ಕುಶಾಲನಗರ, ಸೆ. ೪: ಕುಶಾಲನಗರ ನಾಡಪ್ರಭು ಪತ್ತಿನ ಸಹಕಾರ ಸಂಘದ ನೂತನ ಕಟ್ಟಡವನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠಾಧೀಶರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಲೋಕಾರ್ಪಣೆ ಮಾಡಿದರು. ಬಳಿಕ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಆರ್ಥಿಕ ಸಮೃದ್ಧಿ ಹೊಂದಿದ ವ್ಯಕ್ತಿಗೆ ಸಮಾಜದಲ್ಲಿ ಗೌರವ ಲಭಿಸುತ್ತದೆ. ಸ್ವಾತಂತ್ರ‍್ಯ ಪೂರ್ವ ಹಾಗೂ ನಂತರದಲ್ಲಿ ದೇಶದ ನಾಗರಿಕರ ಜನಜೀವನದಲ್ಲಿ ಅನೇಕ ವ್ಯತ್ಯಾಸಗಳಾಗಿವೆ. ದೇಶದಲ್ಲಿ ಹಸಿರು ಕ್ರಾಂತಿ ಉಂಟಾಗಿ ನಂತರ ವಿದ್ಯಾಸಂಸ್ಥೆಗಳು ಆರಂಭಗೊAಡವು.

ಮಠಮಾನ್ಯಗಳು ಕೂಡ ಸರ್ಕಾರದೊಂದಿಗೆ ಕೈಜೋಡಿಸಿ ಅಭಿವೃದ್ಧಿಗೆ ಒತ್ತು ನೀಡಿದವು. ಇತ್ತೀಚಿನ ವರ್ಷಗಳಲ್ಲಿ ಭಾರತೀಯರು ವಿದೇಶಗಳಲ್ಲೂ ತಮ್ಮ ಪ್ರತಿಭೆ ಹಾಗೂ ಛಾಪು ಮೂಡಿಸಿದ್ದಾರೆ ಎಂದರು.

ಸಹಕಾರ ಸಂಘಗಳು ಆರ್ಥಿಕವಾಗಿ ಸಮೃದ್ಧಿಯಾಗಬೇಕು. ಜನರು ಬ್ಯಾಂಕ್‌ಗಳ ಮೂಲಕ ಹಣ ಉಳಿತಾಯ ಮಾಡಬೇಕು. ಜೊತೆಗೆ ಸಾಲ ಸೌಲಭ್ಯ ಪಡೆದು ಅಭಿವೃದ್ಧಿ ಹೊಂದಬೇಕು ಎಂದು ಸಲಹೆ ನೀಡಿದರು

ಸೆ.೨೨ ರಿಂದ ಸರ್ಕಾರ ಜನಗಣತಿಯನ್ನು ಆರಂಭಿಸುತ್ತಿದ್ದು, ಗಣತಿದಾರರು ಮನೆಗೆ ಭೇಟಿ ನೀಡಿದಾಗ ಸರಿಯಾದ ವಸ್ತು ನಿಷ್ಠವಾದ ಮಾಹಿತಿ ನೀಡಬೇಕೆಂದು ಅವರು ಕರೆ ನೀಡಿದರು.

ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಸಹಕಾರ ಸಂಘಗಳು ಅಭಿವೃದ್ಧಿ ಹೊಂದಬೇಕು. ೯ ವರ್ಷಗಳ ಹಿಂದೆ ಆರಂಭವಾದ ನಾಡಪ್ರಭು ಪತ್ತಿನ ಸಹಕಾರ ಸಂಘ ಉತ್ತಮ ಸಾಧನೆ ಮಾಡಿದೆ. ಈ ಸಂಘಕ್ಕೆ ಶಾಸಕರ ನಿಧಿಯಿಂದ ರೂ.೧೦ ಲಕ್ಷ ಅನುದಾನ ಒದಗಿಸಿಕೊಡುವುದಾಗಿ ಭರವಸೆ ನೀಡಿದರು.

