ವೀರಾಜಪೇಟೆ, ಅ. ೩೧: ವಿದ್ಯಾಸಂಸ್ಥೆಗಳ ನಡುವೆ ಪರಸ್ಪರ ಬಾಂಧವ್ಯ ಮೂಡಿದಾಗ ಮಾತ್ರ ವಿದ್ಯಾರ್ಥಿಗಳು ಮಾತ್ರವಲ್ಲದೆ ಸಂಸ್ಥೆಯ ಸರ್ವತೋಮುಖ ಪ್ರಗತಿ ಸಾಧ್ಯ ಎಂದು ವೀರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೆ. ಫಾ. ಮದಲೈ ಮುತ್ತು ಅಭಿಪ್ರಾಯಪಟ್ಟರು. ಕಾಲೇಜಿನಲ್ಲಿ ಜಿಲ್ಲೆಯ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಎಕೋಸ್ ಆಫ್ ದಿ ಅರ್ಥ್ ಧ್ಯೇಯದಡಿಯಲ್ಲಿ ಆನ್ಸ್ ಫೆಸ್ಟ್ನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾಸಂಸ್ಥೆಗಳು ಕಾರ್ಯಕ್ರಮವನ್ನು ಆಯೋಜಿಸಿ ಮತ್ತೊಂದು ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳನ್ನು ಆಹ್ವಾನಿಸಿ ಶೈಕ್ಷಣಿಕ ಕಾರ್ಯಕ್ರಮಗಳನ್ನು ನಡೆಸುವುದರಿಂದ ಸಂಸ್ಥೆಗಳ ನಡುವೆ ಪರಸ್ಪರ ಬಾಂಧವ್ಯ ಬೆಳೆಯುತ್ತದೆ ಎಂದರು.

ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಉದ್ಘಾಟನಾ ಸಮಾರಂಭದ ಬಳಿಕ ನಿಗದಿಪಡಿಸಿದ ತರಗತಿಗಳಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು.

ಅಂತಿಮವಾಗಿ ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು. ಮಡಿಕೇರಿಯ ಸಂತ ಮೈಕಲರ ಪದವಿ ಪೂರ್ವ ಕಾಲೇಜು ರನ್ನರ್ಸ್ ಟ್ರೋಫಿಯನ್ನು ಪಡೆದುಕೊಂಡಿತು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಟಿ, ಗಾಯಕಿ ಬಟ್ಟಿಯಂಡ ಲಿಖಿತಾ ಮಾತನಾಡಿ, ವಿದ್ಯಾಸಂಸ್ಥೆಯಲ್ಲಿ ಆಯೋಜಿಸುವಂತಹ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು.

ಕಾಲೇಜಿನಲ್ಲಿ ಲಭ್ಯವಿರುವಂತಹ ಎಲ್ಲಾ ಅವಕಾಶಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ತಮ್ಮ ವ್ಯಕ್ತಿತ್ವವನ್ನು ವಿಕಸನಗೊಳಿಸಿಕೊಳ್ಳಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಗಮನ ನೀಡಬೇಕೆಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪದವಿ ಕಾಲೇಜಿನ ವ್ಯವಸ್ಥಾಪಕ ರೆ. ಫಾ. ಮದಲೈ ಮುತ್ತು ಮಾತನಾಡಿ, ವಿದ್ಯಾರ್ಥಿಗಳು ಶಿಸ್ತನ್ನು ಮೈಗೂಡಿಸಿಕೊಳ್ಳುವುದರ ಮೂಲಕ ಪೋಷಕರಿಗೆ ಹಾಗೂ ಸಂಸ್ಥೆಗೆ ಹೆಸರು ತರಬೇಕೆಂದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನ ವಿತರಿಸಿದರು. ವೇದಿಕೆಯಲ್ಲಿ ಸಂತ ಅನ್ನಮ್ಮ ವಿದ್ಯಾ ಸಂಸ್ಥೆಗಳ ವ್ಯವಸ್ಥಾಪಕ ಹಾಗೂ ಪ್ರಧಾನ ಗುರುಗಳಾದ ರೆ. ಫಾ. ಜೇಮ್ಸ್ ಡೊಮಿನಿಕ್, ಸಹಾಯಕ ಗುರುಗಳಾದ ಫಾ. ಅಭಿಲಾಶ್, ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ ಬಿ.ಡಿ., ಪ್ರಾಧ್ಯಾಪಕ ಅರ್ಜುನ್, ವಿದ್ಯಾರ್ಥಿ ಸಂಘದ ನಾಯಕ ಕೃಷ್ಣ ಶಾಸ್ತಿç ಉಪಸ್ಥಿತರಿದ್ದರು

ವಿಜೇತ ತಂಡಗಳ ವಿವರ : ಹತ್ತು ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು ಅದರಲ್ಲಿ ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಪಿಯು ಕಾಲೇಜು ಚಾಂಪಿಯನ್ ಆಗಿ ಹೊರಹೊಮ್ಮಿ ಟ್ರೋಫಿ, ರೂ. ೧೫,೫೫೫ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ಪಡೆದುಕೊಂಡಿತು.

