ವೀರಾಜಪೇಟೆ, ಅ. ೭ : ಬುಡಕಟ್ಟು ಜನಾಂಗದಿAದ ಸಮಾಜದ ಮುನ್ನೆಲೆಗೆ ಬಂದು, ನಿರಾಶ್ರಿತರಿಗೆ ದಿಡ್ಡಳ್ಳಿಯಲ್ಲಿ ಪುನರ್ವಸತಿ ಕಲ್ಪಿಸಲು ಹೋರಾಟ ಮಾಡಿ ಯಶಸ್ಸು ಗಳಿಸಿದ, ಕೊಡಗಿನ ವೀರಾಜಪೇಟೆ ಕ್ಷೇತ್ರದ ಜೆ.ಕೆ ಮುತ್ತಮ್ಮ ಅವರಿಗೆ ಬೆಂಗಳೂರಿನ ವಿಧಾನಸೌಧ ಸಭಾಂಗಣದಲ್ಲಿ ಪ್ರತಿಷ್ಠಿತ ವಾಲ್ಮೀಕಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸಂಘಟನಾ ಕ್ಷೇತ್ರದಲ್ಲಿನ ಕೊಡುಗೆಗಾಗಿ ರಾಜ್ಯ ಸರಕಾರ ಇವರನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಪ್ರಶಸ್ತಿ ವಿತರಿಸಿದರು.