ಸೋಮವಾರಪೇಟೆ, ನ. ೧೨ :ತಾಲೂಕಿನ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ವ್ಯಾಪ್ತಿಯ ಕೆರೆಗಳಲ್ಲಿ ಮೀನುಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳಲು ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಸಂಘಗಳಿಗೆ ಮೀನುಮರಿಗಳನ್ನು ವಿತರಿಸಲಾಯಿತು. ಮೀನುಗಾರಿಕೆ ಇಲಾಖೆ ವತಿಯಿಂದ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಸಹಯೋಗದೊಂದಿಗೆ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕಿನ ಪಂಚಾಯಿತಿ ಮಟ್ಟದಲ್ಲಿ ಮತ್ಸö್ಯ ಸಂಜೀವಿನಿ ಯೋಜನೆಯಡಿ ಕೆರೆಗಳಲ್ಲಿ ಮೀನುಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳಲು ಕಬಿನಿ ಮೀನುಮರಿ ಉತ್ಪಾದನಾ ಕೇಂದ್ರದಿAದ ಖರೀದಿಸಿ ತಾಲೂಕಿನ ಪಾಲನಾ ಕೇಂದ್ರದಲ್ಲಿ ಪಾಲನೆ ಕೈಗೊಂಡ ಸಾಮಾನ್ಯ ಗೆಂಡೆ ಮೀನುಮರಿಗಳನ್ನು ವಿತರಿಸಲಾಯಿತು. ಈ ಸಂದರ್ಭ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ಮಾತನಾಡಿ, ಮಹಿಳೆಯರ ಸಬಲೀಕರಣಕ್ಕಾಗಿ ಸರಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಯಾವುದೇ ಯೋಜನೆ ಸಂಪೂರ್ಣವಾಗಿ ಯಶಸ್ಸು ಸಾಧಿಸಬೇಕಾದರೆ ಶ್ರಮಪಟ್ಟು ಕೆಲಸ ಮಾಡಬೇಕಾಗುತ್ತದೆ. ಮೀನು ಮರಿಗಳ ಸಾಕಾಣಿಕೆಯಿಂದ ಉತ್ತಮ ಆದಾಯವನ್ನು ನಿರೀಕ್ಷಿಸಬಹುದು ಎಂದರು. ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೆಶಕ ಕೆ.ಬಿ. ಮಿಲನಾ ಮಾತನಾಡಿ, ಮೀನು ಕೃಷಿಯಲ್ಲಿ ವಹಿಸಬೇಕಾದ ಎಚ್ಚರಿಕೆಯ ಕ್ರಮಗಳು, ಸಾಕಾಣಿಕೆ ಕುರಿತು ಮಾಹಿತಿ ನೀಡಿದರು. ಎನ್.ಆರ್.ಎಲ್.ಎಂ. ಸಿಬ್ಬಂದಿಗಳು, ವಿವಿಧ ಒಕ್ಕೂಟಗಳ ಪ್ರತಿನಿಧಿಗಳು ಇದ್ದರು.