ಮಡಿಕೇರಿ, ನ. ೨೩: ಆಲೂರು-ಸಿದ್ದಾಪುರ ವಿದ್ಯುತ್ ವಿತರಣಾ ೬೬/೧೧ ಕೆ.ವಿ. ಉಪ ಕೇಂದ್ರದಿAದ ಹೊರಹೊಮ್ಮುವ ೧೧ ಕೆ.ವಿ. ಮಾರ್ಗಗಳಲ್ಲಿ ತಾ. ೨೫ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ೩ನೇ ತ್ರೆöÊಮಾಸಿಕ ನಿರ್ವಾಹಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಕಣಗಾಲು, ದೊಡ್ಡಳ್ಳಿ, ಗೋಣಿಮರೂರು, ಬಾಣವಾರ, ಸಿದ್ದಲಿಂಗಪುರ, ಮಾಲಂಬಿ, ಹೊಸಗುತ್ತಿ, ಕೈಸರದಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

೩೩/೧೧ ಕೆ.ವಿ. ಮೂರ್ನಾಡು ವಿದ್ಯುತ್ ವಿತರಣಾ ಕೇಂದ್ರದಿAದ ಹೊರಹೊಮ್ಮುವ ೧೧ ಕೆ.ವಿ. ಎಫ್೧ ಪಾರಾಣೆ ಮಾರ್ಗದಲ್ಲಿ ಫೀಡರ್ ನಿರ್ವಹಣೆ ಕಾಮಗಾರಿ ಕೈಗೊಂಡಿರುವುದರಿAದ ತಾ. ೨೫ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ಬಲಮುರಿ, ಪಾರಾಣೆ, ಬಾವಲಿ, ಕೈಕಾಡು, ಕಿರಂದಾಡು, ಎಡಪಾಲ, ಕಡಂಗ, ಚೆಯ್ಯಂಡಾಣೆ, ಚೇಲವಾರ, ಮರಂದೋಡ, ಕೋಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.