ಕೋವರ್ಕೊಲ್ಲಿ ಇಂದ್ರೇಶ್
ಮೈಸೂರು, ನ. ೨೪: ಮೈಸೂರು ಜಿಲ್ಲೆಯಲ್ಲಿ ಹುಲಿ ಹಾಗೂ ಮಾನವ ಸಂಘರ್ಷದ ಕಾರಣದಿಂದ ಒಂದೇ ತಿಂಗಳಿನಲ್ಲಿ ಮೂವರು ಪ್ರಾಣ ಕಳೆದುಕೊಂಡ ಬೆನ್ನಲ್ಲೇ ರಾಜ್ಯ ಅರಣ್ಯ ಇಲಾಖೆ ಪ್ರವಾಸಿಗರ ಸಫಾರಿಯನ್ನು ತತ್ಕಾಲಿಕವಾಗಿ ಮುಚ್ಚಿದೆ. ಆದರೆ ಸರ್ಕಾರದ ಈ ನಿರ್ಧಾರ ಶಾಶ್ವತವೇನೂ ಆಗಿರಲಿಲ್ಲ ಏಕೆಂದರೆ ಈ ಸಫಾರಿಯನ್ನು ನಂಬಿಕೊAಡೇ ಸಾವಿರಾರು ಕುಟುಂಬಗಳು ಬದುಕುತ್ತಿವೆ; ಜನತೆಗೇ ಅರಣ್ಯ ಇಲಾಖೆ ತಿಂಗಳಿಗೆ ಒಂದು ಕೋಟಿ ರೂಪಾಯಿಗೂ ಅಧಿಕ ನಷ್ಟ ಅನುಭವಿಸುತ್ತಿದೆ.
ರಾಜ್ಯ ಟ್ರಾವೆಲ್ ಏಜೆಂಟ್ಸ್ ಅಸೋಸಿಯೇಷನ್ ಈಗಾಗಲೇ ರಾಜ್ಯದ ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ಮೈಸೂರು ಭೇಟಿಯಲ್ಲಿ ನಿಯೋಗದೊಂದಿಗೆ ತೆರಳಿ ಸಫಾರಿ ಪುನರಾರಂಭಿಸುವAತೆ ಮನವಿ ಮಾಡಿಕೊಂಡಿದೆ. ಅರಣ್ಯ ಸಚಿವ ಖಂಡ್ರೆ ಅವರೂ ಈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಈ ಹಿನ್ನೆಲೆಯಲ್ಲಿ ಡಿಸೆಂಬರ್ ಮೊದಲ ವಾರದಿಂದ ಮತ್ತೆ ಸಫಾರಿ ಆರಂಭಿಸಲು ಚಿಂತನೆ ನಡೆಸಲಾಗಿದೆ.
ರಾಜ್ಯದ ಜನಪ್ರಿಯ ಹಾಗೂ ಆಕರ್ಷಣೀಯ ದಟ್ಟ ಅರಣ್ಯಗಳಾದ ಬಂಡೀಪುರ ಮತ್ತು ನಾಗರಹೊಳೆ ಅಭಯಾರಣ್ಯಗಳು ಕಳೆದ ೧೫ ದಿನಗಳಿಂದ ಪ್ರವಾಸಿಗರ ಸುಳಿವೇ ಇಲ್ಲದೆ ಬಣಗುಡುತ್ತಿವೆ. ಪ್ರವಾಸಿಗರ ಹಾಟ್ಸ್ಪಾಟ್ ಹಾಗೂ ಪ್ರಕೃತಿ ಪ್ರಿಯರ ನೆಚ್ಚಿನ ತಾಣ, ರಾಜ್ಯದಲ್ಲಿ ಅತಿ ಹೆಚ್ಚು ಹುಲಿ, ಆನೆ, ಚಿರತೆ ಹೊಂದಿರುವ ಬಂಡೀಪುರ ಹಾಗೂ ನಾಗರಹೊಳೆ ಅಭಯಾರಣ್ಯಗಳು ನಿತ್ಯ ನೂರಾರು ಪ್ರಾಣಿ ಪ್ರಿಯರು ಮಕ್ಕಳನ್ನು ಆಕರ್ಷಿಸುತ್ತಿದ್ದವು. ಜನರು ಪ್ರಾಣಿಗಳ ದರ್ಶನದ ಜೊತೆಗೆ ಪ್ರಕೃತಿಯ ರಮ್ಯ ರಮಣೀಯತೆಯನ್ನು ಕಣ್ತುಂಬಿಕೊಳ್ಳುತ್ತಿದ್ದರು. ಇಲ್ಲಿಗೆ ಪ್ರವಾಸಿಗರು ರಾಜ್ಯದ ನಾನಾ ಭಾಗಗಳಿಂದಷ್ಟೇ ಅಲ್ಲದೆ ದೇಶದ ನಾನಾ ಭಾಗಗಳಿಂದಲೂ ಆಗಮಿಸುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಮೈಸೂರು, ಚಾಮರಾಜನಗರ ಭಾಗದಲ್ಲಿ ಹುಲಿ ದಾಳಿಯಿಂದ ರೈತರು ಸಾವನ್ನಪ್ಪುತ್ತಿರುವ ಪ್ರಕರಣ ಹೆಚ್ಚಳವಾಗಿತ್ತು. ಇದರಿಂದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಬಂಡೀಪುರ ಹಾಗೂ ನಾಗರಹೊಳೆ ಎರಡು ಕಡೆಯೂ ಸಫಾರಿ ನಿಷೇಧಿಸಿ, ಸಫಾರಿಗೆ ಬಳಕೆ ಮಾಡುತ್ತಿರುವ ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆ ಹಾಗೂ ಜಾಗೃತಿ ಮೂಡಿಸುವಂತೆ ಸೂಚನೆ ಕೊಟ್ಟಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ನಾಗರಹೊಳೆ ಅಭಯಾರಣ್ಯದ ಹಿರಿಯ ಅಧಿಕಾರಿಯೊಬ್ಬರು ಸಫಾರಿ ಆರಂಭಿಸುವAತೆ ಬಲವಾದ ಆಗ್ರಹ ಕೇಳಿಬಂದಿದೆ. ಇದು ಪ್ರವಾಸೋದ್ಯಮವನ್ನೇ ನಂಬಿಕೊAಡಿರುವ ನೂರಾರು ಕುಟುಂಬಗಳ ಬದುಕಿನ ಪ್ರಶ್ನೆಯೂ ಆಗಿದೆ. ಈಗಾಗಲೇ ಬಂಡೀಪುರದ ಕಾಡಂಚಿನ ಪ್ರದೇಶಗಳಲ್ಲಿ ಇದ್ದ ಹುಲಿಗಳನ್ನು ಸೆರೆಹಿಡಿಯುವ ಕೆಲಸ ಮಾಡಿದ್ದು ವಯಸ್ಸಾದ ಹುಲಿಗಳು ಬೇಟೆಯಾಡುವ ಶಕ್ತಿ ಇಲ್ಲದೆ ಸುಲಭ ಬೇಟೆ ಆಗಿರುವ ಮುನುಷ್ಯನನ್ನು ಕೊಲ್ಲಲು ಮುಂದಾಗಿ ನರಭಕ್ಷಕ ಆಗುತ್ತವೆ. ಈಗಾಗಲೇ ಅರಣ್ಯ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಗಮನಕ್ಕೆ ಈ ವಿಚಾರ ತಂದಿದ್ದು, ಶೀಘ್ರದಲ್ಲೇ ಸಫಾರಿ ಆರಂಭಿಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.