ಸುಂಟಿಕೊಪ್ಪ, ನ .೧೯ : ಕೊಡಗಿನ ಸಹಕಾರಿ ಕ್ಷೇತ್ರ ರಾಜ್ಯಕ್ಕೆ ಮಾದರಿಯಾಗಿದೆಂದು ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಕೊಡಂದೇರ. ಪಿ.ಬಾಂಡ್ ಗಣಪತಿ ಹೇಳಿದ್ದಾರೆ. ೭೨ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ ದಿನಾಚರಣೆಯು ಸುಂಟಿಕೊಪ್ಪದ ಮಂಜುನಾಥಯ್ಯ ಸಹಕಾರ ಭವನದಲ್ಲಿ ನಡೆಯಿತು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ, ಸುಂಟಿಕೊಪ್ಪ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ಮತ್ತು ಸುಂಟಿಕೊಪ್ಪ ಮಹಿಳಾ ಸಹಕಾರ ಸಂಘ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಸಹಕಾರಿಗಳಿಗೆ ಸನ್ಮಾನಿಸಿ ಮಾತನಾಡಿದ ಅವರು, ಸಹಕಾರ ಕ್ಷೇತ್ರ ಏಕಸೇವಾ ಕ್ಷೇತ್ರವಾಗಿ ಉಳಿಯದೆ ಬಹುಸೇವಾ ಕ್ಷೇತ್ರವಾಗಿ ಬೆಳೆಯುತ್ತಿದೆ. ಸಹಕಾರ ಕ್ಷೇತ್ರದ ಮಹತ್ವವನ್ನು ಆರಿತ ಕೇಂದ್ರ ಸರಕಾರ ಸಹಕಾರ ಸಚಿವಾಲಯ ಪ್ರಾರಂಭಿಸಿದ ಮೇಲೆ ಏಕರೂಪದ ಗಣಕೀಕರಣದ ವ್ಯವಸ್ಥೆಯಿಂದ ಆಡಳಿತದಲ್ಲಿ ಪಾರದರ್ಶಕತೆಯನ್ನು ತರಲಾಗುತ್ತಿದೆ. ವಿಶೇಷವಾಗಿ ಆಹಾರ ಜನೌಷಧ, ಪಟ್ರೋಲ್ ಬಂಕ್, ಅಡುಗೆ ಅನಿಲ ವಿತರಣಾ ವ್ಯವಸ್ಥೆಗೆ ಕೂಡ ಸಹಕಾರ ಸಚಿವಾಲಯ ಮುಂದಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಗುಜರಾತ್, ಮಹಾರಾಷ್ಟç ಮತ್ತು ಕರ್ನಾಟಕಗಳಲ್ಲಿ ಪ್ರಾಯೋಗಿಕವಾಗಿ ಏಕರೂಪದ ತಂತ್ರAಶವನ್ನು ಅಳವಡಿಸಿಕೊಳ್ಳಲು ಸೂಚಿಸಿದೆ. ಆದರೆ, ಕರ್ನಾಟಕದಲ್ಲಿ ಇಚ್ಛಾಶಕ್ತಿಯ ಕೊರತೆಯಿಂದ ಹಿನ್ನಡೆಯಾಗಿದೆ. ಅತ್ಯುತ್ತಮವಾಗಿರುವ ಕರ್ನಾಟಕ ಸಹಕಾರ ಕ್ಷೇತ್ರದ ಕಾಯ್ದೆಯನ್ನು ಚರ್ಚೆ ಇಲ್ಲದೆ ಪರವಿರೋಧ ಲೆಕ್ಕಿಸದೆ ತಿದ್ದುಪಡಿ ಮಾಡಲಾಗುತ್ತಿದೆ ಎಂದು ವಿಷಾದಿಸಿದ ಅವರು ಕರ್ನಾಟಕದಲ್ಲಿ ಕೊಡಗು ದಕ್ಷಿಣ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ಅತ್ಯುತ್ತಮ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು ಕೊಡಗಿನಲ್ಲಿ ಶೇ.೬೦% ಪ್ರಾಥಮಿಕ ಕೃಷಿಪತ್ತಿನ ಸಂಘಗಳು ರೂ. ೬೦೦ ಕೋಟಿಯವರೆಗೂ ವಹಿವಾಟು ನಡೆಸುತ್ತಿರುವುದು ಗಮನಾರ್ಹ ಎಂದರು.
ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ ಉದ್ಘಾಟಿಸಿ ಮಾತನಾಡಿ, ಕೊಡಗಿನಲ್ಲಿ ಸಹಕಾರ ಕ್ಷೇತ್ರ ಕೂಡ ರಾಜ್ಯ ಮತ್ತು ದೇಶಕ್ಕೆ ಕ್ರೀಡೆ ಹಾಗೂ ಸೇನೆಗೆ ನೀಡಿರುವ ಮಹತ್ತರ ಕೊಡುಗೆಯಷ್ಟೇ ಕೊಡುಗೆಯನ್ನು ನೀಡಿದೆ. ರಾಜ್ಯದಲ್ಲಿ ಮೊದಲ ಸಹಕಾರ ಸಂಘ ಗದಗದಲ್ಲಿ ಅಸ್ತಿತ್ವಕ್ಕೆ ಬಂದ ೧೫ ದಿನಗಳಲ್ಲಿ ಸೋಮವಾರಪೇಟೆ ತಾಲೂಕಿನ ತಲ್ತರೆಶೆಟ್ಟಳ್ಳಿಯಲ್ಲಿ ಕೆ.ದೊಡ್ಡಯ್ಯ ಮತ್ತು ಅವರ ತಂಡದಿAದ ಅಸ್ವಿತ್ವಕ್ಕೆ ಬಂತು ಎಂದು ಸ್ಮರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಜೆರ್ಮಿಡಿಸೋಜ ವಹಿಸಿ ಮಾತನಾಡಿದರು ದಿನದ ಮಹತ್ವದ ಕುರಿತು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕಿ ಎಂ.ಎA. ಶಾಮಲ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಸುಂಟಿಕೊಪ್ಪ ಮಹಿಳಾ ಸಂಘದ ಅಧ್ಯಕ್ಷೆ ಲೀಲಾಮೇದಪ್ಪ ಮಾತನಾಡಿದರು.
ಈ ಸಂದರ್ಭದಲ್ಲಿ ಹಿರಿಯ ಸಹಕಾರಿಗಳಾದ ಪಟ್ಟೆಮನೆ ಗಿರಿಜ ಉದಯಕುಮಾರ್, ಅಪ್ಪಚೆಟ್ಟೋಳಂಡ ಸಾವಿತ್ರಿ ಕಾವೇರಪ್ಪ, ಅತ್ತೂರು ನಲ್ಲೂರು ಗ್ರಾಮದ ಐ.ಎಸ್. ಬಾಲಕಿ, ಉಲುಗುಲಿ ಗ್ರಾಮದ ಯಂಕನ ಎಂ. ಕರುಂಬಯ್ಯ, ಕಲ್ಲೂರಿನ ಕೆ.ಬಿ. ರಾಜಪ್ಪ, ಅಂದಗೋವೆ ಗ್ರಾಮದ ಚಿಕ್ಕಂಡ ಕೆ. ಸಾಬು ಉತ್ತಯ್ಯ ಅವರನ್ನು ಸನ್ಮಾನಿಸಲಾಯಿತು.
ಮುಖ್ಯ ಅತಿಥಿಗಳಾಗಿ ಸುಂಟಿಕೊಪ್ಪ ಪ್ರಾ.ಕೃ.ಪ.ಸ.ಸಂ. ಉಪಾಧ್ಯಕ್ಷ ಪಿ.ಪಿ. ಉದಯಕುಮಾರ್, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರುಗಳು ಮತ್ತು ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರುಗಳು ಕೊಡಗು ಜಿಲ್ಲೆಯ ಸಹಕಾರ ಸಂಘದ ಉಪ ನಿಬಂಧಕ ಹೆಚ್.ಡಿ. ಕುಮಾರ್ ಪಾಲ್ಗೊಂಡಿದ್ದರು. ಕೊಡಗು ಜಿಲ್ಲಾ ಕೇಂದ್ರ ಬ್ಯಾಂಕಿನ ವ್ಯವಸ್ಥಾಪಕರಾದ ಆರ್. ಮಂಜುಳ ಪ್ರಾರ್ಥಿಸಿದರು. ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕÀ ಡಾ. ಶಶಿಕಾಂತ್ ರೈ ಸ್ವಾಗತಿಸಿದರು, ಕೊಡಗು ಜಿಲ್ಲಾ ಸಹಕಾರಿ ಯೂನಿಯನ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಇದೇ ಸಂದರ್ಭದಲ್ಲಿ ಕುಶಾಲನಗರದ ಎ.ಪಿಎಂಎಸ್ ಸಂಘದ ಅಧ್ಯಕ್ಷರಾಗಿ ಆಯ್ಕೆಗೊಂಡ ಎಂ.ಎA.