ಮಡಿಕೇರಿ, ನ.೨೪: ಕಿಕ್ಕಿರಿದು ಸೇರಿದ್ದ ಕಲಾಪ್ರೇಮಿಗಳ ಸಮ್ಮುಖದಲ್ಲಿ ಕನ್ನಡದ ಅಪೂರ್ವ ಗೀತೆಗಳ ಮಾಧುರ್ಯ ಅನಾವರಣಗೊಳ್ಳುತ್ತಿರುವಂತೆಯೇ ಕೇಳು ಗರು ಚಪ್ಪಾಳೆ ತಟ್ಟಿ, ತಲೆದೂಗಿ ಕನ್ನಡದ ಗೀತೆಗಳ ಸಾಹಿತ್ಯ, ಸಂಗೀತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ನಾಲ್ಕು ಗಂಟೆಗಳ ಕಾಲ ಮಧುರವಾದ ಗೀತೆಗಳು ಸಭಾಂಗಣದಲ್ಲಿ ಮಾರ್ಧನಿಸಿದವು.

ನಗರದ ರೆಡ್ ಬ್ರಿಕ್ಸ್ನ ಸತ್ಕಾರ್ ಸಭಾಂಗಣದಲ್ಲಿ ಕೊಡಗು ಪತ್ರಕರ್ತರ ಸಂಘ ಮತ್ತು ಮುಳಿಯ ಚಿನ್ನಾಭರಣಗಳ ಸಂಸ್ಥೆ ವತಿಯಿಂದ ಆಯೋಜಿತ “ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಗೀತಗಾಯನ'' ಕಾರ್ಯಕ್ರಮದಲ್ಲಿ ಜಿಲ್ಲೆಯಾದ್ಯಂತಲಿನ ೫೩ ಕಲಾವಿದರ ೩೩ ಹಾಡುಗಳು ಕಲಾಪ್ರೇಮಿಗಳ ಮನಸೂರೆಗೊಂಡವು.

ಕಾರ್ಯಕ್ರಮದಲ್ಲಿ ಕಲಾವಿದರಿಗೆ ಗೌರವಾರ್ಪಣೆ ನೆರವೇರಿಸಿ ಮಾತನಾಡಿದ ಮುಳಿಯ ಚಿನ್ನಾಭರಣ ಸಂಸ್ಥೆಯ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಭಾರತದಲ್ಲಿರುವವರೆಲ್ಲರೂ ಹೇಗೆ ಭಾರತೀಯರೋ ಹಾಗೇ ಕರ್ನಾಟಕದಲ್ಲಿರುವವರೆಲ್ಲರೂ ಕನ್ನಡಿಗರೇ ಆಗಿದ್ದಾರೆ. ಬೆಂಗಳೂರಿನAಥ ರಾಜಧಾನಿಯಲ್ಲಿ ಕನ್ನಡ ಉಳಿಸಿ ಎಂಬ ಕೂಗು ಹೆಚ್ಚಾಗುತ್ತಿರುವಾಗ ಮಡಿಕೇರಿಯಂಥ ಪುಟ್ಟ ನಗರಗಳಲ್ಲಿ ಕನ್ನಡದ ಮಹತ್ವ ಸಾರುವ ಕಾರ್ಯಕ್ರಮಗಳಿಗೆ ಅತ್ಯಧಿಕ ಕನ್ನಡ ಪ್ರೇಮಿಗಳು ಸೇರಿರುವುದು ಹೆಮ್ಮೆ ತಂದಿದೆ ಎಂದರು. ಕೊಡಗಿನ ಹವಾಗುಣ ಹಾಡುಗಾರರಿಗೆ ಕಷ್ಟಸಾಧ್ಯವಾಗಿದ್ದರೂ ಇಲ್ಲಿ ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿರುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಬಹುತೇಕರು ಬಾಲ್ಯದಿಂದಲೇ ಕೇಳಿ ಬೆಳೆದ ಉದಯ ವಾಗಲಿ ನಮ್ಮ ಚೆಲುವ ಕನ್ನಡ ನಾಡು ಗೀತೆಯನ್ನು ಹುಯಿಲಗೋಳ ನಾರಾಯಣವ್ ೪ಮೂರನೇ ಪುಟಕ್ಕೆ

