ಕುಶಾಲನಗರ, ನ. ೮: ಕುಶಾಲನಗರದ ಐತಿಹಾಸಿಕ ಶ್ರೀ ಗಣಪತಿ ದೇವಾಲಯ ರಥೋ ತ್ಸವ ವಿಶೇಷ ಪೂಜಾ ವಿಧಿ ವಿಧಾನಗಳೊಂದಿಗೆ ಸಾವಿರಾರು ಸಂಖ್ಯೆಯ ಭಕ್ತಾದಿಗಳ ಉಪಸ್ಥಿತಿಯಲ್ಲಿ ಭಕ್ತಿ ಭಾವದಿಂದ ಜರುಗಿತು.
ಕಾರ್ತಿಕ ಮಾಸ ಕೃಷ್ಣ ಪಕ್ಷದಲ್ಲಿ ನಡೆಯುವ ದೇವಾಲಯದ ರಥೋತ್ಸವ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಬೆಳಗ್ಗಿನಿಂದಲೇ ದೇವರಿಗೆ ಪಂಚಾಮೃತ ಅಭಿಷೇಕ, ಏಕವಾರ, ರುದ್ರಾಭಿಷೇಕ, ಪುಷ್ಪಾಲಂಕಾರ ರಥ ಪೂಜೆ ರಥ ಬಲಿ ನಂತರ ಗಣಪತಿ ದೇವರನ್ನು ರಥದಲ್ಲಿ ಪ್ರತಿಷ್ಠಾಪಿಸಿ ಭಕ್ತಾದಿಗಳು ರಥ ಬೀದಿಯ ಮೂಲಕ ಆಂಜನೇಯ ದೇವಾಲಯ ತನಕ ಘೋಷಣೆಗಳೊಂದಿಗೆ ಭಕ್ತಿಭಾವದಿಂದ ಎಳೆದರು. ದೇವಾಲಯದ ಪ್ರಧಾನ ಅರ್ಚಕ ಆರ್.ಕೆ. ನಾಗೇಂದ್ರ ಬಾಬು ನೇತೃತ್ವದಲ್ಲಿ ರಾಘವೇಂದ್ರ ಭಟ್ ಮತ್ತು ಅರ್ಚಕರ ತಂಡದಿAದ ಸಾಂಪ್ರದಾಯಿಕ ಪೂಜಾ ವಿಧಿ ವಿಧಾನಗಳು ಜರುಗಿದವು. ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯ ಸಾವಿರಾರು ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡಿದ್ದರು.
ಜಾತ್ರೋತ್ಸವ ಅಂಗವಾಗಿ ದೇವಾಲಯದ ಒಳ ಆವರಣವನ್ನು ವಿಶೇಷವಾಗಿ ಹೂಗಳಿಂದ ಸಿಂಗರಿಸಲಾಗಿತ್ತು. ರಥ ಸಾಗುವ ರಸ್ತೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ನೂರಾರು ಸಂಖ್ಯೆಯ ಮಕ್ಕಳು ಮಹಿಳೆಯರಿಂದ ಭಜನಾ ಕುಣಿತ ಕಾರ್ಯಕ್ರಮ ನಡೆಯಿತು. ಅಯ್ಯಪ್ಪ ಸ್ವಾಮಿ ದೇವರ ಮಾಲಾಧಾರಿಗಳು ರಥದ ಮುಂದೆ ಕರ್ಪೂರ ಆರತಿ ಬೆಳಗಿ ಅಯ್ಯಪ್ಪ ಸ್ವಾಮಿ ಘೋಷಣೆ ಕೂಗಿದರು. ಕೆಲವು ಭಕ್ತರು ಹರಕೆಯ ಹೆಸರಿನಲ್ಲಿ ಈಡುಗಾಯಿಯನ್ನು ರಥದ ಮುಂದೆ ಒಡೆಯುತ್ತಿದ್ದ ದೃಶ್ಯ ಕಂಡು ಬಂತು. ಕೊಡ್ಲಿಪೇಟೆ ಕಿರಿ ಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಅವರು ದೇವಾಲಯಕ್ಕೆ ಆಗಮಿಸಿ ಪೂಜೆಯಲ್ಲಿ ಪಾಲ್ಗೊಂಡು ರಥೋತ್ಸವಕ್ಕೆ ಶುಭ ಹಾರೈಸಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಮಾಜಿ ಸಚಿವರಾದ ಎಂ ಪಿ ಅಪ್ಪಚ್ಚು ರಂಜನ್ ಅವರು ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿದರು. ಈ ಸಂದರ್ಭ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ೪ಏಳನೇ ಪುಟಕ್ಕೆ ರಥೋತ್ಸವಕ್ಕೆ ಶುಭ ಕೋರಿದರು. ಶ್ರೀ ಗಣಪತಿ ದೇವಾಲಯ ಸಮಿತಿ ಅಧ್ಯಕ್ಷ ಎಂ.ಕೆ. ದಿನೇಶ್ ಮಾತನಾಡಿ, ರಥೋತ್ಸವ ಅದ್ಧೂರಿಯಾಗಿ ನಡೆದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು. ರಥೋತ್ಸವದ ಅಂಗವಾಗಿ ಅನ್ನದಾನ ಸಮಿತಿ ಮೂಲಕ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಸಲಾಗಿದೆ. ಗೋ ಜಾತ್ರೆ ಡಿಸೆಂಬರ್ ೧೨ ರಿಂದ ೨ ದಿನಗಳ ಕಾಲ ನಡೆಯುತ್ತದೆ ಎಂದು ಹೇಳಿದರು.
