ಮಡಿಕೇರಿ, ನ. ೧೬: ಭಾಷೆಯಂತೆಯೇ ಗ್ರಂಥಾಲ ಯಗಳನ್ನು ಹೆಚ್ಚು ಬಳಸುವ ಮೂಲಕ ಗ್ರಂಥಾಲಯಗಳನ್ನೂ ಉಳಿಸುವ ನಿಟ್ಟಿನಲ್ಲಿ ಸಾಹಿತ್ಯ ಪ್ರೇಮಿಗಳು ಕಾರ್ಯೋನ್ಮುಖವಾಗಬೇಕೆಂದು ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ದೀಪಾ ಭಾಸ್ತಿ ಕರೆ ನೀಡಿದರು.
ನಗರದ ಕೈಗಾರಿಕಾ ಬಡಾವಣೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಆಯೋಜಿತ ರಾಷ್ಟಿçÃಯ ಗ್ರಂಥಾಲಯ ಸಪ್ತಾಹದ ಸಂದರ್ಭ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದ ದೀಪಾ ಭಾಸ್ತಿ, ಮಡಿಕೇರಿಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ತನಗೆ ಎರಡನೇ ಮನೆಯಿದ್ದಂತೆ. ಗ್ರಂಥಾಲಯದ ಸಂಬAಧದಿAದಾಗಿ ತನ್ನ ಸಾಹಿತ್ಯ ಜ್ಞಾನ ಹೆಮ್ಮರವಾಯಿತು. ಓದುವ ಪ್ರವೃತ್ತಿಯನ್ನು ಬೆಳೆಸುವಲ್ಲಿ ಅದರಲ್ಲಿಯೂ ಇಂಗ್ಲೀಷ್ ಪುಸ್ತಕ ಓದಲು ಮಡಿಕೇರಿಯ ಜಿಲ್ಲಾ ಕೇಂದ್ರ ಗ್ರಂಥಾಲಯ ಪ್ರೇರಣೆಯಾಯಿತು. ಸಪ್ತಾಹದ ಮೂಲಕ ಗ್ರಂಥಾಲಯಗಳಿಗೆ ಹೆಚ್ಚಿನ ಓದುಗರು ದೊರಕಲಿ. ಹೊಸ ಪುಸ್ತಕಗಳನ್ನು ಗ್ರಂಥಾಲಯಗಳಿಗೆ ತರಿಸುವ ನಿಟ್ಟಿನಲ್ಲಿ ಸರ್ಕಾರ ಗ್ರಂಥಾಲಯಗಳಿಗೆ ಹೆಚ್ಚಿನ ಆರ್ಥಿಕ ಶಕ್ತಿ ನೀಡಲಿ ಎಂದು ದೀಪಾ ಭಾಸ್ತಿ ಸಲಹೆ ನೀಡಿದರು.
ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಎಚ್.ಟಿ. ರಾಷ್ಟಿçÃಯ ಗ್ರಂಥಾಲಯ ಸಪ್ತಾಹ ಉದ್ಘಾಟಿಸಿ ಮಾತನಾಡಿ, ಗ್ರಂಥಾಲಯಗಳು ಓದುಗರ ಪಾಲಿಗೆ ಆಲಯ ಇದ್ದಂತೆ. ಗ್ರಂಥಗಳ ಗುಡಿಯೇ ಆಗಿರುವ ಗ್ರಂಥಾಲಯಗಳು ಓದುಗರಲ್ಲಿ ಸಾಹಿತ್ಯಾಭಿರುಚಿ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಿಕೊಂಡು ಬಂದಿವೆ. ವಿದ್ಯಾರ್ಥಿಗಳಲ್ಲಿಯೂ ಓದುವ ಅಭ್ಯಾಸಕ್ಕೆ ಗ್ರಂಥಾಲಯಗಳು ಕಾರಣವಾಗಬೇಕು. ಗ್ರಂಥಾಲಯಗಳನ್ನು ಸದುಪಯೋಗಪಡಿಸಿಕೊಂಡು ಮಕ್ಕಳು ಸಾಹಿತ್ಯ ಕೃತಿಗಳನ್ನು, ದಿನಪತ್ರಿಕೆಗಳನ್ನು ಓದುವಂತಾಗಬೇಕು. ಆಯಾ ಶಿಕ್ಷಣ ಸಂಸ್ಥೆಗಳು ಗ್ರಂಥಾಲಯ ಭೇಟಿಯಂತಹ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳಲ್ಲಿ ಗ್ರಂಥಾಲಯದ ಮಹತ್ವ ತಿಳಿಸಿಕೊಡುವಂತಹ ಕಾರ್ಯಕ್ರಮ ಆಯೋಜಿಸಬೇಕೆಂದು ಸಲಹೆ ನೀಡಿದರು. ಜಿಲ್ಲಾ ಕೇಂದ್ರ ಗ್ರಂಥಾಲಯವು ಅತ್ಯುತ್ತಮವಾಗಿ ನಿರ್ವಹಿಸಲ್ಪಡುತ್ತಾ ಓದುಗ ಸ್ನೇಹಿಯಾಗಿದೆ. ಇದಕ್ಕೆ ಕಾರಣರಾದ ಗ್ರಂಥಾಲಯದ ಸಿಬ್ಬಂದಿ ವರ್ಗ ಅಭಿನಂದನಾರ್ಹರು ಎಂದರು.
