ಭಾಗಮಂಡಲ, ಅ. ೧೫: ಕಾವೇರಿ ತೀರ್ಥೋದ್ಭವದ ಹಿನ್ನೆ ಲೆಯಲ್ಲಿ ಕಾವೇರಿ ಮಾತೆಗೆ ತೊಡಿಸಲು ಚಿನ್ನಾಭರಣಗಳನ್ನು ಭಾಗಮಂಡಲ ದೇವಾಲಯ ದಿಂದ ತಲಕಾವೇರಿಗೆ ಕೊಂಡೊ ಯ್ಯಲಾಯಿತು.

ಭಾಗಮಂಡಲದ ಭಗಂಡೇ ಶ್ವರ ದೇವಾಲಯದಲ್ಲಿ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ್ ಅವರಿಂದ ತಲಕಾವೇರಿ ಕ್ಷೇತ್ರದ ತಕ್ಕರಾದ ಕೋಡಿ ಮೋಟಯ್ಯ ಪಡೆದರು. ಬಳಿಕ ದೇವಾಲಯದ ಸುತ್ತ ಚಂಡೆ ವಾದ್ಯಗೋಷ್ಠಿಯೊಂದಿಗೆ ಪ್ರದಕ್ಷಿಣೆ ಬರಲಾಯಿತು. ನಂತರ ಚಿನ್ನಾಭರಣಗಳನ್ನು ತಲಕಾವೇರಿಗೆ ಕೊಂಡೊಯ್ದು ಕಾವೇರಿ ಮಾತೆಗೆ ತೊಡಿಸಲಾಯಿತು. ಒಂದು ತಿಂಗಳ ಕಾಲ ತಲಕಾವೇರಿ ತಕ್ಕರಾದ ಕೋಡಿ ಮೋಟಯ್ಯ ಅವರ ಸುಪರ್ದಿಯಲ್ಲಿ ಈ ಚಿನ್ನಾಭರಣಗಳಿರಲಿದ್ದು, ಪ್ರತಿದಿನ ಮಾತೆಗೆ ತೊಡಿಸಿ ತುಲಾಮಾಸದಲ್ಲಿ ಕಾವೇರಿ ಮಾತೆ ಕಂಗೊಳಿಸಲಿದ್ದಾಳೆ. ಕಿರು ಸಂಕ್ರಮಣದ ಬಳಿಕ ಚಿನ್ನಾಭರಣಗಳನ್ನು ತಂದು ಆಡಳಿತಾಧಿಕಾರಿಗೆ ಒಪ್ಪಿಸಲಾಗುವುದು.

ಈ ಸಂದರ್ಭ ಆಡಳಿತಾಧಿಕಾರಿ ಚಂದ್ರಶೇಖರ್, ಪಾರುಪತ್ತೆಗಾರ ಪೊನ್ನಣ್ಣ, ಭಾಗಮಂಡಲ ತಕ್ಕರಾದ ಬಳ್ಳಡ್ಕ ಅಪ್ಪಾಜಿ, ಕೊಡಗು ಗೌಡ ಸಮಾಜಗಳ ಒಕ್ಕೂಟದ ನಿರ್ದೇಶಕ, ಕುಶಾಲನಗರ ಗೌಡ ಯುವಕ ಸಂಘದ ಅಧ್ಯಕ್ಷ ಕೊಡಗನ ಹರ್ಷ, ಗೌಡ ಸಮಾಜಗಳ ಒಕ್ಕೂಟದ ಕಾರ್ಯದರ್ಶಿ ಪೇರಿಯನ ಉದಯ, ನಿರ್ದೇಶಕರಾದ ಕುಟ್ಟನ ಸುದೀಪ್, ಮಡಿಕೇರಿ ನಗರಸಭಾ ಸದಸ್ಯೆ ಶ್ವೇತ, ಯುವ ವೇದಿಕೆಯ ಪರಿಚನ ಸೋನಿಯಾ ಶರತ್, ಕೊಡಗು ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ, ದಂಬೆಕೋಡಿ ಆನಂದ, ದಕ್ಷಿಣ ಕನ್ನಡ ಕೊಡಗು ಗೌಡ ಅಭಿವೃದ್ಧಿ ಸಂಘದ ಅಧ್ಯಕ್ಷ ಪೈಕೆರ ಮನೋಹರ್, ಭಾಗಮಂಡಲ ನಾಡು ಗೌಡ ಯುವ ಒಕ್ಕೂಟದ ಅಧ್ಯಕ್ಷ ಕುದುಕುಳಿ ಕಿಶೋರ್, ಕಾರ್ಯದರ್ಶಿ ಚಲನ್, ಭಾಗಮಂಡಲ ದೇವಸ್ಥಾನದ ನಾಡು ತಕ್ಕರಾದ ಬಾರಿಕೆ ಮತ್ತು ನಂಗಾರು ಕುಟುಂಬಸ್ಥರು, ದೇಶ ತಕ್ಕರಾದ ಕುದುಪಜೆ ಮತ್ತು ಸೂರ್ತಲೆ ಕುಟುಂಬಸ್ಥರು, ಸುಂಟಿಕೊಪ್ಪ ಗೌಡ ಸಮಾಜ, ಕುಶಾಲನಗರ ಗೌಡ ಯುವ ಸಂಘ, ಮಡಿಕೇರಿ ಗೌಡ ಯುವ ವೇದಿಕೆ, ಮೈಸೂರು ಯುವ ವೇದಿಕೆ ಸದಸ್ಯರು ಮತ್ತು ಸಮಾಜಗಳ ಗಣ್ಯರು, ಪದಾಧಿಕಾರಿಗಳು, ಇತರರು ಹಾಜರಿದ್ದರು.