ಮಡಿಕೇರಿ, ನ. ೪: ಕೊಡಗಿನಲ್ಲಿ ನವೆಂಬರ್ ೧೧ ರಿಂದ ಡಿಸೆಂಬರ್ ೩೧ರ ತನಕ ನಡೆಯಲಿರುವ ಕಲಾ ಉತ್ಸವ-೨೦೨೫ ಕಾರ್ಯಕ್ರಮದ ಲಾಂಛನವನ್ನು ಬೆಂಗಳೂರಿನ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳು ಬಿಡುಗಡೆಗೊಳಿಸಿದರು.

೨೦೧೭ ರಿಂದ ಸತತವಾಗಿ ಈ ಕಾರ್ಯಕ್ರಮ ವಾರ್ಷಿಕವಾಗಿ ನಡೆಯುತ್ತಿದ್ದು ರಾಜ್ಯ ಹೊರರಾಜ್ಯಗಳಿಂದ ಕಲಾವಿದರು ಆಗಮಿಸಿ ತಮ್ಮ ಕಲಾಕೃತಿಯನ್ನು ಪ್ರದರ್ಶಿಸುತ್ತಾರೆ.

ಈ ಸಂದರ್ಭದಲ್ಲಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಯುವ ಕಾಂಗ್ರೆಸ್ ಅಧ್ಯಕ್ಷ ಶಬೀರ್, ಕಲಾವಿದ ಸಾದಿಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.