ಸಾಹಿತಿ ಸುಬ್ರಾಯ ಸಂಪಾಜೆ ಮಾತನಾಡಿ, ಮಡಿಕೇರಿಯಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಸಾಕಷ್ಟು ಮಹತ್ವವಿದೆ. ಇಲ್ಲಿನ ಗ್ರಂಥಾಲಯ ಸಿಬ್ಬಂದಿಗಳು ಸ್ನೇಹಪರರು ಎಂಬುದೇ ಹೆಚ್ಚು ಓದುಗರನ್ನು ಈ ಗ್ರಂಥಾಲಯ ಹೊಂದಲು ಕಾರಣವಾಗಿದೆ. ಗ್ರಂಥಾಲಯ ಸಪ್ತಾಹ ಮತ್ತಷ್ಟು ಓದುಗರನ್ನು ಪಡೆಯಲು ಕಾರಣವಾಗಲಿ ಎಂದು ಹಾರೈಸಿದರು. ಜ್ಞಾನದ ದೀಪ ಬೆಳಗಿಸುವಂಥ ಗ್ರಂಥಾಲಯದ ಕೀರ್ತಿ ಮತ್ತಷ್ಟು ಹೆಚ್ಚಾಗಲಿ ಎಂದು ಆಶಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮುಖ್ಯ ಗ್ರಂಥಪಾಲಕಿ ಸುರೇಖಾ ಮಾತನಾಡಿ, ಪ್ರಸ್ತುತ ಗ್ರಂಥಾಲಯದಲ್ಲಿ ೪೨ ಸಾವಿರ ಪುಸ್ತಕಗಳಿದ್ದು, ೫೫೦೦ ಓದುಗ ಸದಸ್ಯರಿದ್ದಾರೆ. ಏಳು ದಿನಗಳ ಗ್ರಂಥಾಲಯ ಸಪ್ತಾಹದ ಸಂದರ್ಭ ಮತ್ತಷ್ಟು ಸದಸ್ಯರನ್ನು ನೋಂದಣಿ ಮಾಡಿಸಿಕೊಳ್ಳುವ ಗುರಿಯಿದೆ ಎಂದರು. ಜಿಲ್ಲಾ ಕೇಂದ್ರ ಗ್ರಂಥಾಲಯದ ಅಧೀನದಲ್ಲಿ ಜಿಲ್ಲೆಯಾದ್ಯಂತ ೧೦ ಗ್ರಂಥಾಲಯಗಳು ಕಾರ್ಯನಿರ್ವಹಿಸುತ್ತಿವೆ ಎಂದೂ ಅವರು ಮಾಹಿತಿ ನೀಡಿದರು. ೧೯೭೦ ರಿಂದ ಮಡಿಕೇರಿಯಲ್ಲಿ ಜಿಲ್ಲಾ ಕೇಂದ್ರ ಗ್ರಂಥಾಲಯವು ಕಾರ್ಯನಿರ್ವಹಿಸುತ್ತಿದೆ ಎಂದು ಅವರು ತಿಳಿಸಿದರು. ಸಹಾಯಕ ಗ್ರಂಥಪಾಲಕ ವಿಜಯ್ ನಾಗ್ ಕಾರ್ಯಕ್ರಮ ನಿರೂಪಿಸಿದರು.
ರಾಷ್ಟಿçÃಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಗ್ರಂಥಾಲಯ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಓದುಗರಾದ ದಕ್ಷಿಣಮೂರ್ತಿ ಅವರಿಗೆ ಸದಸ್ಯತ್ವ ಕಾರ್ಡ್ ನೀಡುವ ಮೂಲಕ ಚಾಲನೆ ನೀಡಿದರು. ಭಾರತದ ಗ್ರಂಥಾಲಯ ಚಳವಳಿಯ ಪಿತಾಮಹ ಪದ್ಮಶ್ರೀ ಡಾ. ಎಸ್. ಆರ್. ರಂಗನಾಥನ್ ಭಾವಚಿತ್ರಕ್ಕೆ ಗಣ್ಯರು ಪುಪ್ಪಾರ್ಚನೆ ಮಾಡಿದರು. ಅನೇಕ ಓದುಗರು ಕಾರ್ಯಕ್ರಮದಲ್ಲಿ ಹಾಜರಿದ್ದರು.