ನಾಪೋಕ್ಲು, ನ. ೩: ಪರಿಸರವನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಗಿಡ ನೆಡುವ ಕಾರ್ಯಕ್ರಮದ ಮೂಲಕ ನೆಲ ಜಲ ಸಂರಕ್ಷಣೆಗೆ ಚೇನಂಡ ಕುಟುಂಬಸ್ಥರು ಕೈಗೊಂಡಿರುವ ಕಾರ್ಯ ಶ್ಲಾಘನೀಯ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.
ಇಲ್ಲಿಗೆ ಸಮೀಪದ ನರಿಯಂದಡ ಗ್ರಾಮ ಪಂಚಾಯಿತಿ ಕೊಕೇರಿ ಗ್ರಾಮದ ಚೇನಂಡ ಕುಟುಂಬದವರು ಮುಂಬರುವ ಚೇನಂಡ ಕಪ್ ಕೊಡವ ಹಾಕಿ ಪಂದ್ಯಾವಳಿಯ ಪ್ರತಿಯೊಂದು ಗೋಲಿಗೂ ಒಂದು ಗಿಡ ನೆಡುವ ಪ್ಲಾಂಟೇಶನ್ ಡ್ರೆöÊವ್ ಕಾರ್ಯಕ್ರಮದಲ್ಲಿ ಅವರು ಅತಿಥಿಯಾಗಿ ಭಾಗವಹಿಸಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೊಡಗಿನಲ್ಲಿ ಹಾಕಿ ಉತ್ಸವ ಗಿನ್ನಿಸ್ಸ್ ದಾಖಲೆ ಮಾಡಿದೆ. ಹಾಕಿ ಕ್ರೀಡೆ ಉತ್ತೇಜನದೊಂದಿಗೆ ಪರಿಸರ ಸಂರಕ್ಷಣೆಯತ್ತ ಗಮನ ಹರಿಸಬೇಕು. ಈ ಬಾರಿಯ ಹಾಕಿ ಉತ್ಸವ ವಿನೂತನ ಕಾರ್ಯಕ್ರಮಗಳನ್ನು ಒಳಗೊಂಡಿದ್ದು ಮತ್ತಷ್ಟು ದಾಖಲೆಗಳೊಂದಿಗೆ ಹೊರ ಹೊಮ್ಮಲಿದೆ.
ಈ ಸಂದರ್ಭ ಕ್ರೀಡಾ ಸಮಿತಿ ಅಧ್ಯಕ್ಷ ತಮ್ಮುಣಿ ಕರುಂಬಯ್ಯ, ಕಾರ್ಯದರ್ಶಿ ಮಧು ಮಾದಯ್ಯ, ಸಮಿತಿ ವಕ್ತಾರ ಸುರೇಶ್ ನಾಣಯ್ಯ, ಕುಟುಂಬದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಗಿರೀಶ್ ಪೂಣಚ್ಚ, ಕುಟುಂಬದ ಹಿರಿಯರಾದ ಅಯ್ಯಪ್ಪ, ಜಪ್ಪು ದೇವಯ್ಯ, ಕೌಶಿ ಕಾವೇರಮ್ಮ, ಕೆ.ಎ. ಇಸ್ಮಾಯಿಲ್, ಪಕ್ಷದ ವಲಯ ಅಧ್ಯಕ್ಷರು ಕೋಡಿಮಣಿಯಂಡ ವಿನೋದ್ ನಾಣಯ್ಯ, ಐತಿಚಂಡ ಪ್ರಕಾಶ್, ಕಲಿಯಂಡ ಸಂಪನ್ ಅಯ್ಯಪ್ಪ, ಪ್ರಕಾಶ್ ಉಪಸ್ಥಿತರಿದ್ದರು.