ಸುಂಟಿಕೊಪ್ಪ,ನ.೭: ವೈದ್ಯರ ನಿರ್ಲಕ್ಷö್ಯದಿಂದ ಯುವಕನೊಬ್ಬ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಮೃತ ಯುವಕನ ಕುಟುಂಬಸ್ಥರು ಮತ್ತು ಸಾರ್ವಜನಿಕರು ಪ್ರತಿಭಟನೆ ನಡೆಸಿದರು.
ಮೃತ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಯ ಬಳಿಕ ಆ್ಯಂಬ್ಯುಲೆನ್ಸ್ ವಾಹನದಲ್ಲಿ ಸುಂಟಿಕೊಪ್ಪಕ್ಕೆ ತಂದು ಕ್ಲಿನಿಕ್ ಮುಂಭಾಗ ನಿಲ್ಲಿಸಿ ವೈದ್ಯರ ವಿರುದ್ಧ ಆಕ್ರೋಶ ಹೊರಹಾಕಿದರು. ವೈದ್ಯರು ಹಾಗೂ ಸಂಬAಧಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸ್ಥಳಕ್ಕೆ ಆಗಮಿಸುವಂತೆ ಆಗ್ರಹಪಡಿಸಿದರು.
ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಮೋಹನ್ರಾಜ್ ಮತ್ತು ಸಿಬ್ಬಂದಿ ಜಿಲ್ಲಾ ಕುಟುಂಬ ಮತ್ತು ಆರೋಗ್ಯ ಕಲ್ಯಾಣಾಧಿಕಾರಿ ಪರವಾಗಿ ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಇಂದೂದರ್, ಆರ್ಸಿಎಚ್ ಡಾ.ಮಧುಸೂದನ್ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮೆಹರೊಜ್ ಆಗಮಿಸಿದರು. ವೈದ್ಯರಿಗೆ ಕಾರಣ ಕೇಳಿ ನೋಟೀಸ್ ನೀಡಲಾಗುವುದು. ಪ್ರಕರಣದ ವಿರುದ್ಧ ಈಗಾಗಲೇ ಮೊಕದ್ದಮೆ ದಾಖಲಾಗಿದೆ.ಶವ ಪರೀಕ್ಷೆಯ ವರದಿ ಬಂದ ಬಳಿಕ ಮುಂದಿನ ಕ್ರಮಕೈಗೊಳ್ಳಲಾಗುವುದೆಂದು ಡಾ.ಇಂದೂದರ್ ಮಾಹಿತಿ ನೀಡಿದರು.
ಸುಂಟಿಕೊಪ್ಪ ನಿವಾಸಿ ಸ್ವಾಮಿ ಮತ್ತು ಸುಂದರಿ ದಂಪತಿಗಳÀ ಪುತ್ರ ವಿನೋದ್ (೩೪) ಗುರುವಾರ ಸೊಂಟ ನೋವು ಕೈನೋವಿನ ಹಿನ್ನೆಲೆಯಲ್ಲಿ ಸುಂಟಿಕೊಪ್ಪ ಕನ್ನಡ ವೃತ್ತದ ಬಳಿಯಿರುವ ಕ್ಲಿನಿಕ್ಗೆ ಬಂದಿದ್ದಾರೆ. ವೈದ್ಯರು ೨ ಚುಚ್ಚುಮದ್ದುಗಳನ್ನು ಒಂದರ ನಂತರ ಒಂದು ನೀಡಿದ್ದು ಕೆಲವು ಮಾತ್ರೆಗಳನ್ನು ನೀಡಿ ಮನೆಗೆ ಹೋಗಿ ವಿಶ್ರಾಂತಿ ಪಡೆದಲ್ಲಿ ಸುಸ್ತು ನಿವಾರಣೆಗೊಳ್ಳಲಿದೆ ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ ಅದರಂತೆ ವಿನೋದ್ ಮನೆಗೆ ಬಂದಿದ್ದು ವಿಪರೀತ ಆಯಾಸಗೊಂಡ ಹಿನ್ನಲೆಯಲ್ಲಿ ಕುಂಟುAಬಸ್ಥರು ಮಡಿಕೇರಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ತೆರಳಿದ್ದಾರೆ ಆದರೆ ಆಸ್ಪತ್ರೆಯಲ್ಲಿ ವೈದ್ಯರು ವಿನೋದ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ವಿನೋದ್ನ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆ ನಡೆದ ಬಳಿಕ ಮನೆಗೆ ವಾಪಸ್ ತರಲಾಗಿದೆ. ವಿನೋದ್ ಸಾವಿನಿಂದ ಅಘಾತಗೊಂಡ ಕುಟುಂಬಸ್ಥರು ವೈದ್ಯರ ನಿರ್ಲಕ್ಷö್ಯದಿಂದ ವಿನೋದ್ ಮೃತಪಟ್ಟಿರುವುದಾಗಿ ಆರೋಪಿಸಿ ಪಾರ್ಥಿವ ಶರೀರವನ್ನು ರಾಷ್ಟಿçÃಯ ಹೆದ್ದಾರಿಯಲ್ಲಿ ಇಟ್ಟು ಪ್ರತಿಭಟನೆ ಮಾಡಿದರು.
