ಶನಿವಾರಸಂತೆ, ನ. ೨: ಪಟ್ಟಣದ ಶ್ರೀಬೀರಲಿಂಗೇಶ್ವರ, ಪ್ರಬಲಭೈರವಿ, ಪರಿವಾರ ದೇವರ ಸೇವಾ ಸಮಿತಿ ವತಿಯಿಂದ ಶ್ರೀಬೀರಲಿಂಗೇಶ್ವರ, ಪ್ರಬಲಭೈರವಿ, ಪರಿವಾರ ದೇವರ ೭ನೇ ವರ್ಷದ ವಾರ್ಷಿಕ ಪೂಜಾ ಮಹೋತ್ಸವ ನವೆಂಬರ್ ೧೦ ರಂದು ನಡೆಯಲಿದೆ.ಅಂದು ಬೆಳಿಗ್ಗೆ ೫.೩೦ ಗಂಟೆಯಿAದ ವಿಶೇಷ ಪೂಜೆ ಹಾಗೂ ಲೋಕ ಕಲ್ಯಾಣಾರ್ಥವಾಗಿ ಹೋಮ ಮತ್ತು ಮಹಾ ಪೂಜೆ ಏರ್ಪಡಿಸಲಾಗಿದೆ.ಅಂದು ಬೆಳಿಗ್ಗೆ ೫.೩೦ ಗಂಟೆಗೆ ಗಂಗೆ ಪೂಜೆ, ಗೋಪೂಜೆ, ಮಂಗಳಾರತಿ, ನಂತರ ಸಹಕಾರ ಬ್ಯಾಂಕ್ ಹತ್ತಿರದಿಂದ ಶ್ರೀಬೀರಲಿಂಗೇಶ್ವರ ದೇವಸ್ಥಾನದವರೆಗೆ ಮಹಿಳೆಯರ ಕಲಶ-ಕುಂಭ ಮೆರವಣಿಗೆ ನಡೆಯಲಿದೆ. ೭ ಗಂಟೆಗೆ ಶ್ರೀಗಣಪತಿ-ಪಾರ್ವತಿ-ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಮಹಾಸಂಕಲ್ಪ, ಮಹಾಮಂಗಳಾರತಿ ಮತ್ತು ಪ್ರಸಾದ ವಿನಿಯೋಗವಿದೆ.

ನಂತರ ೭.೩೦ಕ್ಕೆ ಊರು ಒಡೆಯರ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ೯ ಗಂಟೆಗೆ ಬಿದರೂರು ಬ್ರಹ್ಮದೇವರ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ೯-೩೦ಕ್ಕೆ ಬಿದರೂರು ಶ್ರೀಬಸವೇಶ್ವರ ದೇವರ ಮಹಾಪೂಜೆ, ಮಹಾಮಂಗಳಾರತಿ ಮತ್ತು ಪ್ರಸಾದ ವಿನಿಯೋಗ, ೧೦ ಗಂಟೆಗೆ ಹೆಮ್ಮನೆ ಗ್ರಾಮದ ಮಾರಮ್ಮ ಮತ್ತು ಶ್ರೀಬಸವೇಶ್ವರ ದೇವರ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ೧೧ ಗಂಟೆಗೆ ತ್ಯಾಗರಾಜ ಕಾಲೋನಿಯ ಶ್ರೀಚಾಮುಂಡೇಶ್ವರಿ ದೇವಿ-ಗುಳಿಗ ದೈವದ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ೧೧.೩೦ಕ್ಕೆ ಶ್ರೀವಿಜಯ ವಿನಾಯಕ ದೇವರ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಲಿದೆ.

ಮಧ್ಯಾಹ್ನ ೧೨ ಗಂಟೆಗೆ ಬನ್ನಿಮಂಟಪದಲ್ಲಿ ಮಹಾ ಪೂಜೆ, ಮಹಾಮಂಗಳಾರತಿ ಮತ್ತು ಪ್ರಸಾದ ವಿನಿಯೋಗ, ೧೨.೩೦ಕ್ಕೆ ಶ್ರೀರಾಮ ಮಂದಿರದಲ್ಲಿ ದೇವರ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗವಿದೆ. ೧ ಗಂಟೆಗೆ ಪಟ್ಟಣದ ಮುಖ್ಯರಸ್ತೆಯಲ್ಲಿರುವ ಜಾಮೀಯ ಮಸೀದಿಯಲ್ಲಿ ಪ್ರಾರ್ಥನೆ ನಡೆಯಲಿದೆ. ೧.೩೦ಕ್ಕೆ ಶ್ರೀಬೀರಲಿಂಗೇಶ್ವರ ಪ್ರಬಲ ಭೈರವಿ ದೇವರ ಮಹಾ ಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗವಿದೆ.

ಸಂಜೆ ೫ ಗಂಟೆಗೆ ವಿಶೇಷ ಪೂಜೆಗಳಾದ ದೀಪಾರಾಧನೆ, ಗಣಪತಿಪೂಜೆ, ಪಂಚಗವ್ಯ, ಪುಣ್ಯಾಹ, ದೇವನಾಂದಿ, ಗಣಪತಿ ಹೋಮ, ಧನ್ವಂತರಿ ಹೋಮ, ಮೂಲದೇವರಿಗೆ ಫಲ-ಪಂಚಾಮೃತ ಅಭಿಷೇಕ, ಏಕವಾರು ರುದ್ರಾಭಿಷೇಕ, ಮಹಾಬಲಿ, ಮಹಾಪೂಜೆ, ಮಹಾಮಂಗಳಾರತಿ, ತೀರ್ಥ ಪ್ರೋಕ್ಷಣೆ ಹಾಗೂ ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ. ಪೂಜೆಯ ನಂತರ ಭಕ್ತಾದಿಗಳಿಗೆ ಅನ್ನದಾಸೋಹ ಏರ್ಪಡಿಸಲಾಗಿದೆ ಎಂದು ಶ್ರೀಬೀರಲಿಂಗೇಶ್ವರ, ಪ್ರಬಲಭೈರವಿ, ಪರಿವಾರ ದೇವರ ಸೇವಾ ಸಮಿತಿ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.