ಮಡಿಕೇರಿ, ನ. ೨೨ : ಕನ್ನಡ ನಾಡು ನುಡಿ ರಕ್ಷಣೆಗೆ ನಮ್ಮ ಸರಕಾರ ಬದ್ಧ. ಕೊಡಗು ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಟ್ಟಡ ನಿರ್ಮಾಣ ಮಾಡುವಲ್ಲಿ ಸಂಪೂರ್ಣ ಸಹಕಾರ ನೀಡುವುದಾಗಿ ಕರ್ನಾಟಕ ಸರಕಾರದ ಸಣ್ಣ ನೀರಾವರಿ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನ ನಿರ್ಮಾಣ ಸಮಿತಿಯ ಮಹಾಪೋಷಕರೂ ಆದ ಎನ್.ಎಸ್. ಭೋಸರಾಜು ನುಡಿದರು. ಅವರು ಕನ್ನಡ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಭವನ ನಿರ್ಮಾಣ ಮಾಡಲು ಸಹಕಾರ ಕೋರುವ ಸಲುವಾಗಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯ ಶಾಸಕರನ್ನು ಒಳಗೊಂಡು ಮುಖ್ಯಮಂತ್ರಿಗಳ ಭೇಟಿ ಮಾಡಿ ಸರಕಾರದಿಂದ ಅನುದಾನ ಕೊಡಿಸುವುದಾಗಿಯೂ ಜಿಲ್ಲೆಯ ಎಪಿಎಂಸಿ, ನಗರಸಭೆÀ, ಪುರಸಭೆ ಮತ್ತು ಗ್ರಾಮ ಪಂಚಾಯಿತಿಗಳಿAದಲೂ ಆರ್ಥಿಕ ನೆರವು ನೀಡಲು ಶ್ರಮಿಸುವುದಾಗಿ ಹೇಳಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಸಾಹಿತ್ಯ ಭವನ ನಿರ್ಮಾಣ ಸಮಿತಿಯ ಪೋಷಕರು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಆದ ಎ.ಎಸ್. ಪೊನ್ನಣ್ಣ ಮಾತನಾಡಿ, ೪ ನಾಲ್ಕನೇ ಪುಟಕ್ಕೆ

(ಮೊದಲ ಪುಟದಿಂದ) ಕನ್ನಡ ಸಾಹಿತ್ಯ ಪರಿಷತ್ತಿನ ಭವನ ನಿರ್ಮಾಣ ಮಾಡುವಲ್ಲಿ ಪೂರ್ಣ ಸಹಕಾರ ನೀಡುವುದರೊಂದಿಗೆ ತಮ್ಮ ಅನುದಾನದೊಂದಿಗೆ ವೈಯಕ್ತಿಕ ಆರ್ಥಿಕ ಸಹಾಯ ಮಾಡುವುದಾಗಿ ತಿಳಿಸಿದರು. ಸಭೆಯಲ್ಲಿ ಉಪಸ್ಥಿತರಿದ್ದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರು ನಿರ್ಮಾಣ ಸಮಿತಿಯ ಪೋಷಕರು ಆದ ಡಾ. ಮಂತರ್ ಗೌಡ ಮಾತನಾಡಿ ಉಸ್ತುವಾರಿ ಮಂತ್ರಿಗಳ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅತಿ ಹೆಚ್ಚಿನ ಅನುದಾನ ತರುವುದರೊಂದಿಗೆ ತಮ್ಮ ಶಾಸಕರ ಅನುದಾನದಲ್ಲಿ ಈ ಸಾಲಿನಲ್ಲಿ ೨೫ ಲಕ್ಷ ಮತ್ತು ಮುಂದಿನ ಸಾಲಿನಲ್ಲಿ ೨೫ ಲಕ್ಷ ನೀಡುವ ಭರವಸೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ತಿನ ಭವನ ನಿರ್ಮಾಣ ಸಮಿತಿಯ ಕಾರ್ಯಾಧ್ಯಕ್ಷರೂ ಆದ ಟಿ.ಪಿ ರಮೇಶ್ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ೫೦ ವರ್ಷಗಳ ಕನ್ನಡ ಸೇವೆಯ ಕುರಿತು ವಿವರಿಸಿದರು. ಬಂಗಾರಪ್ಪನವರು ಕರ್ನಾಟಕ ಮುಖ್ಯಮಂತ್ರಿಗಳಾಗಿದ್ದ ಕಾಲದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಡಿ.ಜೆ. ಪದ್ಮನಾಭ ಅವರ ಪ್ರಯತ್ನದಿಂದ ೬೦ ಸೆಂಟ್ ಜಾಗವನ್ನು ಸರಕಾರ ಕನ್ನಡ ಸಾಹಿತ್ಯ ಪರಿಷತ್ತಿಗೆ ನೀಡಿದೆ. ೨೦೧೪ರಲ್ಲಿ ನಡೆದ ೮೦ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಉಳಿದಿದ್ದ ೧೦ ಲಕ್ಷ ರೂ.ಗಳನ್ನು ಕಟ್ಟಡ ನಿರ್ಮಾಣಕ್ಕಾಗಿ ಕೇಂದ್ರ ಕಚೇರಿಯಲ್ಲಿ ಠೇವಣಿಯಾಗಿ ಇಡಲಾಗಿದೆ. ಅದು ಈಗ ಅಂದಾಜು ೧೫ ಲಕ್ಷವಾಗಿದ್ದು ಉಳಿದ ಹಣವನ್ನು ಸರಕಾರದಿಂದ ಅನುದಾನ ಪಡೆಯುವ ಮೂಲಕ ಹಾಗೂ ಕನ್ನಡ ಅಭಿಮಾನಿಗಳಿಂದ ದೇಣಿಗೆ ಪಡೆಯುವ ಮೂಲಕ ಭವನ ನಿರ್ಮಾಣ ಮಾಡಬೇಕಿದೆ ಎಂದು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮಾತನಾಡಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಬಹುದಿನದ ಕನಸಾಗಿದ್ದ ಭವನ ನಿರ್ಮಾಣಕ್ಕೆ ನಾಂದಿ ಹಾಡಲಾಗುತ್ತಿದ್ದು ಎಲ್ಲರ ಸಹಕಾರದೊಂದಿಗೆ ಭವನ ನಿರ್ಮಾಣ ಕಾರ್ಯ ಮಾಡುವುದಾಗಿ ತಿಳಿಸಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಕೊಡಗು ಜಿಲ್ಲಾಧಿಕಾರಿ ವೆಂಕಟ್‌ರಾಜ ಮಾತನಾಡಿ ಸಾಹಿತ್ಯ ಪರಿಷತ್ತಿನ ಭವನ ನಿರ್ಮಾಣಕ್ಕೆ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಲಿದ್ದು ಅತಿ ಶೀಘ್ರದಲ್ಲಿ ಭವನ ನಿರ್ಮಾಣ ಆಗಬೇಕು ಎಂದರು. ವೇದಿಕೆಯಲ್ಲಿ ಕೊಡಗು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಅಪರ ಜಿಲ್ಲಾಧಿಕಾರಿ ಐಶ್ವರ್ಯ, ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ, ಮಡಿಕೇರಿ ತಾಲೂಕು ತಹಶೀಲ್ದಾರ್ ಶ್ರೀಧರ್, ಮಡಿಕೇರಿ ತಾಲೂಕು ಭೂ ದಾಖಲೆಗಳ ಉಪ ನಿರ್ದೇಶಕ ಪೊನ್ನಂಪೇಟೆ ತಾಲೂಕು ಭೂ ದಾಖಲೆಗಳ ಉಪನಿರ್ದೇಶಕ ಬಾನಂಗಡ ಅರುಣ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹ ನಿರ್ದೇಶಕ ಕುಮಾರ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವೀರಾಜಪೇಟೆ ತಾಲೂಕು ಅಧ್ಯಕ್ಷ ಡಿ. ರಾಜೇಶ್ ಪದ್ಮನಾಭ, ಜಿಲ್ಲಾ ಗೌರವ ಕೋಶಾಧಿಕಾರಿ ಎಸ್.ಎಸ್. ಸಂಪತ್ ಕುಮಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಾಸು ರೈ, ಜಿಲ್ಲಾ ಸಮಿತಿ ಸದಸ್ಯರಾದ ಕೆ. ಟಿ ಬೇಬಿ ಮ್ಯಾಥ್ಯೂ, ಶ್ರೀಧರ ಹೂವಲ್ಲಿ, ವಿ.ಎಂ. ಧನಂಜಯ. ಹೋಬಳಿ ಅಧ್ಯಕ್ಷ ಎಂ.ಎನ್. ಮೂರ್ತಿ, ಕುಶಾಲನಗರ ತಾಲೂಕು ಕೋಶಾಧಿಕಾರಿ ಕೆ.ವಿ. ಉಮೇಶ್, ಸದಸ್ಯರುಗಳಾದ ರೇಣುಕಾ, ಅಜಯ್, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್, ತಾಲೂಕು ಅಧ್ಯಕ್ಷ ದೀಪಕ್ ಪೊನ್ನಪ್ಪ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹ್ಮದ್ ಸ್ವಾಗತಿಸಿ, ನಿರೂಪಿಸಿದರು. ಗೌರವ ಕಾರ್ಯದರ್ಶಿ ರೇವತಿ ರಮೇಶ್ ವಂದಿಸಿದರು.