ಗೋಣಿಕೊಪ್ಪಲು, ಅ. ೨೩: ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಕೊಡಗಿನ ಹಲವು ಯೋಜನೆಗಳಿಗೆ ಮುಖ್ಯಮಂತ್ರಿಗಳಿAದ ಅನು ಮೋದನೆ ಪಡೆಯುವ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಡಲಾಗಿದೆ ಎಂದು ಮಾಜಿ ಎಂಎಲ್‌ಸಿ, ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ ಹೇಳಿದರು.

ಗೋಣಿಕೊಪ್ಪಲುವಿನ ಖಾಸಗಿ ಸಭಾಂಗಣದಲ್ಲಿ ಕೊಡಗು ಕಿತ್ತಳೆ ಬೆಳೆಗಾರರ ಸಹಕಾರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಅಧಿಕಾರ ಪಡೆದ ನಂತರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಮೊದಲ ಸಭೆಯಲ್ಲಿ ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರಾö್ಯಕ್ ಅಳವಡಿಸಲು ಮುಖ್ಯಮಂತ್ರಿಗಳ ಬಳಿ ಬೇಡಿಕೆ ಮಂಡಿಸಲಾಯಿತು.

ಬೇಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಂಕಿತ ಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಈ ಕಾಮಗಾರಿಯೂ ಆರಂಭಗೊಳ್ಳಲಿದೆ. ಕೊಡಗಿನ ಶಾಸಕದÀ್ವಯರ ಸಹಕಾರ ಸದಾ ಸ್ಮರಿಸುತ್ತೇನೆ. ಕೊಡಗಿನ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗಾಗಿ ಉತ್ತಮ ರೀತಿಯಲ್ಲಿ ಸ್ಪಂದನ ನೀಡುತ್ತಿದ್ದಾರೆ. ಕೊಡಗು ಕಿತ್ತಳೆ ಬೆಳೆಗಾರರ ಸಹಕಾರ ಸಂಘದ ಅಭಿವೃದ್ಧಿಗಾಗಿ ಶಾಸಕ ಪೊನ್ನಣ್ಣ ಅವರು ರೂ. ೫೦ ಲಕ್ಷ ಅನುದಾನವನ್ನು ಮಂಜೂರು ಮಾಡುವುದಾಗಿ ಭರವಸೆ ನೀಡಿದ್ದಾರೆ. ಈ ಅನುದಾನದಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಮುಂದುವರೆಯಲಿದೆ, ಸಂಘದಲ್ಲಿ ಸಣ್ಣ ವೇತನ ಪಡೆದು ಸಿಬ್ಬಂದಿಗಳು ಹಲವು ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಮುಂದೆ ಸಿಬ್ಬಂದಿಗಳಿಗೆ ಉತ್ತಮ ವೇತನದ ಭರವಸೆ ನೀಡಿದರು.

ಸಂಘವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. ಸದಸ್ಯರುಗಳು ಸಹಕಾರ ನೀಡುವಂತೆ ಈ ವೇಳೆ ಮನವಿ ಮಾಡಿದರು.

ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಡಗು ಕಿತ್ತಳೆ ಬೆಳೆಗಾರರ ಸಹಕಾರ ಸಂಘದ ಉಪಾಧ್ಯಕ್ಷ ಮಳವಂಡ ಅರವಿಂದ್ ಕುಟ್ಟಪ್ಪ ಮಾತನಾಡಿ, ಕಿತ್ತಳೆ ಬೆಳೆಗಾರರ ಸಂಘದ ಅಭಿವೃದ್ಧಿಗಾಗಿ ಅರುಣ್ ಮಾಚಯ್ಯ ವಿಶೇಷ ಕೊಡುಗೆ ನೀಡುತ್ತಲೇ ಬಂದಿದ್ದಾರೆ. ಕರಾಟೆ ಪಟುವಾಗಿ ಅಂತರರಾಷ್ಟಿçÃಯ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ಇದೀಗ ಕ್ರೀಡಾ ಪ್ರಾಧಿಕಾರದ ಜವಾಬ್ದಾರಿಯನ್ನು ವಹಿಸಿಕೊಂಡ ನಂತರ ಈ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಹಾಗೂ (ಮೊದಲ ಪುಟದಿಂದ) ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಿದ್ದಾರೆ ಎಂಬ ಅಚಲ ವಿಶ್ವಾಸ ಹೊಂದಿದ್ದೇವೆ ಎಂದರು. ನಿರ್ದೇಶಕರುಗಳಾದ ಕಿರಿಯಮಾಡ ಅರುಣ್ ಪೂಣಚ್ಚ, ಕಡೇಮಾಡ ಸುನಿಲ್ ಮಾದಪ್ಪ, ಎಸ್.ಎಸ್. ಸುರೇಶ್, ಬಾನಂಡ ಪೃಥ್ವಿ, ಕಾಡ್ಯಮಾಡ ಸುಮನ್, ಚೇಂದ್ರಿಮಾಡ ಕಾಳಯ್ಯ, ತಮ್ಮ ಅಭಿಪ್ರಾಯವನ್ನು ಹಂಚಿಕೊAಡರು. ಚೇಂದAಡ ಸುಮಿಸುಬ್ಬಯ್ಯ, ಶೋಭಾ ಕುಟ್ಟಪ್ಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಮಂತ್, ಚಾಂದಿನಿ ಮಾಚಯ್ಯ ಸೇರಿದಂತೆ ಇನ್ನಿತರ ಪ್ರಮುಖರು ಪಾಲ್ಗೊಂಡಿದ್ದರು.

ಸುಮಿ ಸುಬ್ಬಯ್ಯ ಪ್ರಾರ್ಥಿಸಿ, ಸಿಇಓ ಹೇಮಂತ್ ನಿರೂಪಿಸಿ, ವಂದಿಸಿದರು.