ಸೋಮವಾರಪೇಟೆ, ನ. ೪: ಸಮೀಪದ ಮಸಗೋಡು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಸ್ತಿçà ಶಕ್ತಿ ಭವನ ಕಾಮಗಾರಿಗೆ ಶಾಸಕ ಡಾ. ಮಂತರ್ ಗೌಡ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ನಂತರ ಅವರು ಮಾತನಾಡಿ, ಪ್ರತಿ ಗ್ರಾಮಗಳಲ್ಲಿಯೂ ಸಮುದಾಯ ಭವನಗಳಿದ್ದರೆ, ಸಾರ್ವಜನಿಕರ ಹಲವಷ್ಟು ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಗ್ರಾಮಗಳಲ್ಲಿ ಸಮುದಾಯ ಭವನ ನಿರ್ಮಿಸಲು ಮುಂದಾಗಲಾಗಿದೆ. ಕಾಮಗಾರಿ ನಡೆಯುವ ಸಂದರ್ಭ ಎಲ್ಲಾ ಗ್ರಾಮಸ್ಥರು ಗುಣಮಟ್ಟದ ಕಾಮಗಾರಿ ನಡೆಯುವಂತೆ ನೋಡಿಕೊಳ್ಳಬೇಕು. ಆಗ ಮಾತ್ರ ಸರ್ಕಾರದ ಯೋಜನೆಗಳು ಫಲಪ್ರದವಾಗಲು ಸಾಧ್ಯ ಎಂದರು.
ಇದೀಗ ಬಿಡುಗಡೆಯಾಗಿರುವ ಅನುದಾನವನ್ನು ಬಳಸಿಕೊಂಡು ಎರಡು ಅಂತಸ್ತಿನ ಕಟ್ಟಡ ನಿರ್ಮಿಸಲು ಗಟ್ಟಿಮುಟ್ಟಾದ ತಳಪಾಯ ಹಾಕಿಸಿದಲ್ಲಿ, ಮುಂದಿನ ದಿನಗಳಲ್ಲಿ ಉಳಿಕೆ ಹಣವನ್ನು ನೀಡಲಾಗುವುದು ಎಂದು ತಿಳಿಸಿದರು. ಮಸಗೋಡು ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಬಂಗೀರಮನೆ ಸತೀಶ್ ಮಾತನಾಡಿ, ಗ್ರಾಮದಲ್ಲಿ ಸ್ತಿçà ಶಕ್ತಿ ಭವನದ ಮುಂದುವರೆದ ಕಾಮಗಾರಿಗೆ ಹೆಚ್ಚಿನ ಅನುದಾನ ನೀಡಬೇಕು. ಗ್ರಾಮದಲ್ಲಿನ ದೇವಾಲಯ ಅಭಿವೃದ್ಧಿ ಹಾಗೂ ಸ್ಮಶಾನಕ್ಕೆ ತೆರಳುವ ರಸ್ತೆ ನಿರ್ಮಿಸಿಕೊಡಬೇಕೆಂದು ಮನವಿ ಮಾಡಿದರು.ಈ ಸಂದರ್ಭ ನೇರುಗಳಲೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಲಾ ದಿನೇಶ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಿ.ಬಿ. ಸತೀಶ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಂ. ಡಿಸಿಲ್ವ ಹಾಗೂ ಗ್ರಾಮದ ಪ್ರಮುಖರು ಇದ್ದರು.