ಮಡಿಕೇರಿ, ನ. ೩: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು, ಮೂರ್ನಾಡು ಹೋಬಳಿ ಘಟಕ, ಮೂರ್ನಾಡು ಗ್ರಾಮ ಪಂಚಾಯಿತಿ, ಪಿ.ಎಂ.ಶ್ರೀ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ತಾ.೬ ರಂದು ಮೂರ್ನಾಡಿನಲ್ಲಿ ೭೦ನೇ ಕನ್ನಡ ರಾಜ್ಯೋತ್ಸವ “ಕನ್ನಡ ಹಬ್ಬ” ನಡೆಯಲಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಕನ್ನಡ ಸಾಹಿತ್ಯ ಪರಿಷತ್‌ನ ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ಅಂದು ಬೆಳಿಗ್ಗೆ ೮ ಗಂಟೆಯಿAದ ಮೂರ್ನಾಡಿನ ಪಿ.ಎಂ.ಶ್ರೀ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ.

ಬೆಳಿಗ್ಗೆ ೯ ಗಂಟೆಗೆ ಭವ್ಯ ಮೆರವಣಿಗೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ವಿ.ದೀರ್ಘಕೇಶಿ ಶಿವಣ್ಣ ಉದ್ಘಾಟಿಸಲಿದ್ದಾರೆ. ೧೦.೩೦ ಗಂಟೆಗೆ ಶಾಸಕರು ರಾಷ್ಟçಧ್ವಜ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ನಾಡ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಡಾ.ಮಂತರ್ ಗೌಡ, ರಾಷ್ಟç ಪ್ರಶಸ್ತಿ ವಿಜೇತ ನಿರ್ಮಾಪಕಿ ಹಾಗೂ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್, ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಹಾಗೂ ಕರ್ನಾಟಕ ಮಾನವ ಹಕ್ಕುಗಳ ಆಯೋಗದ ರಾಜ್ಯಾಧ್ಯಕ್ಷ ಅವರೆಮಾದಂಡ ಶರಣ್ ಪೂಣಚ್ಚ ಪಾಲ್ಗೊಳ್ಳಲಿದ್ದಾರೆ.

ಅತಿಥಿಗಳಾಗಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಹೆಚ್.ವಿ. ಚಂದ್ರಶೇಖರ್, ಕಸಾಪ ಮಡಿಕೇರಿ ತಾಲೂಕು ಅಧ್ಯಕ್ಷ ಕಡ್ಲೆರ ತುಳಸಿ ಮೋಹನ್, ಕೊಡಗು ಸಹಕಾರ ಭಾರತಿ ಜಿಲ್ಲಾಧ್ಯಕ್ಷ ವಾಂಚೀರ ಅಜಯ್, ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಪಿ.ಮಹೇಶ್ ಹಾಗೂ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಟಿ. ಅನಿಲ್, ಮತ್ತಿತರರು ಉಪಸ್ಥಿತರಿರುತ್ತಾರೆ.

ಕಾರ್ಯಕ್ರಮದಲ್ಲಿ ರಾಷ್ಟçಪ್ರಶಸ್ತಿ ವಿಜೇತ ನಿರ್ಮಾಪಕಿ ಹಾಗೂ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರನ್ನು ಸನ್ಮಾನಿಸಲಾಗುವುದು ಮತ್ತು ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಾಗುವುದು. ಅಲ್ಲದೆ ಸಾಹಿತಿಗಳು, ಸಾಧಕ ವಿದ್ಯಾರ್ಥಿಗಳು ಮತ್ತು ಸಮಾಜ ಸೇವಕರನ್ನು ಕೂಡ ಸನ್ಮಾನಿಸಿ, ಗೌರವಿಸಲಾಗುವುದು.

ಮಧ್ಯಾಹ್ನ ೨ ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಅಧ್ಯಕ್ಷತೆಯನ್ನು ವಿದುಷಿ ಜಲಜಾ ನಾಗರಾಜ್ ವಹಿಸಲಿದ್ದಾರೆ. ಅತಿಥಿಗಳಾಗಿ ಕ.ಸಾ.ಪ ಮೂರ್ನಾಡು ಹೋಬಳಿ ಘಟಕದ ಸ್ಥಾಪಕಾಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ, ಕರ್ನಾಟಕ ರಾಜ್ಯ ಕೃಷಿ ಪ್ರಶಸ್ತಿ ವಿಜೇತ ಹಾಗೂ ಗ್ರಾ.ಪಂ ಮಾಜಿ ಸದಸ್ಯ ಮಠದಮನೆ ಧನಂಜಯ ಪಾಲ್ಗೊಳ್ಳಲಿದ್ದಾರೆ.

ವಿವಿಧ ಸಂಘ ಸಂಸ್ಥೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ನೃತ್ಯ, ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆಯಿಂದ ಹಾಡುಗಾರಿಕೆ, ಕೊಡಗು ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ನಡೆಯಲಿದೆ. ಸರ್ವರಿಗೂ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಈರಮಂಡ ಹರಿಣಿ ವಿಜಯ್ ಹಾಗೂ ಕಸಾಪ ಪದಾಧಿಕಾರಿಗಳು ಮಾಹಿತಿ ನೀಡಿದ್ದಾರೆ.