ನಾಪೋಕ್ಲು, ಆ. ೨೪: ಶಿಕ್ಷಣ ಇಲಾಖೆಯಲ್ಲಿ ೩೧ ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿ ಸ.ಹಿ.ಪ್ರಾ. ಶಾಲೆ ಪಡಿಯಾಣಿಯಲ್ಲಿ ನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕರಾದ ಕೆ.ಸಿ. ಧರ್ಮೇಂದ್ರ ಅವರನ್ನು ಬೀಳ್ಕೊಡಲಾಯಿತು.

ಶಾಲೆಯಲ್ಲಿ ಆಯೋಜಿಸಿದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಎಸ್.ಡಿ.ಎಂ.ಸಿ. ಸದಸ್ಯರು, ವಿದ್ಯಾರ್ಥಿಗಳು, ಮಡಿಕೇರಿ ತಾಲೂಕಿನ ಶಿಕ್ಷಕರ ಸಂಘ, ಕೆ.ಸಿ. ಧರ್ಮೇಂದ್ರ ದಂಪತಿಗೆ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ, ಗೌರವಿಸಿದರು.

ಈ ಸಂದರ್ಭದಲ್ಲಿ ನಿವೃತ್ತಿ ಹೊಂದಿದ ಕೆ.ಸಿ. ಧರ್ಮೇಂದ್ರ ಶಾಲೆಗೆ ಮರದ ಕಪಾಟನ್ನು ಕೊಡುಗೆ ನೀಡಿದರು. ಸಮಾರಂಭದಲ್ಲಿ ಪ್ರಭಾರ ಮುಖ್ಯ ಶಿಕ್ಷಕರಾದ ಬೋಜಮ್ಮ, ಸಹ ಶಿಕ್ಷಕಿಯರಾದ ಕೆ.ಎ. ಹೇಮಮಾಲಿನಿ, ರಾಧಾ ಕೆ.ಜೆ, ಬುಶೀರ ಕೆ.ಎಂ., ನಿವೃತ್ತ ದೈಹಿಕ ಶಿಕ್ಷಕಿ ಎಂ.ಬಿ. ಭಾರತಿ, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷರಾದ ಮೋಹನ್ ಪೆರಾಜೆ ಮತ್ತು ಸದಸ್ಯರು, ಬಿ.ಆರ್.ಸಿ ಮಂಜುಳಾ ಚಿತ್ರಾಪುರ, ಪ್ರಸಾದ್, ಎಸ್.ಡಿ.ಎಂ.ಸಿ. ಸದಸ್ಯರು, ಶಿಕ್ಷಕರು, ಪೋಷಕರು ಹಾಜರಿದ್ದರು.