ಮಡಿಕೇರಿ, ನ. ೪: ಸ್ವಾತಂತ್ರö್ಯ ಹೋರಾಟಗಾರ, ಹುತಾತ್ಮ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಸಂದೇಶಗಳನ್ನು ರವಾನಿಸಿರುವ ವ್ಯಕ್ತಿ ವಿರುದ್ಧ ಕೊಡಗು ಗೌಡ ಸಮಾಜಗಳ ಒಕ್ಕೂಟ ದೂರು ದಾಖಲಿಸಿದೆ.

ಕಳೆದ ಅ. ೩೧ ರಂದು ಅಪ್ಪಯ್ಯಗೌಡರ ಸಂಸ್ಮರಣಾ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪ್ರತಿಕ್ ಪೊನ್ನಣ್ಣ ಎಂಬವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಸ್ವಾತಂತ್ರö್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರನ್ನು ಸ್ಮರಿಸುವ ಎಂಬ ಪೋಸ್ಟ್ನಲ್ಲಿ ಹಲವಾರು ಪರ ವಿರೋಧ ಚರ್ಚೆ ನಡೆದಿರುತ್ತದೆ. ಆದರೆ ಅದೇ ಪೋಸ್ಟ್ನಲ್ಲಿ ಅರೆಯಡ ರಾಜ ಎಂಬ ವ್ಯಕ್ತಿ ಕೊಡಗಿನ ಇತಿಹಾಸವನ್ನು ತಿರುಚಿ ಹಾಲೇರಿ ರಾಜ ವಂಶಸ್ಥರನ್ನು ಹೀನಾಯವಾಗಿ ನಿಂದಿಸಿ, ಅಪ್ಪಯ್ಯಗೌಡರ ವಿರುದ್ಧ ಅವಹೇಳನಕಾರಿಯಾಗಿ ಸಂದೇಶಗಳನ್ನು ಹಾಕಿದ್ದಲ್ಲದೆ ಗೌಡ ಜನಾಂಗದವರನ್ನು ನಿಂದಿಸಿದ್ದಾರೆ. ಇದು ಸಂಘರ್ಷಕ್ಕೆ ಎಡೆ ಮಾಡಿಕೊಡುವ ವಿಚಾರವಾಗಿದ್ದು, ಈ ರೀತಿಯ ಅವಹೇಳನಕಾರಿ ಸಂದೇಶಗಳನ್ನು ಹರಿಯಬಿಟ್ಟಿರುವ ಅರೆಯಡ ರಾಜ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒಕ್ಕೂಟದ ಅಧ್ಯಕ್ಷರಾದ ಆನಂದ ಕರಂದ್ಲಾಜೆ ಹಾಗೂ ಪದಾಧಿಕಾರಿಗಳು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಈ ಸಂದರ್ಭದಲ್ಲಿ ಒಕ್ಕೂಟದ ಕಾರ್ಯದರ್ಶಿ ಪೇರಿಯನ ಉದಯ, ಖಜಾಂಚಿ ನವೀನ್ ಅಂಬೆಕಲ್, ಕಾನೂನು ಸಲಹೆಗಾರ ಕೊಂಬಾರನ ರೋಷನ್, ಕೊಡಗು ಗೌಡ ಯುವ ವೇದಿಕೆ ಕಾರ್ಯದರ್ಶಿ ಪುದಿಯನೆರವನ ರಿಷಿತ್ ಇದ್ದರು.