ಕೂಡಿಗೆ ನ. ೨೧ : ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯು ಕುಶಾಲನಗರ ಪುರಸಭೆಯ ಸಭಾಂಗಣದಲ್ಲಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್ ನವರ ಅಧ್ಯಕ್ಷತೆಯಲ್ಲಿ ನಡೆಯಿತು. ಹಿಂದಿನ ಪ್ರಗತಿ ಪರಿಶೀಲನ ಸಭೆಯ ಅನುಷ್ಠಾನ ವರದಿಯನ್ನು ಓದುವ ಮೂಲಕ ಅದರ ಸಾಧಕ ಬಾಧಕಗಳ ಬಗ್ಗೆ ಚರ್ಚೆಗಳು, ಜೊತೆಯಲ್ಲಿ ಯಾವ ಹಂತದಲ್ಲಿ ಅಧಿಕಾರಿಗಳು ಯೋಜನೆಯ ಪ್ರಗತಿಗೆ ಕಾರ್ಯೊನ್ಮಖರಾಗಿರುತ್ತಾರೆ ಎಂಬುದರ ಬಗ್ಗೆ ಚರ್ಚೆಗಳು ನಡೆದವು. ಹಾಜರಿದ್ದ ಕೆಲ ಇಲಾಖೆಯವರು ಹಿಂದಿನ ಸಭೆಯ ವಿಷಯಗಳನ್ನು ನಿಯಮಾನುಸಾರ ಅನುಷ್ಠಾನಗೊಳಿಸದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಸಮರ್ಪಕವಾಗಿ ಯೋಜನೆಯ ಕಾರ್ಯ ನಿರ್ವಹಿಸುವಂತೆ, ಮತ್ತು ಯೋಜನೆಯು ಎಲ್ಲಾ ಪಲಾನುಭವಿಗಳಿಗೆ ದೊರಕುವಂತೆ ಕ್ರಮ ವಹಿಸುವಂತೆ ಅಧ್ಯಕ್ಷರು ಸೂಚನೆ ನೀಡಿದರು. ಗೃಹಲಕ್ಷ್ಮಿ ಯೋಜನೆಗೆ ಸಂಬAಧಿಸಿದAತೆ ಪಲಾನುಭಮಿಗಳ ಬ್ಯಾಂಕ್ ಖಾತೆಯ ಬಗ್ಗೆ ಸಂಬAಧಿಸಿದ ಅಧಿಕಾರಿಗಳು ಮಾಹಿತಿಯನ್ನು ಪಡೆದು ಎಲ್ಲಾ ಮಹಿಳೆರಿಗೆ ಯೋಜನೆಯ ಸೌಲಭ್ಯಗಳು ಸಿಗುವಂತೆ ಕಾರ್ಯ ನಿರ್ವಹಿಸುವಂತೆ ತಿಳಿಸಿದರು. ನಂತರ ಹಾಜರಿದ್ದ ಅಧಿಕಾರಿಗಳೊಂದಿಗೆ ಹಿಂದಿನ ಅನುಪಾಲನ ವರದಿಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯೊಂದಿಗೆ ಚರ್ಚೆಗಳು ನಡೆದವು.

ಅಧ್ಯಕ್ಷತೆ ವಹಿಸಿದ ವಿ. ಪಿ. ಶಶಿಧರ್ ಮಾತಾನಾಡಿ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹಜ್ಯೋತಿ ಯೋಜನೆ, ಗೃಹಲಕ್ಷಿö್ಮ ಯೋಜನೆ, ಯುವ ನಿಧಿ ಯೋಜನೆಗಳ ಬಗ್ಗೆ ಸಂಬAಧಿಸಿದ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವುದರ ಜೊತೆಯಲ್ಲಿ ಯೋಜನೆಯನ್ನು ಎಲ್ಲಾ ಫಲಾನುಭವಿಗಳಿಗೆ ದೊರಕುವಂತೆ ಕರ್ತವ್ಯ ನಿರ್ವಹಿಸುವಂತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಹಾಜರಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ಅಭಿವೃದ್ಧಿ ಪೂರಕವಾದ ಮಾಹಿತಿ ಸಂಗ್ರಹಿಸಿ, ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ತಿಳಿಸಿದರು.

ಹೆಚ್ಚುವರಿ ಸಾರಿಗೆ ಸಂಪರ್ಕದ ವ್ಯವಸ್ಥೆ, ಮತ್ತು ಯೋಜನೆಯಲ್ಲಿ ಪಲಾನುಭವಿಗಳು ಹೆಚ್ಚಾಗಿರುವ ಬಗ್ಗೆ, ಇನ್ನೂ ಬಾಕಿ ಇರುವ ಫಲಾನುಭವಿಗಳ ಸಂಖ್ಯೆಗಳ ಬಗ್ಗೆ ಹಾಜರಿದ್ದ ಅಧಿಕಾರಿಗಳೊಂದಿಗೆ ಸವಿಸ್ತಾರವಾದ ಚರ್ಚೆಗಳು ನಡೆದವು.

ಸಭೆಯಲ್ಲಿ ಸೋಮವಾರಪೇಟೆ ತಾಲ್ಲೂಕು ಪಂಚಾಯತ್ ಮುಖ್ಯ ಪರಮೇಶ್ ಕುಮಾರ್, ಜಿಲ್ಲಾ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಕೆ.ಸಿ. ಭೀಮಯ್ಯ, ತಾಲ್ಲೂಕು ಸಮಿತಿ ಸದಸ್ಯರಾದ ಕೆ.ಎಸ್. ಕೃಷ್ಣ ಗೌಡ, ಶ್ರೀನಿವಾಸ್ ,ಅಬ್ದುಲ್ ರಜಾಕ್, ರಫೀಕ್ ಖಾನ್, ಆದಂ, ಮಲ್ಲಿಕಾರ್ಜುನ, ಶ್ರೀನಿವಾಸ್, ಕಿಶೋರ್, ಮುಸ್ತಫಾ, ಹೆಬ್ಬಾಲೆ ಶೇಖರ್, ಸೇರಿದಂತೆ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಶ್ರೀ ದೇವಿ, ವಿದ್ಯುತ್ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್, ಶ್ರೀನಿವಾಸ್, ಸಾರಿಗೆ ಇಲಾಖೆ ಅಧಿಕಾರಿ ಅಶೋಕ್, ಮತ್ತು ಉದ್ಯೋಗ ವಿನಿಮಯ ಇಲಾಖೆ ಮಂಜುನಾಥ. ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗ ದವರು ಹಾಜರಿದ್ದರು.