿಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಕರೆ ನೀಡಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪೂರ್ವಜರು ಉಳಿಸಿ ಬೆಳೆಸಿಕೊಂಡು ಬಂದಿರುವ ಕೃಷಿ ಪದ್ಧತಿ, ಸಂಸ್ಕೃತಿ, ಕಲೆ, ಪರಂಪರೆಗಳನ್ನು ಇಂದಿನ ಯುವಜನರು ಮರೆಯದೆ ಮುಂದುವರಿಸಿಕೊAಡು ಹೋಗುವಂತಾಗಬೇಕು. ಕೊಡಗಿನ ಜನರು ಹಿಂದಿನಿAದಲೂ ಕೃಷಿಯನ್ನು ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಕೃಷಿ ಜೊತೆಗೆ ಕಲೆ, ಸಂಸ್ಕೃತಿ, ಭಾಷೆ ಉಳಿಸಿ ಬೆಳೆಸಿಕೊಂಡು ಬಂದಿದ್ದು, ಅದನ್ನು ಮುಂದಿನ ಪೀಳಿಗೆಗೂ ತಲುಪಿಸಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರಲ್ಲಿಯೂ ಹೆಚ್ಚಿನ ಜವಾಬ್ದಾರಿಯಿದ್ದು, ಈ ಬಗ್ಗೆ ಗಮನಹರಿಸುವಂತೆ ಸಲಹೆ ನೀಡಿದರು.
ಕೊಡವ ಭಾಷಿಕ ಜನರ ಸಾಹಿತ್ಯ, ಸಂಸ್ಕೃತಿ, ಕಲೆಗಳು ಇಡೀ ವಿಶ್ವದಲ್ಲಿಯೇ ಮಾದರಿಯಾಗಿದ್ದು, ಗೌರವಿಸುತ್ತಾರೆ ಎಂಬು ದನ್ನು ಯಾರೂ ಸಹ ಮರೆಯಬಾರದು.
(ಮೊದಲ ಪುಟದಿಂದ) ಕೊಡಗಿನ ಸಂಸ್ಕೃತಿ ಬಗ್ಗೆ ರಾಷ್ಟç ಮತ್ತು ಅಂತರರಾಷ್ಟಿçÃಯ ಮಟ್ಟದಲ್ಲಿಯೂ ಸಹ ಮೆಚ್ಚುಗೆ ಇದ್ದು, ಅಷ್ಟರ ಮಟ್ಟಿಗೆ ಶ್ರೀಮಂತಿಕೆ ಹೊಂದಿದೆ. ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ಎಲ್ಲಾ ಕೊಡವ ಭಾಷಿಕರ ಕರ್ತವ್ಯವಾಗಿದೆ ಎಂದರು. ರಾಷ್ಟçದಲ್ಲಿ ೧೪೦ ಕೋಟಿ ಜನಸಂಖ್ಯೆ ಹೆಚ್ಚಿದೆ. ಆದರೆ ಕೊಡವ ಭಾಷಿಕ ಜನಾಂಗದವರ ಜನಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಆದರೂ ಸಹ ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವುದನ್ನು ಮತ್ತು ಮಾಡುತ್ತಿರುವುದನ್ನು ಮರೆಯುವಂತಿಲ್ಲ. ಬಹು ವರ್ಷಗಳ ನಂತರ ಭಾರತ ಮುಖ್ಯ ಹಾಕಿ ತಂಡಕ್ಕೆ ಜಿಲ್ಲೆಯ ಚಂದೂರ ಬಿ.ಪೂವಣ್ಣ ಆಯ್ಕೆಯಾಗಿರುವುದು ವಿಶೇಷ ಎಂದು ಎ.ಎಸ್.ಪೊನ್ನಣ್ಣ ಮೆಚ್ಚುಗೆ ವ್ಯಕ್ತಪಡಿಸಿದರು.