ಪ್ರಧಾನ ಅರ್ಚಕರಾದ ಆರ್.ಕೆ. ನಾಗೇಂದ್ರ ಬಾಬು ಮಾತನಾಡಿ, ಈ ತಿಂಗಳ ೧೪ ರ ತನಕ ದೇವಾಲಯದಲ್ಲಿ ಪ್ರತಿದಿನ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಗುಂಡೂರಾವ್ ಜಾತ್ರಾ ಮೈದಾನದಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ, ನವೆಂಬರ್ ೧೯ರ ತನಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜಾತ್ರಾ ಮೈದಾನದಲ್ಲಿ ನಡೆಯಲಿದೆ ಎಂದು ಸಾಂಸ್ಕೃತಿಕ ಸಮಿತಿ ಸಂಚಾಲಕ ವಿ.ಪಿ. ಶಶಿಧರ್ ತಿಳಿಸಿದರು. ಕುಶಾಲನಗರ ಡಿ ವೈ ಎಸ್ ಪಿ ಚಂದ್ರಶೇಖರ್ ಮತ್ತು ಕುಶಾಲನಗರ ಪೊಲೀಸ್ ವೃತ್ತ ನಿರೀಕ್ಷಕ ದಿನೇಶ್ ಕುಮಾರ್ ನೇತೃತ್ವದಲ್ಲಿ ನೂರಕ್ಕೂ ಅಧಿಕ ಪೊಲೀಸರು ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರು. ರಥೋತ್ಸವದ ವೇಳೆ ಜೇಬು ಕಳ್ಳತನ, ಮತ್ತಿತರ ಅಪರಾಧಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಅಪರಾಧ ವಿಭಾಗದ ಪೊಲೀಸರು ಅಪರಿಚಿತ ಮತ್ತು ಸಂಶಯಾಸ್ಪದ ವ್ಯಕ್ತಿಗಳನ್ನು ಪತ್ತೆ ಹಚ್ಚಲು ಕ್ರಮ ಕೈಗೊಂಡಿದ್ದರು. ದೇವಾಲಯ ಸಮಿತಿ ಉಪಾಧ್ಯಕ್ಷ ಆರ್. ಬಾಬು, ಗೌರವಾಧ್ಯಕ್ಷ ವಿ.ಎನ್. ವಸಂತಕುಮಾರ್, ಕಾರ್ಯದರ್ಶಿ ಬಿ.ಕೆ. ಮುತ್ತಣ್ಣ, ಖಜಾಂಚಿ ಎಸ್.ಕೆ. ಸತೀಶ್, ಸಹ ಕಾರ್ಯದರ್ಶಿ ಕೆ.ಎನ್. ದೇವರಾಜ್, ನಿರ್ದೇಶಕರಾದ ವಿ.ಡಿ. ಪುಂಡರಿಕಾಕ್ಷ, ಹೆಚ್.ಎಂ. ಚಂದ್ರು ಟಿ.ಆರ್. ಶರವಣಕುಮಾರ್ ಮತ್ತು ವಿಶೇಷ ಆಹ್ವಾನಿತರಾದ ಹೆಚ್.ಎನ್. ರಾಮಚಂದ್ರ, ಡಿ. ಅಪ್ಪಣ್ಣ, ಡಿ.ಸಿ. ಜಗದೀಶ್, ಕೆ.ಎನ್. ಸುರೇಶ್, ಕೆ.ಸಿ. ನಂಜುAಡಸ್ವಾಮಿ, ಎಂ. ಮುನಿಸ್ವಾಮಿ, ವ್ಯವಸ್ಥಾಪಕರಾದ ಎಸ್.ಕೆ. ಶ್ರೀನಿವಾಸ್ ರಾವ್ ಇದ್ದರು.
ರಥೋತ್ಸವದ ಹಿನ್ನೆಲೆಯಲ್ಲಿ ಸ್ಥಳೀಯ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಸಾವಿರಾರು ಸಂಖ್ಯೆಯ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಿತು.