ಮಡಿಕೇರಿ, ಸೆ. ೧೩: ತಾ. ೧೫ ರಂದು ನಡೆಯುವ ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಶಾಲಾ-ಕಾಲೇಜುಗಳಲ್ಲಿ ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆಗಳನ್ನು ಹಾಗೂ ಬೈಕ್ ಮತ್ತು ಸೈಕಲ್ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ತಿಳಿಸಿದ್ದಾರೆ.

ಚಿತ್ರ ಕಲಾ ಸ್ಪರ್ಧೆ (ಪೇಯಿಟಿಂಗ್), ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಛಾಯಾಚಿತ್ರ ಸ್ಪರ್ಧೆ(ಫೋಟೋಗ್ರಫಿ), ಉನ್ನತ ಶಿಕ್ಷಣ ಇಲಾಖೆ ಮತ್ತು ಭಾಷಣ ಸ್ಪರ್ಧೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಅವರ ಅಧೀನದಲ್ಲಿ ಕಾರ್ಯಕ್ರಮ ನಡೆಯಲಿದೆ.

ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಬೆಂಗಳೂರಿಗೆ ಬೈಕ್ ರ‍್ಯಾಲಿ ಕಾರ್ಯಕ್ರಮ ಹಾಗೂ ಬೆಳಗ್ಗೆ ೭.೩೦ ಗಂಟೆಗೆ ಗಾಂಧಿ ಮೈದಾನದಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ವರೆಗೆ ಸೈಕಲ್ ಜಾಥಾ ನಡೆಯಲಿದೆ.

ನಂತರ ಮಡಿಕೇರಿ ಗಾಂಧಿ ಭವನದಲ್ಲಿ ಉಸ್ತುವಾರಿ ಸಚಿವರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.