ಕೂಡಿಗೆ, ನ. 20: ಜಿಲ್ಲಾ ಪಂಚಾಯಿತಿ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಸ್ವಚ್ಛ್ ಭಾರತ್ ಮಿಷನ್ ವತಿಯಿಂದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಇಕೋ ಕ್ಲಬ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ, ಎಸ್‍ಡಿಎಂಸಿ ಹಾಗೂ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಪ್ರೌಢಶಾಲೆಯಲ್ಲಿ ಸ್ವಚ್ಛ ಭಾರತ್ ಅಭಿಯಾನ ಹಾಗೂ ಗೋ ಗ್ರೀನ್ ಅಭಿಯಾನದಡಿ ಎಲ್ಲರಿಗೂ ಆರೋಗ್ಯ ಮತ್ತು ನೈರ್ಮಲ್ಯ ಎಂಬ ಧ್ಯೇಯದೊಂದಿಗೆ ವಿಶ್ವ ಶೌಚಾಲಯ ದಿನದ ಅಂಗವಾಗಿ ಶೌಚಗೃಹ ಬಳಕೆ ಕುರಿತು ಜನಜಾಗೃತಿ ನಡೆಸಲಾಯಿತು.

ವಿಶ್ವ ಶೌಚಾಲಯ ದಿನದ ಮಹತ್ವ ಹಾಗೂ ಶೌಚಾಲಯ ಸ್ವಚ್ಛತೆ ಕುರಿತು ಕುರಿತು ಮಾಹಿತಿ ನೀಡಿದ ಶಾಲಾ ಮುಖ್ಯೋಪಾಧ್ಯಾಯರು, ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕ ಟಿ.ಜಿ. ಪ್ರೇಮಕುಮಾರ್, ಶೌಚಾಲಯಗಳು ಸಾರ್ವಜನಿಕ ಆರೋಗ್ಯದ ಅಡಿಪಾಯವಾಗಿದ್ದು, ಆರೋಗ್ಯ, ನೈರ್ಮಲ್ಯ ಹಾಗೂ ಸ್ವಚ್ಛತೆ ಕಾಪಾಡುವುದರೊಂದಿಗೆ ಪರಿಸರವನ್ನು ರಕ್ಷಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ ಎಂದರು.

ಸ್ವಚ್ಛ ಶೌಚಾಲಯ, ಸ್ವಚ್ಛ ಪರಿಸರ ಸಂಕಲ್ಪದ ಗುರಿ ಕುರಿತು ಮಾಹಿತಿ ನೀಡಿದ ಟಿ.ಜಿ. ಪ್ರೇಮಕುಮಾರ್, ಸ್ವಚ್ಛ ಶೌಚಾಲಯ ನಿರ್ವಹಣೆ ಕುರಿತು ಸ್ವತಃ ತಾವೇ ಶೌಚಾಲಯವನ್ನು ಸ್ವಚ್ಛಗೊಳಿಸುವ ಮೂಲಕ ವಿದ್ಯಾರ್ಥಿಗಳಿಗೆ ಸ್ವಚ್ಛತೆ, ನೀರಿನ ಬಳಕೆ ಮತ್ತು ನೈರ್ಮಲ್ಯದ ಕುರಿತು ಅರಿವು ಮೂಡಿಸಿದರು.

2030ರ ವೇಳೆಗೆ ವಿಶ್ವದ ಎಲ್ಲ ವ್ಯಕ್ತಿಯೂ ಸುರಕ್ಷಿತ ಶೌಚಾಲಯ ಹೊಂದುವಂತೆ ಮಾಡುವುದು ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದು ಹೇಳಿದರು. ಶಾಲಾ ಶೌಚಾಲಯದ ಸ್ವಚ್ಛತೆ ಕುರಿತು ಮಾತನಾಡಿದ ಶಾಲೆಯ ಇಕೋ ಕ್ಲಬ್‍ನ ಉಸ್ತುವಾರಿ ಶಿಕ್ಷಕಿ ಬಿ.ಡಿ. ರಮ್ಯ, ನಾವು ಪ್ರತಿನಿತ್ಯ ಬಳಸುವ ಶೌಚಾಲಯವನ್ನು ನಿಯಮಿತವಾಗಿ ಸ್ವಚ್ಛಗೊಳಿಸುವ ಮೂಲಕ ಉತ್ತಮ ಆರೋಗ್ಯ, ನೈರ್ಮಲ್ಯ ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಹಾಗೆಯೇ, ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ಸ್ವಚ್ಛತೆಗೂ ಹೆಚ್ಚಿನ ಗಮನ ಹರಿಸುವ ಮೂಲಕ ಉತ್ತಮ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಬೇಕು ಎಂದರು.

