ಪೊನ್ನಂಪೇಟೆ, ಅ. ೨೪: ಅಕ್ಷಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಕ್ತದಾನ ಮತ್ತು ಅಂಗಾAಗ ದಾನ ಶಿಬಿರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿರುವುದಾಗಿ ಟ್ರಸ್ಟ್ನ ಸ್ಥಾಪಕ ಅಧ್ಯಕ್ಷ ನಿವೃತ್ತ ಸೈನಿಕ ಕೆ.ಕೆ ಸೋಮಯ್ಯ ಮಾಹಿತಿ ನೀಡಿದ್ದಾರೆ. ಟ್ರಸ್ಟ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ತಾ. ೨೭ ರಂದು ತಿತಿಮತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಿಬಿರ ಆಯೋಜನೆಯಾಗಿದೆ ಎಂದು ತಿಳಿಸಿದ್ದಾರೆ. ಶಿಬಿರಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಮೈಸೂರು ಮತ್ತು ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಹಿರಿಯ ಅಂಗ ಕಸಿ ಸಂಯೋಜಕ ಚೂಡೇಶ್ ಭಾಗವಹಿಸಲಿದ್ದಾರೆ. ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಪೊನ್ನಂಪೇಟೆ, ಸೇವಾ ಭಾರತಿ ತಿತಿಮತಿ, ದೇವರಪುರ, ಪ್ರಾಥಮಿಕ ಆರೋಗ್ಯ ಕೇಂದ್ರ, ಸ್ವಾಮಿ ವಿವೇಕಾನಂದ ಫೌಂಡೇಶನ್ ತಿತಿಮತಿ, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸರಗೂರು ಸಂಯುಕ್ತ ಆಶ್ರಯದಲ್ಲಿ ಶಿಬಿರ ನಡೆಯಲಿದೆ. ಸಾರ್ವಜನಿಕರು ರಕ್ತದಾನ ಮಾಡುವ ಮತ್ತು ರಕ್ತದಾನದ ಮಹತ್ವ ಮತ್ತು ಅದರ ಅರಿವು ಮೂಡಿಸಿ, ಸಮಾಜದಲ್ಲಿ ರಕ್ತದ ಪರಿಸ್ಥಿತಿಯನ್ನು ನಿವಾರಿಸುವ ಉದ್ದೇಶದೊಂದಿಗೆ ಈ ಶಿಬಿರವನ್ನು ಹಮ್ಮಿಕೊಂಡಿದ್ದು, ಜತೆಗೆ ಅಂಗಾAಗ ದಾನ ಮತ್ತು ಪ್ರತಿಜ್ಞಾ ವಿಧಿಯ ಕಾರ್ಯಕ್ರಮವೂ ಒಳಗೊಂಡಿದೆ ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಟ್ರಸ್ಟ್ನ ಸಹಾಯವಾಣಿ ಸಂಖ್ಯೆ ೯೩೫೩೮೭೧೪೬೬, ೭೦೦೯೮೬೫೧೧೯ ಸಂಪರ್ಕಿಸುವAತೆ ಮನವಿ ಮಾಡಿದ್ದಾರೆ. ಈ ಸಂದರ್ಭ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಕುಸುಮಾವತಿ, ಮಾಧ್ಯಮ ಮತ್ತು ಸಂಪನ್ಮೂಲ ಸಲಹೆಗಾರ ಸಂದೇಶ್ ಜೋಸೆಫ್ ಡಿಸೋಜಾ ಇದ್ದರು.