ಇಂದು ಬಲಮುರಿಯಲ್ಲಿ ಕಾವೇರಿ ಜಾತ್ರೆ
ಲಮುರಿಯಲ್ಲಿ ಕಾವೇರಿ ಜಾತ್ರೆ ತಾ. ೧೮ರಂದು (ಇಂದು) ಸಂಭ್ರಮದಿAದ ಜರುಗಲಿದ್ದು ಅಗತ್ಯ ಸಿದ್ಧತೆ ಮಾಡಲಾಗಿದೆ.
ಹೊದ್ದೂರು ಗ್ರಾಮ ವ್ಯಾಪ್ತಿಯಲ್ಲಿರುವ ಕಣ್ವ ಮುನೀಶ್ವರ ದೇವಾಲಯ ಹಾಗೂ ಅಗಸ್ತ್ಯೇಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆ ಜರುಗಲಿದೆ.ಉತ್ಸವಕ್ಕೆ ಬರುವ ಭಕ್ತರಿಗೆ ಅನ್ನಸಂತರ್ಪಣೆಗೆ ವ್ಯವಸ್ಥೆ ಕೈಗೊಳ್ಳಲಾಗಿದೆ.ಮಧ್ಯಾಹ್ನ ೧೨ ಗಂಟೆಗೆ ಕಾವೇರಿಗೆ ಆರತಿ ಕಾರ್ಯಕ್ರಮ ನಡೆಯಲಿದ್ದು ಬಳಿಕ ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ.
ತುಲಾಸಂಕ್ರಮಣದ ಸಂದರ್ಭದಲ್ಲಿ ಕಾವೇರಿಯ ಉಗಮಸ್ಥಾನವಾದ ತಲಕಾವೇರಿಗೆ ತೆರಳಲು ಸಾಧ್ಯವಾಗದ ಭಕ್ತರು ಅಧಿಕ ಸಂಖ್ಯೆಯಲ್ಲಿ ಬಲಮುರಿಗೆ ಬಂದು ಕಾವೇರಿ ತೀರ್ಥಸ್ನಾನ ಮಾಡಿ ಪುನೀತರಾಗಿ ತೆರಳುವರು. ಪ್ರತಿವರ್ಷ ಕಾವೇರಿ ತೀರ್ಥೋದ್ಭವದ ಮರುದಿನ ಬಲಮುರಿ ಜಾತ್ರೆ ನಡೆಯುವುದು. ತಲಕಾವೇರಿಯಂತೆ ಬಲಮುರಿಯೂ ಸಹ ಬಲು ಪಾವಿತ್ರ್ಯದ ಪುಣ್ಯಸ್ಥಳ. ಬಲಮುರಿಯಲ್ಲಿ ಕಣ್ವ ಮುನೀಶ್ವರ ಹಾಗೂ ಅಗಸ್ತೆö್ಯÃಶ್ವರ ದೇವಾಲಯಗಳಿವೆ. ಇಲ್ಲಿ ಪಿಂಡ ಪ್ರದಾನ ಮಾಡಿದರೆ ತಲಕಾವೇರಿಯಲ್ಲಿ ಮಾಡಿದಷ್ಟೇ ಪುಣ್ಯ ಬರುತ್ತದೆ ಎಂಬುದು ನಂಬಿಕೆ.
ಅಗಸ್ತೆö್ಯÃಶ್ವರ ದೇವಾಲಯ ಇಲ್ಲಿನ ಪ್ರಮುಖ ಆಕರ್ಷಣೆಯಾಗಿದ್ದು ನದಿಯ ಇನ್ನೊಂದು ತೀರದಲ್ಲಿ ಕಣ್ವಮುನೀಶ್ವರ ದೇವಾಲಯವಿದ್ದು ಜೀರ್ಣೋದ್ದಾರ ಕಾರ್ಯ ನಡೆದಿದೆ. ಗ್ರಾಮಸ್ಥರ ನೆರವಿನಿಂದ ದೇವಾಲಯ ಅಭಿವೃದ್ದಿಯಾಗುತ್ತಿದೆ. ದೇವಾಲಯದ ಗರ್ಭಗುಡಿ, ಮುಖಮಂಟಪ ಹಾಗೂ ಪೌಳಿಗಳನ್ನು ಹೊಸದಾಗಿ ನಿರ್ಮಾಣ ಮಾಡಲಾಗಿದೆ. ಪ್ರತಿವರ್ಷ ಗ್ರಾಮಸ್ಥರು ಜಾತ್ರೆಯ ಸಂದರ್ಭದಲ್ಲಿ ದೇವಾಲಯದ ಬಳಿ ಸ್ವಚ್ಚತಾ ಕಾರ್ಯ ಕೈಗೊಳ್ಳುತ್ತಾರೆ.
- ದುಗ್ಗಳ ಸದಾನಂದ