(ಮೊದಲ ಪುಟದಿಂದ) ರಚಿಸಿ ೧೦೦ ವರ್ಷಗಳು ಸಂಪೂರ್ಣವಾದ ಹಿನ್ನಲೆಯಲ್ಲಿ ಈ ಗೀತೆಯ ಮಹತ್ವವನ್ನು ಸ್ಮರಿಸಿಕೊಳ್ಳಲು ಈ ಗೀತಗಾಯನ ಆಯೋಜಿಸಲಾಗಿದೆ ಎಂದರು. ಪ್ರಾಯೋಗಿಕ ಹಂತವಾಗಿ ಜಿಲ್ಲೆಯಾದ್ಯಂತಲಿನ ೫೩ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು ಭವಿಷ್ಯದಲ್ಲಿ ಮತ್ತಷ್ಟು ಕಲಾವಿದರಿಂದ ಇಂಥ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದೂ ಅನಿಲ್ ಹೇಳಿದರು.

ಹಿರಿಯ ಕಲಾವಿದ ಜಿ.ಚಿದ್ವಿಲಾಸ್ ಪ್ರಾಸ್ತಾವಿಕವಾಗಿ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪ್ರೋತ್ಸಾಹದ ಕೊರತೆ ಇದೆ ಎನ್ನುವುದನ್ನು ಈ ಕಾರ್ಯಕ್ರಮ ಸುಳ್ಳು ಮಾಡಿದೆ ಎಂದು ಹೇಳಿದರು. ಗೀತ ಗಾಯನ ಕಾರ್ಯಕ್ರಮಕ್ಕೆ ಜಿಲ್ಲೆಯಾದ್ಯಂತದಿAದ ಬಂದ ಹಲ ಸಂಖ್ಯೆಯ ಕನ್ನಡಾಭಿಮಾನಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಇಂದಿನ ಗೀತ ಗಾಯನ ಕಾರ್ಯಕ್ರಮವನ್ನು ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಅವರು ಆಯೋಜಿಸುವ ಮೂಲಕ, ಹಾಡುಗಾರರಲ್ಲದವರು ಕನ್ನಡಾಭಿಮಾನ ಮತ್ತು ಪ್ರೀತಿಯಿಂದ ಒಂದು ಒಳ್ಳೆಯ ಕಾರ್ಯಕ್ರಮವನ್ನು ಆಯೋಜಿಸಬಹುದೆಂಬುದನ್ನು ತೋರಿಸಿಕೊಟ್ಟಿದ್ದಾರೆಂದು ಅವರು ಸಂತಸ ವ್ಯಕ್ತಪಡಿಸಿದರು.

ಮುಳಿಯ ಜ್ಯುವೆಲ್ಲರಿ ಸಂಸ್ಥೆಯ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರು ತಮ್ಮ ಉದ್ಯಮವನ್ನು ಮೀರಿ, ಈ ನೆಲದ ಭಾಷಾ ಸಂಸ್ಕೃತಿ, ಧಾರ್ಮಿಕತೆಗಳ ಬಗ್ಗೆ ಒತ್ತು ನೀಡಿ ಸದಭಿರುಚಿಯ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುತ್ತಿರುವ ಬಗ್ಗೆ ಚಿದ್ವಿಲಾಸ್ ಮೆಚ್ಚುಗೆ ವ್ಯಕ್ತಪಡಿಸಿದರು.

ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ ವಂದಿಸಿದ ಕಾರ್ಯಕ್ರಮವನ್ನು ಸಂಘದ ನಿರ್ದೇಶಕ ರಂಜಿತ್ ಕವಲಪಾರ ಹಾಗೂ ಗಾಯತ್ರಿ ಚೆರಿಯಮನೆ ನಿರೂಪಿಸಿದರು. ಸಂಘದ ಸಲಹೆಗಾರರಾದ ಟಿ.ಪಿ. ರಮೇಶ್, ಬಿ.ಜಿ. ಅನಂತಶಯನ, ಖಜಾಂಚಿ ಟಿ.ಕೆ.ಸಂತೋಷ್, ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ವಿ. ರವಿಕುಮಾರ್, ಕುಶಾಲನಗರ ತಾಲೂಕು ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು, ವೀರಾಜಪೇಟೆ ತಾಲೂಕು ಸಂಘದ ಅಧ್ಯಕ್ಷ ಮುದೋಷ್ ಪೂವಯ್ಯ, ನಿರ್ದೇಶಕರು ಹಾಜರಿದ್ದರು. ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಗೀತಗಾಯನಕ್ಕೆ ಸಾಕ್ಷೀಕರಿಸಿದರು.