ಸ್ಥಳಕ್ಕೆ ಧಾವಿಸಿದ ಕುಶಾಲನಗರ ವೃತ್ತನಿರೀಕ್ಷಕ ದಿನೇಶ್ ಪ್ರತಿಭಟನಾಕಾರರ ಮನ ಒಲಿಸುವ ಪ್ರಯತ್ನ ಮಾಡಿದರು. ಕೆಲಹೊತ್ತಿನ ಬಳಿಕ ಶವ ಶಿಥೀಲೀಕರಣ ಪೆಟ್ಟಿಗೆಯನ್ನು ತಂದು ಕ್ಲಿನಿಕ್ ಮುಂಭಾಗದಲ್ಲಿ ಇಟ್ಟು ಪ್ರತಿಭಟನೆ ನಡೆಸಲು ಮುಂದಾದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಬಾರಿಕೆ ದಿನೇಶ್ಕುಮಾರ್ ಸ್ಥಳಕ್ಕೆ ಆಗಮಿಸಿ ಮನ ಒಲಿಸಲು ಪ್ರಯತ್ನಿಸಿದರೂ ಫಲ ನೀಡಲಿಲ್ಲ. ಮುಂದುವರಿದ ಭಾಗವಾಗಿ ಮಾತುಕತೆ ನಡೆಸುವ ಪ್ರಯತ್ನವಾಗಿ ಪ್ರತಿಭಟನಾಕಾರರನ್ನು ಠಾಣೆಗೆ ಕರೆದೊಯ್ದು ಸಂದಾನ ಸಭೆಗೆ ಮುಂದಾದರು.
ಪ್ರತಿಭಟನೆ ಆರಂಭದಲ್ಲೇ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್, ಉಪಾಧ್ಯಕ್ಷೆ ಶಿವಮ್ಮ ಮಹೇಶ್ ಹಾಗೂ ಸದಸ್ಯರುಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಪ್ರತಿಭಟನಾಕಾರರನ್ನು ಸಮಾಧಾನಗೊಳಿಸಲು ಸಾಕಷ್ಟು ಪ್ರಯತ್ನ ಹಾಗೂ ಮನವೊಲಿಸುವ ಕಾರ್ಯವನ್ನು ನಡೆಸಿದ್ದರೂ ಪ್ರಯೋಜನವಾಗಲಿಲ್ಲ. ಕುಶಾಲನಗರ ನಗರ, ಮಡಿಕೇರಿ ಗ್ರಾಮಾಂತರ ಹಾಗೂ ಸಂಚಾರಿ ಪೊಲೀಸರನ್ನು ಬಂದೋಬಸ್ತ್ ಕಾರ್ಯದಲ್ಲಿ ನಿಯೋಜಿಸುವ ಮೂಲಕ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗಿತ್ತು.
ಅಂತಿಮವಾಗಿ ಪೊಲೀಸ್ ಮತ್ತು ಗ್ರಾಮ ಪಂಚಾಯಿತಿ ಮಧ್ಯಸ್ಥಿಕೆಯಲ್ಲಿ ವಿನೋದ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ಒಪ್ಪಿಗೆ ನೀಡಿದರು. ಜೊತೆಗೆ ತಾ.೧೩ ರಂದು ಪೊಲೀಸ್ ಠಾಣೆಯಲ್ಲಿ ವೈದ್ಯರ ಸÀÄಮ್ಮುಖದಲ್ಲಿ ಕುಟುಂಬಸ್ಥರೊAದಿಗೆ ಸಭೆ ನಡೆಸಲು ಲಿಖಿತ ಒಪ್ಪಂದದೊAದಿಗೆ ಪ್ರತಿಭಟನೆ ಕೈಬಿಡಲಾಯಿತು ಎಂದು ಪೊಲೀಸ್ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್ ಮಾಹಿತಿ ನೀಡಿದರು.