ಬೆಂಗಳೂರು, ಡಿ. ೩ : ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ ಅತ್ಯಾಧುನಿಕ ತಂತ್ರಜ್ಞಾನದ ಬಳಕೆ ಹಾಗೂ ಸಹಬಾಳ್ವೆಯಿಂದ ಮಾತ್ರ ಸಾಧ್ಯ ಎಂದು ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ನಲ್ಲಿ ಮಾತನಾಡಿದ ಸಚಿವರು, ಗಸ್ತು ಹೆಚ್ಚಳದ ಮೂಲಕ ಹಾಗೂ ಅರಣ್ಯದಂಚಿನ ಜನರಲ್ಲಿ ಸಹಬಾಳ್ವೆಯ ಬಗ್ಗೆ ಅರಿವು ಮೂಡಿಸುವ ಮೂಲಕ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದ್ದು, ಈ ನಿಟ್ಟಿನಲ್ಲಿ ಕಮಾಂಡ್ ಕೇಂದ್ರ ಒಂದು ಯಶಸ್ವೀ ಪರಿಹಾರ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಸ್ತುತ ನಾಗರಹೊಳೆ, ಎಂ.ಎA. ಹಿಲ್ಸ್, ಕಾಳಿ, ಕೊಡಗು ಸೇರಿ ನಾಲ್ಕು ಕಡೆಗಳಲ್ಲಿ ಕಮಾಂಡ್ ಕೇಂದ್ರ ಸಿದ್ಧವಾಗಿದ್ದು, ಸಿಬ್ಬಂದಿಗೆ ತರಬೇತಿಯನ್ನೂ ನೀಡಲಾಗಿದೆ. ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಿರುವ ಚಿಕ್ಕಮಗಳೂರು ವಿಭಾಗ, ಬನ್ನೇರುಘಟ್ಟ ರಾಷ್ಟಿçÃಯ ಉದ್ಯಾನ, ಮೈಸೂರು ವಿಭಾಗ, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶ ಹಾಗೂ ಹಾಸನ ವಲಯದಲ್ಲಿ ಕಮಾಂಡ್ ಸೆಂಟರ್ ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಬೆAಗಳೂರಿನ ಕೇಂದ್ರ ಕಚೇರಿಯಲ್ಲಿ ರಾಜ್ಯಮಟ್ಟದ ಕೇಂದ್ರ ಸಿದ್ಧವಾಗುತ್ತಿದ್ದು, ಅಧಿವೇಶನದ ನಂತರ ಇದನ್ನು ಉದ್ಘಾಟಿಸಲಾಗುವುದು ಎಂದು ಸಚಿವರು ತಿಳಿಸಿದರು.
ಕೃತಕ ಬುದ್ಧಿಮತ್ತೆಯ (ಎ.ಐ) ಕ್ಯಾಮರಾ, ಥರ್ಮಲ್ ಡ್ರೋನ್ ಕ್ಯಾಮರಾ ಇತ್ಯಾದಿಗಳನ್ನು ಬಳಸಿ ವನ್ಯಜೀವಿಗಳ ಚಲನವಲನದ ಬಗ್ಗೆ ನಿಗಾ ಇಟ್ಟು, ಯಾವ ಕಾಡಿನಂಚಿನ ಗ್ರಾಮದ ಬಳಿ ವನ್ಯಜೀವಿ ಇದೆ ಎಂಬ ಬಗ್ಗೆ ತಕ್ಷಣ ಮಾಹಿತಿ ನೀಡಿದರೆ ಅಮೂಲ್ಯ ಜೀವಹಾನಿ ತಡೆಯಬಹುದು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಕಚೇರಿಯಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಕಮಾಂಡ್ ಸೆಂಟರ್ ಮಾಹಿತಿ ನೀಡಿದ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ರಾಜನ್, ಈ ತಂತ್ರಾAಶದಲ್ಲಿ ಯಾವ ಸಿಬ್ಬಂದಿ ಎಷ್ಟು ಹೊತ್ತಿನಲ್ಲಿ ಯಾವ ವಲಯದಲ್ಲಿ ಗಸ್ತಿನಲ್ಲಿದ್ದರು ಎಂಬ ಮಾಹಿತಿ ಲಭಿಸಲಿದೆ. ಅದೇ ರೀತಿ ವನ್ಯಜೀವಿಗಳು ನಾಡಿನತ್ತ ಬಂದಾಗ ಸಕಾಲಿಕ ಮಾಹಿತಿ ಪಡೆದು ಕಾಡನಂಚಿನ ಜನರಿಗೆ ವಾಟ್ಸಾö್ಯಪ್ ಮತ್ತು ಇತರ ಮಾಧ್ಯಮಗಳ ಮೂಲಕ ಮಾಹಿತಿ ನೀಡಲು ಕಮಾಂಡ್ ಸೆಂಟರ್ ಮಹತ್ವದ ಪಾತ್ರ ವಹಿಸಲಿದೆ ಎಂದರು.
-ಬಿ.ಜಿ. ರವಿಕುಮಾರ್