ಮನಸೆಳೆದ ಕಲಾವಿದರು

ಮೇಘಾ ಭಟ್ ನಿರ್ದೇಶನದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ಶಿಕ್ಷಕಿಯರ ತಂಡದಿAದ ಪ್ರಾರಂಭಿಕ ಗೀತೆಯಾಗಿ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಮೂಡಿಬಂದಾಗ ಕಲಾಪ್ರೇಮಿಗಳು ಎದ್ದು ನಿಂತು ಶತಮಾನದ ಹಾಡಿಗೆ ಗೌರವ ಸೂಚಿಸಿದರು. ವೇದಿಕೆಯಲ್ಲಿ ಹೆಸರಾಂತ ಕಲಾವಿದ ಬಿ.ಆರ್.ಸತೀಶ್ ಅವರು ಭುವನೇಶ್ವರಿಯ ಚಿತ್ರ ಬಿಡಿಸುವ ಮೂಲಕ ಮೆರುಗು ಹೆಚ್ಚಿಸಿದರು.

ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆಯ ಚಂದ್ರಶೇಖರ್ ಎಸ್.ವಿ (ಎಲ್ಲಾದರು ಇರು ಎಂತಾದರು ಇರು), ಕೆ.ಎಸ್. ಧನಂಜಯ (ಕಾಣದ ಕಡಲಿಗೆ ಹಂಬಲಿಸಿದೆ ಮನ), ಬಸವರಾಜು (ನಾವಾಡುವ ನುಡಿಯೇ ಕನ್ನಡ ನುಡಿ.) ಮಲ್ಲಪ್ಪ ಮುಸಿಗಿರಿ (ಜೇನಿನ ಹೊಳೆಯೋ.. ಹಾಲಿನ. ಮಳೆಯೋ), ಎಸ್. ಮಂಜುನಾಥ್. (ಹುಟ್ಟಿದರೆ ಕನ್ನಡ ನಾಡಲಿ ಹುಟ್ಟಬೇಕು), ಪೊನ್ನಂಪೇಟೆಯ ಶೋಭಾ ಶ್ರೀನಿವಾಸ್ (ಕೇಳಿಸದೇ ಕಲ್ಲು ಕಲ್ಲಿನಲಿ), ಎಚ್.ಎಸ್. ಸುಧೀರ್ (ಕರುನಾಡ ತಾಯೆ ಸದಾ ಚಿನ್ಮಯಿ) ವೀರಾಜಪೇಟೆಯ ಮೋಹನ್ ಟಿ.ಡಿ. ಮತ್ತು ಸುಪ್ರಿತಾ ದಿಲೀಪ್ (ನೀ ಮೀಟಿದ ನೆನಪೆಲ್ಲವು) ಕೃಷ್ಣವೇಣಿ ಮುಳಿಯ (ಇನ್ನಷ್ಟು ಬೇಕೆÀನ್ನ ಹೃದಯಕ್ಕೆ ರಾಮ), ಮಡಿಕೇರಿಯ ಮೆಹೆಖ್ ಫಾತಿಮ (ಇನ್ನೂ ಯಾಕ ಬರಲಿಲ್ಲ.. ಹುಬ್ಬಳ್ಳಿಯಂವ), ಸೋಮವಾರಪೇಟೆಯ ಜನಾರ್ಧನ್ (ಕಣಕಣ ದೇ ಶಾರದೆ), ಮಡಿಕೇರಿಯ ಜಿ.ಎನ್. ಶ್ರೀಹರಿ ರಾವ್ ( ಭಲೆ ಭಲೇ ಚೆಂದದ ಚೆಂದುಳ್ಳಿ) ಸೋಮವಾರಪೇಟೆಯ ಎಸ್.ಎ.ಮುರಳೀಧರ್ (ಬಂಗಾರ ನೀರ ಕಡಲಾಚೆಗಿದೆ) ಮಡಿಕೇರಿಯ ಸಂಧ್ಯಾ ಚಿದ್ವಿಲಾಸ್, ಅಲೆಮಾಡ ಚಿತ್ರಾ ನಂಜಪ್ಪ, ವಂದನಾ ಪೊನ್ನಪ್ಪ (ಹೂವು ಹೊರಳುವುದು ಸೂರ್ಯನ ಕಡೆಗೆ), ಮಡಿಕೇರಿಯ ಸಪ್ನಾ ಮಧುಕರ್ (ನಗು ಎಂದಿದೆ.. ಹೂವಿನ ಬಿಂದು), ವೀರಾಜಪೇಟೆಯ ಅಜಿತ್ ಪೂವಣ್ಣ (ಹಾಡೊಂದು ನಾ ಹಾಡುವೆನು), ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿ ತಂಡ (ಮಣ್ಣಲ್ಲಿ ಬಿದ್ದೋನು..), ಮಡಿಕೇರಿಯ ಮಲಿಹಾ ಫಾತಿಮ (ರೆಂಬೆ ಕೊಂಬೆ ಮೇಲೆ..), ಮಡಿಕೇರಿಯ ಜಿ. ಚಿದ್ವಿಲಾಸ್