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಪಿ.ಗಣಪತಿ ಮಾತನಾಡಿ, ಕೊಡಗಿನಲ್ಲಿ ಹಿರಿಯ ಸಹಕಾರಿಗಳು ಸಹಕಾರ ಸಂಘಗಳನ್ನು ಸ್ಥಾಪಿಸುವ ಮೂಲಕ ಭದ್ರಬುನಾದಿ ಹಾಕಿದ್ದಾರೆ. ಕೊಡಗಿನ ವಿವಿಧ ಸಹಕಾರ ಸಂಘಗಳು ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಾ, ಖಾಸಗಿ ಬ್ಯಾಂಕ್‌ಗಳಿಗೆ ಪೈಪೋಟಿ ನೀಡುತ್ತಿವೆ. ಸಹಕಾರ ಸಂಘದಲ್ಲಿ ದಕ್ಷ ಹಾಗೂ ಪ್ರಮಾಣಿಕ ಆಡಳಿತ ಇರಬೇಕು ಎಂದರು.

ದಾನವಾಗಿ ನೀಡಿರುವ ಸಂಘದ ಕಟ್ಟಡವನ್ನು ಮಾರಾಟ ಮಾಡದಂತೆ ಬೈಲಾದಲ್ಲೂ ಸೇರಿಸಬೇಕು. ಸದಸ್ಯರಿಗೆ ಕನಿಷ್ಠ ಷೇರು ನಿಗದಿಪಡಿಸಬೇಕು ಎಂದು ಸಲಹೆ ನೀಡಿದರು.

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಹರಪಳ್ಳಿ ರವೀಂದ್ರ ಮಾತನಾಡಿ, ಆಧುನಿಕ ಬೆಂಗಳೂರು ಸ್ಥಾಪನೆಗೆ ಕೆಂಪೇಗೌಡ ಅವರ ಕೊಡುಗೆ ಅಪಾರವಾಗಿದೆ. ಇಡೀ ವಿಶ್ವವೇ ಬೆಂಗಳೂರು ಕಡೆ ಬೆರಗಿನಿಂದ ನೋಡುವಂತಾಗಿದೆ. ನೂರಾರು ಕೆರೆಕಟ್ಟೆಗಳನ್ನು ಕಟ್ಟಿಸಿ ರೈತರ ಬದುಕನ್ನು ಹಸನಾಗುವಂತೆ ಮಾಡಿದ್ದಾರೆ ಎಂದರು.

ಇದೀಗ ನಮ್ಮ ಮುಂದೆ ಎರಡು ಜ್ವಲಂತ ಸಮಸ್ಯೆಗಳು ಸೃಷ್ಟಿಯಾಗಿವೆ ಒಂದು ಜನಗಣತಿ ಹಾಗೂ ಮತ್ತೊಂದು ಸಿ ಆ್ಯಂಡ್ ಡಿ ಲ್ಯಾಂಡ್ ಸಮಸ್ಯೆ. ಅರಣ್ಯ ಇಲಾಖೆ ಸಿ ಆ್ಯಂಡ್ ಡಿ ಭೂಮಿಯಲ್ಲಿ ನೈಸರ್ಗಿಕ ಅರಣ್ಯ ಬೆಳೆಸಬೇಕು ಎಂದು ಆದೇಶ ಹೊರಡಿಸಿದೆ. ಇದನ್ನು ಕೈಬಿಟ್ಟು ರೈತರಿಗೆ ಕೃಷಿ ಮಾಡಲು ಮಂಜೂರು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಆರ್.ಶರವಣಕುಮಾರ್ ಮಾತನಾಡಿ, ನಾಡಪ್ರಭು ಪತ್ತಿನ ಸಹಕಾರ ಸಂಘ ಕಡಿಮೆ ಅವಧಿಯಲ್ಲಿ ಉತ್ತಮ ಸಾಧನೆ ಮಾಡಿದೆ.ಸಹಕಾರ ಕ್ಷೇತ್ರದಲ್ಲಿ ರಾಜಕೀಯ ರಹಿತವಾಗಿ ಕೆಲಸ ನಿರ್ವಹಿಸಿದರೆ ಮಾತ್ರ ಸಂಘಗಳು ಅಭಿವೃದ್ಧಿ ಹೊಂದುತ್ತವೆ ಎಂದರು.

