ಮಡಿಕೇರಿ, ನ. ೧೧: ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ೧೫೦ನೇ ಜನ್ಮದಿನಾಚರಣೆಯ ಪ್ರಯುಕ್ತ ತಾ.೧೩ ರಂದು (ನಾಳೆ) ಪೊನ್ನಂಪೇಟೆಯಿAದ ಗೋಣಿಕೊಪ್ಪದ ವರೆಗೆ ಏಕತಾ ಪಾದಯಾತ್ರೆ ನಡೆಯಲಿದೆ ಎಂದು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ. ಸುಕುಮಾರ್ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಭಾರತ ಸರಕಾರ, ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಮೈ ಭಾರತ್ ಮೂಲಕ ‘ವಿಕಸಿತ ಭಾರತ್ ಪಾದಯಾತ್ರೆ’ಯನ್ನು ರಾಷ್ಟçವ್ಯಾಪಿ ಆಯಾ ಕ್ಷೇತ್ರದ ಸಂಸದರ ನೇತೃತ್ವದಲ್ಲಿ ಆಯೋಜಿಸಲಾಗುತ್ತಿದೆ. ಇದು ರಾಷ್ಟಿçÃಯ ಹೆಮ್ಮೆಯನ್ನು ಬೆಳೆಸುವ ಉದ್ದೇಶದಿಂದ ವಿನ್ಯಾಸಗೊಳಿಸಲಾದ ಕಾರ್ಯಕ್ರಮವಾಗಿದೆ ಎಂದು ವಿವರಿಸಿದ್ದಾರೆ.
ಕೊಡಗು ಜಿಲ್ಲಾ ಯುವ ಒಕ್ಕೂಟ ಹಾಗೂ ವಿರಾಜಪೇಟೆ, ಮಡಿಕೇರಿ ಮತ್ತು ಸೋಮವಾರಪೇಟೆ ತಾಲೂಕು ಯುವ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ಪೊನ್ನಂಪೇಟೆಯಿAದ ಬೆಳಿಗ್ಗೆ ೯.೩೦ ಗಂಟೆಗೆ ಏಕತಾ ಪಾದಯಾತ್ರೆ ಆರಂಭಗೊAಡು ಗೋಣಿಕೊಪ್ಪಲಿನ ಕಾವೇರಿ ಕಾಲೇಜಿನವರೆಗೆ ಸಾಗಲಿದೆ.
ಪಾದಯಾತ್ರೆಯಲ್ಲಿ ಸಂಸದರು, ಶಾಸಕದ್ವಯರು, ಸ್ಥಳೀಯ ಗ್ರಾಮ ಪಂಚಾಯಿತಿ ಪ್ರತಿನಿಧಿಗಳು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಮಾಜಿ ಶಾಸಕರು, ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಎನ್ಸಿಸಿ, ಎನ್ಎಸ್ಎಸ್ ವಿದ್ಯಾರ್ಥಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಯುವ ಜನತೆ, ಸಾರ್ವಜನಿಕರು ಸೇರಿದಂತೆ ಸುಮಾರು ೮೦೦ ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳಲಿದ್ದಾರೆ. ಪಾದಯಾತ್ರೆಯಲ್ಲಿ ಕೊಡಗಿನ ಸಾಂಸ್ಕೃತಿಕ ತಂಡಗಳು ಗಮನ ಸೆಳೆಯಲಿವೆ.
ನಂತರ ೧೨ ಗಂಟೆಗೆ ಗೋಣಿಕೊಪ್ಪದ ಪರಿಮಳ ವಿಹಾರ ಸಭಾಂಗಣದಲ್ಲಿ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಲಿದ್ದು, ಕೊಡಗಿನ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸುಕುಮಾರ್ ಮನವಿ ಮಾಡಿದ್ದಾರೆ.
ರಾಷ್ಟçಮಟ್ಟದಲ್ಲಿ ಭಾರತದ ಯುವ ಜನರಲ್ಲಿ ಏಕತೆ, ದೇಶಭಕ್ತಿ ಮತ್ತು ನಾಗರಿಕ ಜವಾಬ್ದಾರಿಯ ಭಾವನೆಯನ್ನು ಎಚ್ಚರಗೊಳಿಸುವ ಗುರಿಯನ್ನು ಹೊಂದಿರುವ ಕಾರ್ಯಕ್ರಮ ಈ ತಿಂಗಳ ೨೫ರ ವರೆಗೆ ನಡೆಯಲಿದೆ. ಏಕತಾ ಪಾದಯಾತ್ರೆ ಅಭಿಯಾನದ ಮೂಲಕ ಯುವ ಜನರು ಏಕ ಭಾರತ್ ಆತ್ಮ ನಿರ್ಭರ್ ಭಾರತದ ಆದರ್ಶಗಳನ್ನು ತಮ್ಮ ಬದುಕಿನಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸಲಾಗುವುದು. ಅಲ್ಲದೆ ನಶಾಮುಕ್ತ ಭಾರತ್ ಪ್ರತಿಜ್ಞೆಯನ್ನು ಸ್ವೀಕರಿಸಲಾಗುವುದು ಎಂದು ತಿಳಿಸಿದ್ದಾರೆ.