ಮಡಿಕೇರಿಯ ಸಂತ ಮೈಕಲರ ಪಿ ಯು ಕಾಲೇಜು ರನ್ನರ್ಸ್ ಆಗಿ ಹೊರಹೊಮ್ಮಿ ರೂ. ೧೧,೧೧೧ ನಗದು, ಟ್ರೋಫಿ ಹಾಗೂ ಪ್ರಶಸ್ತಿ ಪತ್ರಗಳನ್ನು ಪಡೆದುಕೊಂಡಿತು. ವೈಯಕ್ತಿಕ ಸ್ಪರ್ಧೆಗಳಲ್ಲಿ ಟ್ರೆಶರ್ ಹಂಟ್‌ನಲ್ಲಿ ಸಿದ್ದಾಪುರದ ಸೆಂಟ್ ಆನ್ಸ್ ಪಿಯು ಕಾಲೇಜು ಪ್ರಥಮ, ಪೆನ್ಸಿಲ್ ಸ್ಕೆಚ್‌ನಲ್ಲಿ ಕೂರ್ಗ್ ಇನ್ಸಿಟಿಟ್ಯೂಟ್ ಕಾಲೇಜು (ಪ್ರ), ಕುಶಾಲನಗರ ವಿವೇಕಾನಂದ ಪಿಯು ಕಾಲೇಜು (ದ್ವಿ), ರಾಂಪ್ ವಾಕ್‌ನಲ್ಲಿ ಕೂರ್ಗ್ ಇನ್ಸಿಟಿಟ್ಯೂಟ್ ಕಾಲೇಜು (ಪ್ರ) ವೀರಾಜಪೇಟೆ ಸಂತ ಅನ್ನಮ್ಮ ಪಿಯು ಕಾಲೇಜು (ದ್ವಿ), ಗೇಮಿಂಗ್‌ನಲ್ಲಿ ಮಡಿಕೇರಿ ಸಂತ ಮೈಕಲರ ಕಾಲೇಜು (ಪ್ರ), ಕಾವೇರಿ ಕಾಲೇಜು ವೀರಾಜಪೇಟೆ (ದ್ವಿ), ಬೆಸ್ಟ್ ಔಟ್ ಓಫ್ ವೇಸ್ಟ್ನಲ್ಲಿ ಕೂರ್ಗ್ ಇನ್ಸಿಟಿಟ್ಯೂಟ್ ಕಾಲೇಜು (ಪ್ರ)ಮಡಿಕೇರಿ ಸಂತ ಮೈಕಲರ ಕಾಲೇಜು (ದ್ವಿ), ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಸಿದ್ದಾಪುರ ಸಂತ ಅನ್ನಮ್ಮ ಕಾಲೇಜು (ಪ್ರ), ಸಂತ ಮೈಕಲರ ಕಾಲೇಜು (ದ್ವಿ), ರೀಲ್ ಮೇಕಿಂಗ್‌ನಲ್ಲಿ ವಿವೇಕಾನಂದ ಪಿಯು ಕಾಲೇಜು (ಪ್ರ) ಕೂರ್ಗ್ ಇನ್ಸಿಟಿಟ್ಯೂಟ್ ಕಾಲೇಜು (ದ್ವಿ), ಕ್ವಿಜ್‌ನಲ್ಲಿ ಗೋಣಿಕೊಪ್ಪಲು ಕಾಲ್ಸ್ ಕಾಲೇಜು (ಪ್ರ), ಕೂರ್ಗ್ ಇನ್ಸಿಟಿಟ್ಯೂಟ್ ಕಾಲೇಜು (ದ್ವಿ), ಸ್ಪೆಲ್ ಬಿನಲ್ಲಿ ಕಾಲ್ಸ್ ಕಾಲೇಜು (ಪ್ರ), ಕೂರ್ಗ್ ಇನ್ಸಿಟ್ಟಿಟ್ಯೂಟ್ ಕಾಲೇಜು (ದ್ವಿ), ಫೇಸ್ ಪೈಂಟಿAಗ್‌ನಲ್ಲಿ ವೀರಾಜಪೇಟೆ ಸಂತ ಅನ್ನಮ್ಮ ಪಿ ಯು ಕಾಲೇಜು (ಪ್ರ), ಕೂರ್ಗ್ ಇನ್ಸಿಟಿಟ್ಯೂಟ್ ಕಾಲೇಜು (ದ್ವಿ) ಬಹುಮಾನವನ್ನು ಪಡೆದುಕೊಂಡಿತು. ವಿಜೇತ ತಂಡಗಳಿಗೆ ಪ್ರಶಸ್ತಿ ಪತ್ರ, ಟ್ರೋಫಿಗಳನ್ನು ವಿತರಿಸಲಾಯಿತು.