ಶಾಲೆಗಳಲ್ಲಿ ಸ್ವಚ್ಛ ಶೌಚಾಲಯಗಳ ಮಹತ್ವ ಕುರಿತು ಮಾಹಿತಿ ನೀಡಿದ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ. ದಯಾನಂದ ಪ್ರಕಾಶ್, ಸ್ವಚ್ಛವಾದ, ಉತ್ತಮವಾಗಿ ನಿರ್ವಹಿಸಲ್ಪಟ್ಟ ಶೌಚಾಲಯಗಳು ಕೇವಲ ಅವಶ್ಯಕತೆಯμÉ್ಟೀ ಅಲ್ಲ, ಇವುಗಳು ವಿದ್ಯಾರ್ಥಿಗಳ ಆರೋಗ್ಯ, ನೈರ್ಮಲ್ಯ, ಸೌಕರ್ಯ ಮತ್ತು ಶೈಕ್ಷಣಿಕ ಯಶಸ್ಸಿನ ಮೂಲಾಧಾರವಾಗಿವೆ. ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದರು. ನಮ್ಮ ಶಾಲೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್ ಅವರೇ ಸ್ವತಃ ಶಾಲಾ ಶೌಚಾಲಯವನ್ನು ಸ್ವಚ್ಛಗೊಳಿಸುವ ಮೂಲಕ ಸ್ವಚ್ಛತೆ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುತ್ತಿರುವುದು ಶ್ಲಾಘನೀಯವಾದುದು. ನಮ್ಮ ಶಾಲೆಯಲ್ಲಿ ಪರಿಸರ ಮತ್ತು ಸ್ವಚ್ಛತೆ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದು ದಯಾನಂದ ಪ್ರಕಾಶ್ ಹೇಳಿದರು.

ಶಾಲಾ ಶಿಕ್ಷಕರಾದ ಕೆ. ಗೋಪಾಲಕೃಷ್ಣ, ಬಿ.ಡಿ. ರಮ್ಯ, ಬಿ.ಎನ್. ಸುಜಾತ, ಅನ್ಸಿಲಾ ರೇಖಾ, ಕೆ.ಟಿ. ಸೌಮ್ಯ, ಹೆಬ್ಬಾಲೆ ಕ.ಸಾ.ಪ. ಘಟಕದ ಅಧ್ಯಕ್ಷ ಎಂ.ಎನ್. ಮೂರ್ತಿ, ಕಾರ್ಯದರ್ಶಿ ಹೆಚ್.ಎನ್. ಸುಬ್ರಮಣ್ಯ, ಕಚೇರಿ ಸಿಬ್ಬಂದಿ ಎಂ. ಉμÁ, ವಿದ್ಯಾರ್ಥಿಗಳು ಇದ್ದರು.

ಇದಕ್ಕೂ ಮೊದಲು ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್ ಹಾಗೂ ಶಿಕ್ಷಕರು ಮಕ್ಕಳಿಗೆ ಶೌಚಾಲಯವನ್ನು ನಾವು ಹೇಗೆ ಸ್ವಚ್ಛ ಮಾಡಿ ಮತ್ತೊಬ್ಬರ ಬಳಕೆಗೆ ಅನುಕೂಲ ಮಾಡಿಕೊಡಬೇಕು ಎಂಬ ಬಗ್ಗೆ ಅರಿವು ಮೂಡಿಸಿದರು. ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್ ಅವರು, ಸ್ವತಃ ತಾವೇ ಶಾಲಾ ಶೌಚಾಲಯವನ್ನು ಸ್ವಚ್ಛಗೊಳಿಸಿ ಮಕ್ಕಳಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿದರು.

ಕೂಡ್ಲೂರು ಗ್ರಾಮದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ವಿಶ್ವ ಶೌಚಾಲಯ ದಿನದ ಅಂಗವಾಗಿ ಸ್ವಚ್ಛ ಶಾಲೆ - ಸ್ವಚ್ಛ ಶೌಚಾಲಯ, ಸ್ವಚ್ಛ ಶೌಚಾಲಯ ಪ್ರತಿಯೊಬ್ಬರ ಹಕ್ಕು, ನಿಮ್ಮ ಶೌಚಾಲಯವನ್ನು ಸುರಕ್ಷಿತವಾಗಿ ಮತ್ತು ಸ್ವಚ್ಛವಾಗಿಡಿ, ಶೌಚಾಲಯದ ಮಹತ್ವವನ್ನು ಕಡಿಮೆ ಮಾಡಬೇಡಿ, ಸ್ವಚ್ಛ ಶೌಚಾಲಯವೇ ಸುರಕ್ಷಿತ ಶೌಚಾಲಯ, ನಮ್ಮ ಶೌಚಾಲಯ- ನಮ್ಮ ಆರೋಗ್ಯ, ನಾವು ಬಯಲು ಶೌಚಕ್ಕೆ ಕಡಿವಾಣ ಹಾಕೋಣ ಎಂಬಿತ್ಯಾದಿ ಘೋಷಣೆಗಳ ಭಿತ್ತಿಫಲಕಗಳನ್ನು ಹಿಡಿದು ಜನರಲ್ಲಿ ವಿಶ್ವ ಶೌಚಾಲಯ ದಿನದ ಮಹತ್ವದ ಕುರಿತು ಜನಜಾಗೃತಿ ಮೂಡಿಸಿದರು.

ಶಿಕ್ಷಕರು ಮಕ್ಕಳಿಗೆ ಶೌಚಾಲಯ ಸ್ವಚ್ಛಗೊಳಿಸಿ ನೈರ್ಮಲ್ಯ ಕಾಪಾಡೋಣ ಬನ್ನಿ ಎಂದು ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.