ಪೊನ್ನಂಪೇಟೆ, ನ. ೩: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಭಾರದ ಗುಂಡು ಎಸೆತ ಸ್ಪರ್ಧೆಯಲ್ಲಿ ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿದ್ಯಾರ್ಥಿನಿ ಮನೆಯಪಂಡ ಶಿಪ್ರ ಕಾಳಪ್ಪ ಚಿನ್ನದ ಪದಕ ಪಡೆದುಕೊಳ್ಳುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಅಲ್ಲದೇ ಮೈಸೂರಿನಲ್ಲಿ ನಡೆದ ೫ನೇ ರಾಷ್ಟçಮಟ್ಟದ ಮುಕ್ತ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದು ಸಾಧನೆ ಮಾಡಿದ್ದಾಳೆ ಎಂದು ಪ್ರಾಂಶುಪಾಲ ಎಸ್. ಎಸ್. ಮಾದಯ್ಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಎಂ. ಟಿ. ಸಂತೋಷ್ ತಿಳಿಸಿದ್ದಾರೆ. ಈಕೆ ವೀರಾಜಪೇಟೆಯ ಮನೆಯಪಂಡ ಎನ್. ಕಾಳಪ್ಪ ಹಾಗೂ ದೇಚಮ್ಮ ದಂಪತಿಯ ಪುತ್ರಿ.