( ಕೋಡಗನ ಕೋಳಿ ನುಂಗಿತ್ತಾ.), ಕುಶಾಲನಗರದ ಲೋಕೇಶ್ ಸಾಗರ್ (ಇದೇ ನಾಡು.. ಇದೇ ಭಾಷೆ), ವೀರಾಜಪೇಟೆಯ ಸುಪ್ರೀತಾ ದಿಲೀಪ್ (ಹೂವಿನ ಬಾಣದಂತೆ ಮೂಲಹಾಡು) ಮಡಿಕೇರಿಯ ಶೃತಿ ಲಯ ತಂಡ (ತೇರ ಏರಿ ಅಂಬರದಾಗೆ), ಬಾಳೆಲೆಯ ಅನ್ವಿತ್ ಕುಮಾರ್ ಸಿ.ವಿ. ( ಬೊಂಬೆ ಹೇಳುತೈತೆ..), ಸಮರ್ಥ ಕನ್ನಡಿಗರು ಸಂಸ್ಥೆ (ಕೂಡಿ ಬಾಳೋಣ.. ಎಂದೆAದೂ ಸೇರಿ ದುಡಿಯೋಣ), ಸೋಮವಾರಪೇಟೆಯ ಥೆರೇಸಾ ( ನಗಿಸಲು ನೀನು. ನಗುವೆನು ನಾನು.), ಮಡಿಕೇರಿಯ . ರವಿ ಪಿ.ಮತ್ತು ಮಮತಾ (ನಿಮ್ ಕಡೆ ಸಾಂಬಾರAದ್ರೆ ), ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆಯಿಂದ ಸಮೂಹ ಗೀತೆ - ಜೋಗದ ಸಿರಿ ಬೆಳಕಿನಲಿ, ತಿತಿಮತಿಯ ಪಿ. ಹೇಮಾ ( ಕೃಷ್ಣ ನೀ ಬೇಗನೆ ಬಾರೋ..), ಮಡಿಕೇರಿಯ ಟಿ.ಕೆ. ಸುಧೀರ್ ( ಎಲ್ಲಿರುವೆ ಮನವ ಕಾಡುವ ರೂಪಸಿಯೇ) ಸೋಮವಾರಪೇಟೆಯ ಪುರುಷೋತ್ತಮ್, (ಒಳಿತು ಮಾಡು ಮನುಜ), ಶರ್ಮಿಳಾ ರಮೇಶ್ ಸೋಮವಾರಪೇಟೆ (ನೀನಿಲ್ಲದೆ ನನಗೇನಿದೆ), ಮಡಿಕೇರಿಯ ಟಿ.ಜೆ. ಪ್ರವೀಣ್ ಕುಮಾರ್, (ಚೆಲ್ಲಿದರು ಮಲ್ಲಿಗೆಯ) ಗಾಯತ್ರಿ ಚೆರಿಯಮನೆ (ಆಕಾಶದಾಗೆ ಯಾರೋ ಮಾಯಗಾರನು.) ಹಾಡುಗಳು ಮನಸೆಳೆದವು.