ಕೃಷಿ ಭೂಮಿ ಉಳಿಸಿ
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಮಾತನಾಡಿ, ಕೊಡವ ಭಾಷಿಕ ೨೧ ಮೂಲ ಜನಾಂಗದವರು ಕೃಷಿ ಭೂಮಿಯನ್ನು ಪೂಜಿಸಿಕೊಂಡು ಬದುಕು ನಡೆಸುತ್ತಿದ್ದಾರೆ. ಕೊಡವ ಭಾಷಿಕರಿಗೆ ಭೂಮಿ, ತೋಟ, ಬಾಣೆಯು ಪಾರಂಪರಿಕವಾಗಿ ಬಂದಿದ್ದು, ಇದನ್ನು ಉಳಿಸಿಕೊಂಡು ಬರಬೇಕು. ಕಾವೇರಿ ಸಂಕ್ರಮಣ, ಭೂಮಿತಾಯಿ ಪೂಜಿಸಿಕೊಂಡು ಬರಲಾಗುತ್ತಿದೆ. ಆ ನಿಟ್ಟಿನಲ್ಲಿ ಹಿಂದಿನ ಕೃಷಿ ಪದ್ಧತಿಯನ್ನು ಉಳಿಸಿಕೊಂಡು ಕೊಡವ ಭಾಷಿಕ ಜನಾಂಗದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಭತ್ತದ ಸಸಿ (ಅಗೆ) ತೆಗೆಯುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಪ್ಲಾಂರ್ಸ್ ಕ್ಲಬ್ ಅಸೋಷಿಯೇಷನ್ ಅಧ್ಯಕ್ಷ ಬಾಚಮ್ಮಂಡ ಲವ ಚಿಣ್ಣಪ್ಪ, ನಾಪೋಕ್ಲು ಕಾಫಿ ಪ್ಲಾಂಟರ್ ಬಿದ್ದಾಟಂಡ ಜೀವನ್ ತಿಮ್ಮಯ್ಯ, ಬಿದ್ದಾಟಂಡ ಕುಟುಂಬದ ಅಧ್ಯಕ್ಷ ಕಾರ್ಯಪ್ಪ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಬಿದ್ದಾಟಂಡ ಎಸ್.ತಮ್ಮಯ್ಯ, ಕೃಷಿಕರಾದ ಮುಕ್ಕಾಟಿರ ಸುತನ್ ಸುಬ್ಬಯ್ಯ, ಕಲಿಯಂಡ ಸಂಪನ್ ಸೋಮಣ್ಣ, ಕುಡಿಯರ ಮುತ್ತಪ್ಪ, ಅಕಾಡೆಮಿ ಸದಸ್ಯರಾದ ಪುತ್ತರಿರ ಪಪ್ಪು ತಿಮ್ಮಯ್ಯ, ಕಂಬೆಯAಡ ಡೀನಾ ಬೋಜಣ್ಣ, ಮೊಳ್ಳೆಕುಟ್ಟಂಡ ದಿನು ಬೋಜಪ್ಪ, ಪಾನಿಕುಟ್ಟಿರ ಕೆ.ಕುಟ್ಟಪ್ಪ, ಕುಡಿಯರ ಕಾವೇರಪ್ಪ, ಚೊಟ್ಟೆಯಂಡ ಎ.ಸಂಜು ಕಾವೇರಪ್ಪ ಮತ್ತು ನಾಪಂಡ ಸಿ. ಗಣೇಶ್, ಪೊನ್ನಿರ ಯು.ಗಗನ್, ಚೆಪ್ಪುಡಿರ ಎಸ್.ಉತ್ತಪ್ಪ, ನಾಯಕಂಡ ಬೇಬಿ ಚಿಣ್ಣಪ್ಪ, ರಿಜಿಸ್ಟಾçರ್ ಚಿನ್ನಸ್ವಾಮಿ ಸೇರಿದಂತೆ ಇತರರು ಹಾಜರಿದ್ದರು. ಚೆಪ್ಪುಡಿರ ಉತ್ತಪ್ಪ ಪ್ರಾರ್ಥಿಸಿ, ಮಾಳೇಟಿರ ಶ್ರೀನಿವಾಸ್ ನಿರೂಪಿಸಿ, ಪೊನ್ನೀರ ಗಗನ್ ವಂದಿಸಿದರು.