ಮಡಿಕೇರಿ, ನ. 20: ಕನ್ನ ಡದ ಮೊದಲ ನಾಡಗೀತೆ ಉದಯ ವಾಗಲಿ ನಮ್ಮ ಚೆಲುವ ಕನ್ನಡ ನಾಡಿಗೆ ನೂರು ವರ್ಷಗಳು ತುಂಬಿರುವ ಹಿನ್ನಲೆಯಲ್ಲಿ ಕೊಡಗು ಪತ್ರಕರ್ತರ ಸಂಘದಿಂದÀ ಮುಳಿಯ ಚಿನ್ನಾಭರಣ ಸಂಸ್ಥೆಯ ಸಹಯೋಗದಲ್ಲಿ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು - ಗೀತಗಾಯನ ಕಾರ್ಯಕ್ರಮವನ್ನು ತಾ.23 ರಂದು ಮಡಿಕೇರಿಯಲ್ಲಿ ಆಯೋ ಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಎಚ್.ಟಿ. ತಿಳಿಸಿದ್ದಾರೆ.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅನಿಲ್, ತಾ.23 ರಂದು ಸಂಜೆ 5.30 ಗಂಟೆಗೆ ನಗರದ ರೆಡ್ ಬ್ರಿಕ್ಸ್ ಇನ್‍ನ ಸತ್ಕಾರ ಸಭಾಂಗಣದಲ್ಲಿ ಆಯೋಜಿತ ಕಾರ್ಯಕ್ರಮಕ್ಕೆ ಮುಳಿಯ ಚಿನ್ನಾಭರಣ ಸಂಸ್ಥೆ ಸಹಯೋಗ ನೀಡಿದ್ದು 3 ಗಂಟೆ ಅವಧಿಯ ಕನ್ನಡ ಗೀತೆಗಳ ಕಾರ್ಯಕ್ರಮದಲ್ಲಿ ಜಿಲ್ಲೆಯ 33 ಗಾಯಕ, ಗಾಯಕಿಯರು ಹಾಡಲಿದ್ದಾರೆ ಎಂದರು. 1924 ರಲ್ಲಿ ಕನ್ನಡದ ಹೆಸರಾಂತ ಕವಿ, ಸಾಹಿತಿ ಹುಯಿಲಗೋಳ ನಾರಾಯಣರಾವ್ ವಿರಚಿತ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು. ಬೆಳಗಾವಿಯ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮ ಗಾಂಧೀಜಿ ಸಮ್ಮುಖದಲ್ಲಿ ಹಾಡಲ್ಪಟ್ಟು ಕನ್ನಡದ ಮೊದಲ ನಾಡಗೀತೆ ಎಂಬ ಹಿರಿಮೆಗೆ ಪಾತ್ರವಾಗಿತ್ತು. ಆ ಅಪೂರ್ವ ಹಾಡಿನ ಶತಸಂಭ್ರಮವನ್ನೂ ಮಡಿಕೇರಿಯಲ್ಲಿ ಗೀತಗಾಯನಗಳ ಮೂಲಕ ಆಚರಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಕಾರ್ಯಕ್ರಮವನ್ನು ಪ್ರಾಯೋಗಿಕ ಕಾರ್ಯಕ್ರಮವಾಗಿ ರೂಪಿಸಿದ್ದೇವೆ. ಹೀಗಾಗಿ ಪ್ರಸ್ತುತ 33 ಕಲಾವಿದರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಹಿರಿಯ ಕಲಾವಿದ ಜಿ. ಚಿದ್ವಿಲಾಸ್ ಮಾರ್ಗದರ್ಶನದಲ್ಲಿ 4ನಾಲ್ಕನೇ ಪುಟಕ್ಕೆ