ಸುಂಟಿಕೊಪ್ಪ,ಅ. ೨೧: ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಹಾಗೂ ಸ್ವಚ್ಛ ಭಾರತ್ ಮಿಷನ್ ವತಿಯಿಂದ ಮರು ಬಳಕೆಯಾಗದ ಪ್ಲಾಸ್ಟಿಕ್ ನಿಷೇಧ ಅಭಿಯಾನವನ್ನು ನಡೆಸಲಾಯಿತು.

ಇಲ್ಲಿನ ಕನ್ನಡ ವೃತ್ತದಲ್ಲಿ ಮರು ಬಳಕೆಯಾಗದ ಪ್ಲಾಸ್ಟಿಕ್ ಕೈಚೀಲ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಬಾಟಲಿಗಳನ್ನು ಉಪಯೋಗಿಸುವುದು ಮತ್ತು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವೆಂಬ ಮಾಹಿತಿಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಮತ್ತು ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗಳು ನೀಡಿದರು. ಜಾಗೃತಿ ಜಾಥಾವನ್ನು ನಡೆಸಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್‌ಕುಮಾರ್, ಅಭಿವೃದ್ಧಿ ಅಧಿಕಾರಿ ವಿ.ಜಿ. ಲೋಕೇಶ್, ಸದಸ್ಯರುಗಳಾದ ರಫೀಕ್‌ಖಾನ್, ಪಿ.ಎಫ್. ಸಬಾಸ್ಟೀನ್, ಮಂಜುನಾಥ್, ಪಂಚಾಯಿತಿ ಲೆಕ್ಕ ಪರಿಶೋಧಕಿ ಚಂದ್ರಕಲಾ, ಗಣಕ ಯಂತ್ರ ಸಿಬ್ಬಂದಿ ಸಂದ್ಯಾ, ಕರವಸೂಲಿಗಾರ ಶ್ರೀನಿವಾಸ್ ಹಾಗೂ ಪೌರಕಾರ್ಮಿಕರು ಇದ್ದರು.