ನಾಪೋಕ್ಲು, ನ. ೧೨: ಇಲ್ಲಿನ ಚೆರಿಯ ಪರಂಬುವಿನ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್, ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಶಾಲಾ ಮತ್ತು ನಾಪೋಕ್ಲು: ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ೧೪ ಮತ್ತು ೧೭ ವರ್ಷದ ಒಳಗಿನ ಬಾಲಕ ಬಾಲಕಿಯರ ತಾಲೂಕುಮಟ್ಟದ ಕ್ರೀಡಾಕೂಟವನ್ನು ಗಿಡಕ್ಕೆ ನೀರು ಉಣಿಸುವುದರ ಮೂಲಕ ಶಾಸಕರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು.

ಶಿಕ್ಷಣ ಇಲಾಖೆ ಆಯೋಜಿಸುವ ಕ್ರೀಡಾಕೂಟ ಶಿಸ್ತುಬದ್ಧವಾಗಿ ನಡೆಯುತ್ತದೆ. ಕ್ರೀಡೆ ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿ. ಮಕ್ಕಳಲ್ಲಿ ಕ್ರೀಡೆಗೆ ಶಿಕ್ಷಣ ಇಲಾಖೆ ಹೆಚ್ಚಿನ ಪ್ರೋತ್ಸಾಹವನ್ನು ನೀಡುತ್ತಿದೆ. ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳು ಸೋಲು ಗೆಲುವು ಎಂದು ಯೋಚಿಸದೇ ಶಿಸ್ತುಬದ್ಧವಾಗಿ ಪಾಲ್ಗೊಳ್ಳಬೇಕು. ಸರಕಾರ ಮಕ್ಕಳ ಆರೋಗ್ಯದ ಕಡೆ ಅತ್ಯಂತ ಕಾಳಜಿ ವಹಿಸುತ್ತಿದ್ದು, ಕ್ರೀಡೆಯು ಇದಕ್ಕೆ ಸಹಕಾರಿಯಾಗಲಿದೆ ಎಂದು ಬಣ್ಣಿಸಿ ರಾಷ್ಟçಮಟ್ಟದಲ್ಲಿ ಕೀರ್ತಿ ತರುವಂತಹ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರಯತ್ನಿಸಬೇಕು ಎಂದು ಅವರು ಕರೆ ನೀಡಿದರು.

ಕ್ರೀಡಾಕೂಟದ ಅಂಗವಾಗಿ ಧ್ವಜಾರೋಹಣ, ಪಥಸಂಚಲನ, ಗೌರವ ವಂದನೆ , ಪ್ರಮಾಣ ವಚನ ಸ್ವೀಕರ, ಕ್ರೀಡಾಜ್ಯೋತಿಯನ್ನು ಪ್ರಜ್ವಲಿಸಿ ಶಾಸಕರು ಚಾಲನೆ ನೀಡಿದರು ಹಾಗೂ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಅರ್ಹತಾ ಪತ್ರ ನೀಡಿ ಗೌರವಿಸಿದರು. ಈ ಸಂದರ್ಭ ನಿವೃತ್ತಿ ಹೊಂದಿದ ದೈಹಿಕ ಶಿಕ್ಷಕಿಯರನ್ನು ಸನ್ಮಾನಿಸಿ ಗೌರವಿಸಿದರು. ಇದಕ್ಕೂ ಮೊದಲು ಕನಕದಾಸ ಜಯಂತಿ ಪ್ರಯುಕ್ತ ಕನಕದಾಸ ಭಾವಚಿತ್ರಕ್ಕೆ ಪುಷ್ಪನಮನ ಅಲ್ಲಿಸಿ ಗೌರವವನ್ನು ಅರ್ಪಿಸಲಾಯಿತು.

ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಮಡಿಕೇರಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರಿರ ಮೋಹನ್ ದಾಸ್, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಅಧ್ಯಕ್ಷ ಅರುಣ್ ಕುಮಾರ್ ಎಂ ಸಿ, ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘ ತಾಲೂಕು ಶಾಖೆಯ ಅಧ್ಯಕ್ಷ ಮೋಹನ್ ಪೆರಾಜೆ, ಮಡಿಕೇರಿ ತಾಲೂಕು ಸರ್ಕಾರಿ ಪ್ರೌಢಶಾಲಾ ಗ್ರೇಡ್ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕಿರಣ್ ಪಿ ಎಂ, ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಮಡಿಕೇರಿ ತಾಲೂಕು ನೌಕರರ ಸಂಘದ ಶಾಖೆಯ ಅಧ್ಯಕ್ಷ ಶರತ್ ಕೆ.ಎಂ, ಮಡಿಕೇರಿ ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕುಶಾಲಪ್ಪ ಎಸ್, ಕೆ ಡಿ ಪಿ ಸದಸ್ಯ ಬಾಚಮಂಡ ಲವ ನಾಣಯ್ಯ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಗ್ರಾಮ ಪಂಚಾಯಿತಿ ಸದಸ್ಯ ಮಾಚೆಟ್ಟಿರ ಕುಶುಕುಶಾಲಪ್ಪ, ಕುಲ್ಲೇಟಿರ ಅರುಣ್ ಬೇಬ , ತಿಮ್ಮಯ್ಯ, ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಆರ್ ಪಿ, ನಾಪೋಕ್ಲು ಡಾ.ಬಿ.ಆರ್. ಅಂಬೇಡ್ಕರ್ ವಸತಿಶಾಲೆಯ ಪ್ರಾಂಶುಪಾಲರಾದ ನೀತಾ ಕೆ. ಡಿ , ಅಂಬೇಡ್ಕರ್ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ಯಾಮಿಲಿ ಬಿ.ಬಿ, ವಿವಿಧ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು, ಸಿಬ್ಬಂದಿಗಳು, ಪೋಷಕರು ಪಾಲ್ಗೊಂಡಿದ್ದರು. ಅಶೋಕ ಕೆ.ಜಿ ಹಾಗೂ ಶಿವಪ್ರಸಾದ್. ಕೆ ನಿರೂಪಿಸಿದರು. ಶಿಕ್ಷಣಾಧಿಕಾರಿ ಮಹೇಶ್ ಆರ್.ಪಿ ಸ್ವಾಗತಿಸಿ, ರೂಪ ಎಂ.ಜಿ ನಿರೂಪಿಸಿ, ಪ್ರಾಂಶುಪಾಲರಾದ ನೀತಾಕೆ. ಡಿ ವಂದಿಸಿದರು.