ಕೂಡಿಗೆ, ಅ. ೨೮: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕೊಡಗು ಜಿಲ್ಲೆ ಹಾಗೂ ವಿವೇಕಾನಂದ ಪದವಿ ಪೂರ್ವಕಾಲೇಜು ಕುಶಾಲನಗರ ಇವರ ಜಂಟಿ ಆಶ್ರಯದಲ್ಲಿ ಕುಶಾಲನಗರ ಮತ್ತು ಸೋಮವಾರಪೇಟೆ ತಾಲೂಕುಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ಕೂಡಿಗೆಯ ಸರಕಾರಿ ಕ್ರೀಡಾ ಪ್ರೌಢಶಾಲಾ ಮೈದಾನದಲ್ಲಿ ಆರಂಭಗೊAಡಿತು.

ಕುಶಾಲನಗರ ಮಹಾತ್ಮಗಾಂಧಿ ಪದವಿ ಕಾಲೇಜು ಪ್ರಾಂಶುಪಾಲೆ ಡಿ.ಎ. ಲಿಖಿತ ಉದ್ಘಾಟಿಸಿ ಮಾತನಾಡಿ, ಸಮಾಜ ಸ್ವಾಸÀ್ಥöವಾಗಿರಬೇಕಾದರೆ ಪ್ರತಿಯೊಬ್ಬರ ದೇಹ ಮತ್ತು ಮನಸ್ಸು ಸ್ವಾಸÀ್ಥö್ಯವಾಗಿರಬೇಕು, ಇವುಗಳ ಜೊತೆಗೆ ಕ್ರೀಡೆ ಸಹಾಯಕವಾಗುವುದು. ಕ್ರೀಡೆಯ ಬಗ್ಗೆ ಅಭಿರುಚಿ ಬಹುಮುಖ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಶಿರಂಗಾಲ ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ಸೋಮಚಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರೀಡಾಪಟುಗಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ದೇಶಕ್ಕೆ ಉತ್ತಮ ಕ್ರೀಡಾಪಟುಗಳನ್ನು ತಯಾರಿಮಾಡಲು ಕ್ರೀಡಾ ಶಾಲೆ, ಸೈನಿಕ ಶಾಲೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ತುಂಬಾ ಅಗತ್ಯವಾಗಿವೆ ಎಂದರು. ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನಾಗೇಶ್ ಅಥ್ಲೆಟಿಕ್ಸ್ ಕ್ರೀಡೆಗಳಿಗೆ ಚಾಲನೆ ನೀಡಿದರು.

ಈ ಸಂದರ್ಭ ಶನಿವಾರಸಂತೆ ಭಾರತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಅಶೋಕ್, ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸ ರಮೇಶ್ ಹಾಗೂ ವಿವೇಕಾನಂದ ಪಿ.ಯು. ಕಾಲೇಜಿನ ಪ್ರಾಂಶುಪಾಲೆ ಕ್ಲಾರಾ ರೇಷ್ಮಾ ಕೂಡಿಗೆ ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಮಾಜಿ ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ ಸೇರಿದಂತೆ ಕಾಲೇಜು ಉಪನ್ಯಾಸಕರ ವೃಂದ ಪಾಲ್ಗೊಂಡಿದ್ದರು.

ವಿದ್ಯಾರ್ಥಿ ತೇಜ ತಂಡದವರು ಪ್ರಾರ್ಥನೆ ನೆರವೇರಿಸಿದರು.ಉಪನ್ಯಾಸಕಿ ಜ್ಯೋತಿ ಲಕ್ಷ್ಮಿ ನಿರೂಪಿದರು. ಉಪನ್ಯಾಸಕ ಗಂಗಾಧರ ವಂದಿಸಿದರು. ತೀರ್ಪುಗಾರರಾಗಿ ವಿವಿಧ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕರಾದ ರಂಗಸ್ವಾಮಿ, ನಾಚಪ್ಪ, ಚಿದಾನಂದ ಮೂರ್ತಿ, ದಿನೇಶ್, ಶಿವಕುಮಾರ್, ಲೋಹಿತ್, ಪವನ್, ಸತೀಶ್ ಕಾರ್ಯನಿರ್ವಹಿಸಿದರು.