ಮಡಿಕೇರಿ, ನ. ೧೭: ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ಆಶ್ರಯದಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಸಾಹಿತ್ಯೋತ್ಸವ ಕಾರ್ಯ್ರಕ್ರಮ ದಲ್ಲಿ ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ರಾಷ್ಟçಮಟ್ಟಕ್ಕೆ ಆಯ್ಕೆಯಾಗಿದ್ದ ಕೊಡಗಿನ ಆದಿಲ್ ನಿನ್ನೆ ಗುಲ್ಬರ್ಗದಲ್ಲಿ ನಡೆದ ರಾಷ್ಟçಮಟ್ಟದ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾನೆ. ಗೋಣಿಕೊಪ್ಪಲು ಸಮೀಪದ ಅತ್ತೂರು ನ್ಯಾಷನಲ್ ಅಕಾಡೆಮಿ ಶಾಲೆಯ ೯ನೇ ತರಗತಿಯ ವಿದ್ಯಾರ್ಥಿಯಾಗಿರುವ ಆದಿಲ್, ಅತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಲೀನ ಅಶ್ರಫ್ ಹಾಗೂ ಪಾಲಿಬೆಟ್ಟ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಅಶ್ರಫ್ ಮಾಸ್ಟರ್ ದಂಪತಿಯ ಪುತ್ರ.