ವೀರಾಜಪೇಟೆ, ನ. ೨೩: ಸಂಸ್ಕöÈತಿಯನ್ನು ಮರೆಯುವುದು ದೇಶವನ್ನು ವಿನಾಶದ ಕಡೆಗೆ ಕೊಂಡುಹೋದAತೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಮಡಿಕೇರಿ ಡಿ.ಎಲ್.ಎಸ್.ಎ. ಸದಸ್ಯ ಕಾರ್ಯದರ್ಶಿ ಶುಭ ಅಭಿಪ್ರಾಯಪಟ್ಟರು.

ವೀರಾಜಪೇಟೆಯ ಕಾವೇರಿ ಇನ್ಸಿ÷್ಟಟ್ಯೂಟ್ ಆಫ್ ಲಾ ಹಾಗೂ ಕಾವೇರಿ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯ ತನ್ನ ಸಂಸ್ಕöÈತಿಯನ್ನು ಎಂದಿಗೂ ಬಿಡಬಾರದು. ಸಂಸ್ಕöÈತಿಯನ್ನು ಮರೆಯುವುದು ದೇಶದ ವಿನಾಶಕ್ಕೆ ನಾಂದಿಹಾಡಿದAತೆ. ಪ್ರಸ್ತುತ ಸಮಾಜದಲ್ಲಿ ಮಾನವೀಯ ಮೌಲ್ಯಗಳು ದಿನದಿಂದ ದಿನಕ್ಕೆ ಕುಸಿಯುತ್ತಿದ್ದು ಇದಕ್ಕೆ ಮುಖ್ಯ ಕಾರಣವಾಗಿ ನಿಂತಿರುವುದು ಮಾದಕ ವಸ್ತುಗಳ ಬಳಕೆ ಹಾಗೂ ಮೊಬೈಲ್ ಬಳಕೆ ಇದರಿಂದಾಗಿ ಸಮಾಜವಿಂದು ಕೆಟ್ಟದರ ಕಡೆಗೆ ಸಾಗುತ್ತಿದೆ. ಯುವಜನರಲ್ಲಿ ಮೌಲ್ಯಗಳು ಕುಸಿಯುತ್ತಿವೆ ಎಂದರು.

ಸಮಾಜದಲ್ಲಿ ಹೆಚ್ಚಿನವರಿಗೆ ಕಾನೂನಿನ ಸರಿಯಾದ ಅರಿವಿಲ್ಲ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕಾನೂನಿನ ಸೇವೆ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಕಾನೂನು ಪ್ರಾಧಿಕಾರವನ್ನು ಆರಂಭಿಸಲಾಗಿದೆ. ಸಾಮಾನ್ಯ ವ್ಯಕ್ತಿಗೂ ಕಾನೂನಿನ ಸೇವೆ ಒದಗಿಸಿ ಅಸಮಾನತೆಯನ್ನು ಹೋಗಲಾಡಿಸುವುದು ಇದರ ಮೂಲ ಉದ್ದೇಶವಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಮಡಿಕೇರಿ ಡೆಪುö್ಯಟಿ ಲೀಗಲ್ ಏಡ್ ಎ. ಹಾಜ್ಹೀರ ಅವರು, ಪ್ರಸ್ತುತ ಸಮಾಜದಲ್ಲಿ ಹೆಚ್ಚಿನವರು ಕಾನೂನಿನ ತತ್ವಗಳನ್ನು ಗಾಳಿಗೆ ತೂರಿ ಜೀವನವನ್ನು ನಡೆಸುತ್ತಿದ್ದಾರೆ. ವಿದ್ಯಾರ್ಥಿ ಜೀವನದಿಂದಲೇ ಕಾನೂನಿನ ಅರಿವಿನಂತಹ ಕಾರ್ಯಕ್ರಮಗಳು ನಡೆದಾಗ ಮುಂದೆ ಉತ್ತಮ ಪ್ರಜೆಯಾಗಿ ಬೆಳೆಯಲು ಸಾಧ್ಯ.

ಜಿಲ್ಲಾ ಕಾನೂನು ಸಲಹೆಗಳ ಪ್ರಾಧಿಕಾರ ಮಹಿಳೆಯರಿಗೆ, ಮಕ್ಕಳಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗ, ಹಿರಿಯ ನಾಗರಿಕರಿಗೆ, ಬಂದಿತ ಖೈದಿಗಳಿಗೆ, ಮಾಜಿ ಸೈನಿಕರಿಗೆ ಉಚಿತವಾಗಿ ಕಾನೂನು ಸೇವೆಗಳನ್ನು ನೀಡುವುದರೊಂದಿಗೆ ದುರ್ಬಲ ವರ್ಗದವರಿಗೆ ತ್ವರಿತ ಗತಿಯಲ್ಲಿ ನ್ಯಾಯ ಒದಗಿಸಿಕೊಡುವ ಕೆಲಸವನ್ನು ಮಾಡುತ್ತಿದೆ. ಸಮಾಜದಲ್ಲಿ ಕಾನೂನಾತ್ಮಕವಾಗಿ ನಡೆಯಬೇಕಾದ ಸೇವೆಗಳನ್ನು ಈ ವರ್ಗದವರಿಗೆ ಸಮರ್ಪಕವಾಗಿ ಒದಗಿಸುವುದರೊಂದಿಗೆ ಸಮಸ್ಯೆ ನಿವಾರಣೆ ಪ್ರಾಧಿಕಾರ ಸದಾ ಸಿದ್ಧವಾಗಿರುತ್ತದೆ ಎಂದರು.

ಕಾವೇರಿ ಇನ್ಸಿ÷್ಟಟ್ಯೂಟ್ ಆಫ್ ಲಾ ಕಾರ್ಯದರ್ಶಿ ವೇದಿಕಾ ರೆಡ್ಡಿ ಅಧ್ಯಕ್ಷೀಯ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಕಾವೇರಿ ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ದಾನ, ಕಾವೇರಿ ಇನ್ಸಿ÷್ಟಟ್ಯೂಟ್ ಆಫ್ ಲಾ ಕಾಲೇಜಿನ ಟ್ರಸ್ಟಿ ಪ್ರಶಾಂತ್, ಕಾವೇರಿ ಇನ್ಸಿ÷್ಟಟ್ಯೂಟ್ ಆಫ್ ಲಾ ಕಾಲೇಜಿನ ಪ್ರಾಂಶುಪಾಲೆ ಪಿ.ಕೆ. ವಿನೀತಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾವೇರಿ ಇನ್ಸಿ÷್ಟಟ್ಯೂಟ್ ಆಫ್ ಲಾ ಕಾಲೇಜಿನ ಕಾನೂನು ಪದವಿ ವಿದ್ಯಾರ್ಥಿಗಳು, ಉಪನ್ಯಾಸಕರು, ಕಾವೇರಿ ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿಗಳು ಹಾಜರಿದ್ದರು.