ಸೋಮವಾರಪೇಟೆ, ಅ. ೨೯: ಕಳೆದ ನಾಲ್ಕು ವರ್ಷಗಳಿಂದ ಶುದ್ಧ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇನಕನಹಳ್ಳಿ ಗ್ರಾಮದ ನೇತಾಜಿ ನಗರಕ್ಕೆ ಕುಡಿಯುವ ನೀರಿನ ಸೌಕರ್ಯ ಕಲ್ಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪರಮೇಶ್‌ಕುಮಾರ್ ಅವರನ್ನು ಪ್ರವೀಣ್ ಶೆಟ್ಟಿ ಬಣದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸನ್ಮಾನಿಸಿದರು.

ಗ್ರಾಮದಲ್ಲಿ ೨೫ ಕೂಲಿ ಕಾರ್ಮಿಕ ಕುಟುಂಬಗಳು ವಾಸ ಮಾಡುತ್ತಿದ್ದು, ಹಲವು ವರ್ಷಗಳಿಂದ ನೀರಿನ ಸಮಸ್ಯೆಯಾಗಿತ್ತು. ಹಣ ತೆತ್ತು ಬಾಡಿಗೆ ವಾಹನದಲ್ಲಿ ನೀರನ್ನು ತರಿಸಿಕೊಳ್ಳುತ್ತಿದ್ದರು. ನೀರಿನ ಸಮಸ್ಯೆಯ ಬಗ್ಗೆ ಪಂಚಾಯಿತಿಗೆ ಮನವಿ ನೀಡಿದ್ದರೂ ಸಮಸ್ಯೆ ಬಗೆಹರಿದಿರಲಿಲ್ಲ. ಕಳೆದ ಮೂರು ತಿಂಗಳ ಹಿಂದೆ ಸಂಘಟನೆಯ ಪದಾಧಿಕಾರಿಗಳು, ನೇತಾಜಿ ನಗರದ ನಿವಾಸಿಗಳೊಂದಿಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ಅವರನ್ನು ಭೇಟಿಯಾಗಿ ಸಮಸ್ಯೆ ಹೇಳಿಕೊಂಡಿದ್ದರು. ಆ ಸಮಯದಲ್ಲಿ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುವ ಭರವಸೆ ನೀಡಿದ್ದರು. ಇದೀಗ ಐದು ಕಿ.ಮೀ. ದೂರದಿಂದ ಪೈಪ್‌ಲೈನ್ ಅಳವಡಿಸಿ, ಕುಡಿಯುವ ನೀರಿನ ಸೌಲಭ್ಯ ಒದಗಿಸಿರುವ ಹಿನ್ನೆಲೆಯಲ್ಲಿ ನಿವಾಸಿಗಳು ಮತ್ತು ಕರವೇ ಪದಾಧಿಕಾರಿಗಳು ಪರಮೇಶ್ ಕುಮಾರ್ ಅವರನ್ನು ಕಚೇರಿಯಲ್ಲಿ ಭೇಟಿ ಮಾಡಿ, ಸನ್ಮಾನಿಸಿದರು.

ಈ ಸಂದರ್ಭ ಪ್ರವೀಣ್ ಶೆಟ್ಟಿ ಬಣದ ಕರವೇ ಜಿಲ್ಲಾಧ್ಯಕ್ಷ ಕೆ.ಎನ್. ದೀಪಕ್, ಯುವ ಘಟಕದ ಅಧ್ಯಕ್ಷ ವಸಂತ್ ಆಚಾರ್ಯ, ನಗರ ಘಟಕದ ಅಧ್ಯಕ್ಷ ಬಿ.ಎಸ್. ಮಂಜುನಾಥ್, ಪ್ರಮುಖರಾದ ರವೀಶ್, ಚಂದ್ರು, ಜಗನ್ನಾಥ್, ಅಜಯ್, ಇಬ್ರಾಹಿಂ, ಸೀಮಂತ್, ಉದಯ್ ಮತ್ತಿತರರು ಇದ್ದರ