ಮಡಿಕೇರಿ, ಅ. ೧೬: ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನವೆಂಬರ್ ೪ ೨೦೦೨ ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊAಡ ಸಾಂತ್ವನ ಮಹಿಳಾ ಸಹಾಯವಾಣಿ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿದೆ.
ಸಾAತ್ವನ ಕೇಂದ್ರದಲ್ಲಿ ಈವರೆಗೆ ೫೫೮೧ ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, ೫೫೫೮ ಪ್ರಕರಣಗಳು ಇತ್ಯರ್ಥಗೊಂಡಿದೆ. ೨೦೨೫-೨೬ನೇ ಆರ್ಥಿಕ ಸಾಲಿನಲ್ಲಿ ೧೬೨ ಪ್ರಕರಣಗಳು ದಾಖಲಾಗಿ, ೧೪೩ ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ, ಉಳಿದ ೨೩ ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ.
ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬAಧಿಸಿದAತೆ ಒಟ್ಟು ರೂ. ೨,೫೦,೦೦೦ ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ ೨೦೨೫-೨೬ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ.
ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷ ರವೀಂದ್ರ ಬಿ.ಕೆ. ರೈ ಹಾಗೂ ಪ್ರಧಾನ ಕಾರ್ಯದರ್ಶಿ ಆರ್. ನಮಿತ ರೈ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ೯೮೮೦೯೮೫೯೩೯ ಸಂಪರ್ಕಿಸಬಹುದು ಎಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ ಅಧ್ಯಕ್ಷರು ತಿಳಿಸಿದ್ದಾರೆ.