ಸAಘದ ಅಧ್ಯಕ್ಷ ಎಂ.ಕೆ.ದಿನೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾಡಪ್ರಭು ಪತ್ತಿನ ಸಹಕಾರ ಸಂಘವು ಅಭಿವೃದ್ಧಿಯತ್ತ ಸಾಗುತ್ತಿದ್ದು, ಸಂಘದ ಲಾಭಾಂಶದ ರೂ. ೬೫ ಲಕ್ಷ ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗಿದೆ.ಸಂಘದಲ್ಲಿ ೯೬೦ ಸದಸ್ಯರು ಇದ್ದು, ಎಲ್ಲರ ಸಹಕಾರದಿಂದ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲಾಗಿದೆ.ಇದು ನಮ್ಮ ಸಂಘದ ದೊಡ್ಡ ಸಾಧನೆ ಎಂದು ಹೇಳಿದರು.

ನಾಡಪ್ರಭು ಪತ್ತಿನ ಸಹಕಾರ ಸಂಘದ ಸಂಸ್ಥಾಪಕ ಅಧ್ಯಕ್ಷ ಎಂ.ಡಿ.ರAಗಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ೨೦೧೫ನೇ ಇಸವಿಯಲ್ಲಿ ಒಕ್ಕಲಿಗರ ಸಂಘ ಸ್ಥಾಪನೆ ಮಾಡಿ.ಸಮುದಾಯದ ಕಟ್ಟಕಡೆಯ ವ್ಯಕ್ತಿಗೂ ಪ್ರಯೋಜನ ಸಿಗಬೇಕು ಎಂಬ ಉದ್ದೇಶದಿಂದ ನಾಡಪ್ರಭು ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸಲಾಯಿತು. ಪ್ರತಿ ಮನೆಗೆ ಭೇಟಿ ನೀಡಿದಾಗ ಉತ್ತಮ ಸ್ಪಂದನ ಸಿಕ್ಕಿತ್ತು ಎಂದರು.

ಈ ಸಂದರ್ಭ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಶುಭಕೋರಿದರು.

ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶೈಲಜಾ, ಸಂಘದ ಉಪಾಧ್ಯಕ್ಷ ಜಿ.ಬಿ. ಜಗದೀಶ್, ನಿರ್ದೇಶಕರಾದ ಸಿ.ವಿ. ನಾಗೇಶ್, ಎಂ.ಡಿ. ರವಿಕುಮಾರ್, ಕೆ.ಕೆ. ಹೇಮ್ ಕುಮಾರ್, ಕೆ.ಪಿ. ರಾಜು, ಎಸ್.ಸಿ. ಪ್ರಕಾಶ್, ಕಸ್ತೂರಿ ಮಹೇಶ್, ರೇಖಾ, ಎಂ.ಡಿ. ರಮೇಶ್, ಎಚ್.ಎನ್. ರಾಮಚಂದ್ರ, ಸತೀಶ್ ಗೌಡ, ಎಂ.ಎ. ರಘು, ಎಂ.ಕೆ. ಮಂಜುನಾಥ್, ಪ್ರಮೀಳಾ ಕುಮಾರಸ್ವಾಮಿ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಕೆ. ಸುನೀತಾ ಮತ್ತು ಸಿಬ್ಬಂದಿಗಳು ಇದ್ದರು.

ಸಂಘದ ಕಟ್ಟಡಕ್ಕೆ ಉಚಿತ ಜಾಗ ದಾನ ನೀಡಿದ ಎಂ.ಡಿ. ನಾಗೇಶ್ ಮತ್ತು ಕುಟುಂಬಸ್ಥರನ್ನು ಸನ್ಮಾನಿಸಿ ಗೌರವಿಸಲಾಯಿತು. ಚಂದ್ರಿಕಾ ತಂಡ ಪ್ರಾರ್ಥಿಸಿ, ಸಂಘದ ನಿರ್ದೇಶಕ ಸಿ.ವಿ.ನಾಗೇಶ್ ಸ್ವಾಗತಿಸಿದರು. ನಾಗರಾಜ್ ಮತ್ತು ಗಾಯತ್ರಿ ನಿರೂಪಿಸಿದರು.