ಮಡಿಕೇರಿ, ನ. ೨೨: ಶ್ರೀ ಭಗಂಡೇಶ್ವರ - ತಲಕಾವೇರಿ ದೇವಾಲಯದಲ್ಲಿ ಪ್ರತೀ ವರ್ಷ ರೂಢಿ ಸಂಪ್ರದಾಯದAತೆ ಸಂಪ್ರೋಕ್ಷಣೆಯನ್ನು ನಡೆಸಿಕೊಂಡು ಬರುತ್ತಿರುವ ಹಿನ್ನೆಲೆ ಈ ವರ್ಷವೂ ಶ್ರೀ ಉಚ್ಚಿಲ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ತಾ. ೨೪ ರಿಂದ ೨೭ ರವರೆಗೆ “ಸಂಪ್ರೋಕ್ಷಣೆ” ಕಾರ್ಯಕ್ರಮ ನಡೆಯಲಿದೆ.
ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಾಗಿ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ. ಚಂದ್ರಶೇಖರ್ ಕೋರಿದ್ದಾರೆ. ಶ್ರೀ ತಲಕಾವೇರಿ ದೇವಾಲಯದಲ್ಲಿ ತಾ. ೨೪ ರಂದು ಬೆಳಿಗ್ಗೆ ೭.೩೦ ಗಂಟೆಗೆ ಗಣಹೋಮ, ಸಂಪ್ರೋಕ್ಷಣೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ.
ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ತಾ. ೨೫ ರಂದು ಶ್ರೀ ಭಗಂಡೇಶ್ವರ ದೇವರಿಗೆ ಬೆಳಿಗ್ಗೆ ೭.೩೦ ಗಂಟೆಗೆ ಗಣಪತಿ ಹೋಮ, ಸಂಪ್ರೋಕ್ಷಣೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಶ್ರೀ ಭೂತ ಬಲಿ, ಶ್ರೀ ಭಗಂಡೇಶ್ವರ ದೇವರ ಉತ್ಸವ ನಡೆಯಲಿದೆ.
ತಾ. ೨೬ ರಂದು ಶ್ರೀ ಸುಬ್ರಹ್ಮಣ್ಯ ದೇವರಿಗೆ ಬೆಳಿಗ್ಗೆ ೭.೩೦ ಗಂಟೆಗೆ ಗಣಹೋಮ, ಶ್ರೀ ಸುಬ್ರಹ್ಮಣ್ಯ ದೇವರಿಗೆ ಪಂಚಾಮೃತ ಅಭಿಷೇಕ, ಸಂಪ್ರೋಕ್ಷಣೆ, ಕಲಶಾಭಿಷೇಕ ಹಾಗೂ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಶ್ರೀ ಭೂತ ಬಲಿ, ಶ್ರೀ ಸುಬ್ರಹ್ಮಣ್ಯ ದೇವರ ಉತ್ಸವ ನಡೆಯಲಿದೆ. ತಾ. ೨೭ ರಂದು ಬೆಳಿಗ್ಗೆ ೭.೩೦ಕ್ಕೆ ಶ್ರೀ ಮಹಾವಿಷ್ಣು ದೇವರಿಗೆ ಗಣಹೋಮ ಶ್ರೀ ಮಹಾವಿಷ್ಣು ಮತ್ತು ಪರಿವಾರ ದೇವರುಗಳ ಶುದ್ಧಿ ಕಲಶ ಕಲಶಾಭಿಷೇಕ ಹಾಗೂ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಶ್ರೀ ಭೂತ ಬಲಿ, ಶ್ರೀ ಮಹಾವಿಷ್ಣು ದೇವರ ಉತ್ಸವ ನಡೆಯಲಿದೆ ಎಂದು ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ.