ಮಡಿಕೇರಿ, ಸೆ. ೪: ಕೊಡಗು ಜಿಲ್ಲೆಯಲ್ಲಿ ೨೦೨೫-೨೬ನೇ ಸಾಲಿನಲ್ಲಿ ಅತೀವೃಷ್ಟಿ, ಬರ, ಪ್ರಾಕೃತಿಕ ವಿಕೋಪ, ಹವಾಮಾನ ವೈಪರಿತ್ಯ ಮತ್ತಿತರ ಕಾರಣಗಳಿಂದಾಗಿ ಹಾನಿಯಾಗಿರುವ ಬೆಳೆಗಳ ಸಮೀಕ್ಷೆ ನಡೆಸಿ, ಗ್ರಾಮವಾರು, ಹೋಬಳಿವಾರು ಎಷ್ಟೆಷ್ಟು ಹಾನಿಯಾಗಿರುತ್ತದೆ ಎಂದು ವರದಿ ಸಲ್ಲಿಸಲು ಹಾಗೂ ಈ ಸಂಬAಧ ಸಂಬAಧಪಟ್ಟ ಸಂತ್ರಸ್ತರಿಗೆ ಪರಿಹಾರ ಪಾವತಿಸುವ ಸಲುವಾಗಿ ತಂಡ ರಚಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಕೃಷಿ ಇಲಾಖೆ ಜಂಟಿ ನಿರ್ದೇಶಕರು, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರು, ವೀರಾಜಪೇಟೆಯ ಕಾಫಿ ಮಂಡಳಿ ಉಪ ನಿರ್ದೇಶಕರು ಹಾಗೂ ಮಡಿಕೇರಿ, ಸೋಮವಾರಪೇಟೆ, ವೀರಾಜಪೇಟೆ, ಕುಶಾಲನಗರ ಮತ್ತು ಪೊನ್ನಂಪೇಟೆ ಈ ತಾಲೂಕುಗಳ ತಹಶೀಲ್ದಾರರು ತಂಡದಲ್ಲಿದ್ದಾರೆ.

ಈ ತಂಡವು ಬೆಳೆ ಹಾನಿಯಾದ ಬಗ್ಗೆ ಸಂಬAಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸ್ಥಳ ಪರಿಶೀಲನೆ ನಡೆಸಿ ಛಾಯಾಚಿತ್ರದೊಂದಿಗೆ ಬೆಳೆ ಹಾನಿಯ ಬಗ್ಗೆ ಖಚಿತ ವರದಿ ಸಲ್ಲಿಸಬೇಕು.

ತಾಲೂಕುವಾರು ತಂಡಗಳನ್ನು ಇಲಾಖೆಗಳ ಸಹಯೋಗದೊಂದಿಗೆ ರಚಿಸಿಕೊಂಡು ವರದಿಯನ್ನು ಕ್ರೋಢೀಕರಿಸಿ ಅಕ್ಟೋಬರ್ ೬ ರೊಳಗೆ ಸಂಬAಧಿಸಿದ ತಹಶೀಲ್ದಾರರು ಕಚೇರಿಗೆ ಸಲ್ಲಿಸಬೇಕು.

ಉಪ ನಿರ್ದೇಶಕರು, ತೋಟಗಾರಿಕಾ ಇಲಾಖೆ ಕೊಡಗು ಜಿಲ್ಲೆ ಇವರು ಕಾಫಿ ಬೆಳೆ ಹಾನಿ ಸಮೀಕ್ಷೆಯೊಂದಿಗೆ ಕರಿಮೆಣಸು ಬೆಳೆ ಹಾನಿಯನ್ನು ಸಹ ಅಂದಾಜಿಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.