ಮಡಿಕೇರಿ, ನ. ೨೧: ಕುಶಾಲನಗರ ಪುರಸಭಾ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ಮುಖ್ಯಸ್ಥರಿಗೆ ಈ ಮೂಲಕ ತಿಳಿಸುವುದೇನೆಂದರೆ ಮಾನ್ಯ ಸರ್ವೋಚ್ಛ ನ್ಯಾಯಾಲಯವು ಸ್ವಯಂ ಪ್ರೇರಿತ ರಿಟ್ ಅರ್ಜಿ ಸಂಖ್ಯೆ ೫/೨೦೨೫ ರಲ್ಲಿ ನೀಡಿರುವ ನಿರ್ದೇಶನದಂತೆ ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ ಕೂಡಲೇ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ೩ ದಿನಗಳ ಒಳಗಾಗಿ ಕುಶಾಲನಗರ ಪುರಸಭೆಯ ಮುಖ್ಯಾಧಿಕಾರಿಯವರಿಗೆ ತಿಳಿಸುವುದು.

ತಮ್ಮ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಕ್ರಮ ವಹಿಸುವುದು. ನಗರ ಸ್ಥಳೀಯ ಸಂಸ್ಥೆಯಿAದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಬಂಧಿಸುವದನ್ನು ಮೇಲ್ವಿಚಾರಣೆ ಮಾಡಲು ತಮ್ಮ ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡುವುದು.

ಮಾನ್ಯ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ತಮ್ಮ ಸಂಸ್ಥೆಯ ವ್ಯಾಪ್ತಿಯಲ್ಲಿ ಪುನ: ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಚವನ್ನು ತಮ್ಮ ಸಂಸ್ಥೆಯಿAದ ವಸೂಲಿ ಮಾಡಲಾಗುವುದು. ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ತಮ್ಮ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಗಿರೀಶ್ ತಿಳಿಸಿದ್ದಾರೆ.